<p><strong>ಶಿರಹಟ್ಟಿ/ಲಕ್ಷ್ಮೇಶ್ವರ</strong>: ‘ಮುಡಾ ಪ್ರಕರಣದಲ್ಲಿ ತಪ್ಪು ಮಾಡಿ, ಜಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣೆ ಪಡೆಯುವುದು ಬೇಡ. ತನಿಖೆ ಆಗುವವರೆಗೆ ಮತ್ತೊಬ್ಬ ಹಿಂದುಳಿದ ವರ್ಗಗಳ (ಒಬಿಸಿ) ಮುಖ್ಯಮಂತ್ರಿಯನ್ನು ನೇಮಿಸಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.</p>.<p>‘ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗೆ ಇಲ್ಲ. ರಾಜ್ಯದ ಜನ ಅವರಿಗೆ 136 ಸ್ಥಾನಗಳನ್ನು ನೀಡಿದ್ದಾರೆ. ನಾವು ಸರ್ಕಾರ ಕೆಡುವುವ ಪ್ರಯತ್ನ ಮಾಡುವುದಿಲ್ಲ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದರೂ ಕಾಂಗ್ರೆಸ್ ರಾಜ್ಯಪಾಲರ ವಿರುದ್ಧ ಹೋರಾಟಕ್ಕೆ ಮುಂದಾಗಿದೆ. ಇದು ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಪ್ರವೃತ್ತಿ. ತನ್ನ ಮೇಲೆ ಆರೋಪ ಕೇಳಿ ಬಂದಾಗ ಕಾಂಗ್ರೆಸ್ ಈ ರೀತಿ ಒತ್ತಡ ಹೇರುವ ತಂತ್ರ ಅನುಸರಿಸಿಕೊಂಡು ಬಂದಿರುವುದು ಎಲ್ಲರಿಗೂ ತಿಳಿದ ವಿಷಯ’ ಎಂದು ಹೇಳಿದರು.</p>.<p>‘ಹಂಸರಾಜ ಭಾರಧ್ವಾಜ್ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಯುಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ ಇದೇ ಸಿದ್ದರಾಮಯ್ಯನವರು ಬಿಎಸ್ವೈ ವಿರುದ್ಧ ಹೋರಾಟಕ್ಕೆ ಇಳಿದಿದ್ದರು. ಇದೀಗ ಅವರ ವಿರುದ್ಧವೂ ಆರೋಪ ಕೇಳಿ ಬಂದಿದ್ದು, ಅವರು ತನಿಖೆ ಎದುರಿಸಲಿ’ ಎಂದು ಹೇಳಿದರು. </p>.<p>ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ಕೊಡದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ‘2005–06ರಲ್ಲೇ ನಡೆದ ಪ್ರಕರಣ ಅದು. 2013ರಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. 2018ರಲ್ಲಿ ಅವರೇ ಕುಮಾರಸ್ವಾಮಿ ಅವರನ್ನು ಕರೆತಂದು ಮುಖ್ಯಮಂತ್ರಿ ಮಾಡಿದರು. ಜನ ಯಾವುದನ್ನೂ ಮರೆತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ/ಲಕ್ಷ್ಮೇಶ್ವರ</strong>: ‘ಮುಡಾ ಪ್ರಕರಣದಲ್ಲಿ ತಪ್ಪು ಮಾಡಿ, ಜಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣೆ ಪಡೆಯುವುದು ಬೇಡ. ತನಿಖೆ ಆಗುವವರೆಗೆ ಮತ್ತೊಬ್ಬ ಹಿಂದುಳಿದ ವರ್ಗಗಳ (ಒಬಿಸಿ) ಮುಖ್ಯಮಂತ್ರಿಯನ್ನು ನೇಮಿಸಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.</p>.<p>‘ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗೆ ಇಲ್ಲ. ರಾಜ್ಯದ ಜನ ಅವರಿಗೆ 136 ಸ್ಥಾನಗಳನ್ನು ನೀಡಿದ್ದಾರೆ. ನಾವು ಸರ್ಕಾರ ಕೆಡುವುವ ಪ್ರಯತ್ನ ಮಾಡುವುದಿಲ್ಲ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದರೂ ಕಾಂಗ್ರೆಸ್ ರಾಜ್ಯಪಾಲರ ವಿರುದ್ಧ ಹೋರಾಟಕ್ಕೆ ಮುಂದಾಗಿದೆ. ಇದು ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಪ್ರವೃತ್ತಿ. ತನ್ನ ಮೇಲೆ ಆರೋಪ ಕೇಳಿ ಬಂದಾಗ ಕಾಂಗ್ರೆಸ್ ಈ ರೀತಿ ಒತ್ತಡ ಹೇರುವ ತಂತ್ರ ಅನುಸರಿಸಿಕೊಂಡು ಬಂದಿರುವುದು ಎಲ್ಲರಿಗೂ ತಿಳಿದ ವಿಷಯ’ ಎಂದು ಹೇಳಿದರು.</p>.<p>‘ಹಂಸರಾಜ ಭಾರಧ್ವಾಜ್ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಯುಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ ಇದೇ ಸಿದ್ದರಾಮಯ್ಯನವರು ಬಿಎಸ್ವೈ ವಿರುದ್ಧ ಹೋರಾಟಕ್ಕೆ ಇಳಿದಿದ್ದರು. ಇದೀಗ ಅವರ ವಿರುದ್ಧವೂ ಆರೋಪ ಕೇಳಿ ಬಂದಿದ್ದು, ಅವರು ತನಿಖೆ ಎದುರಿಸಲಿ’ ಎಂದು ಹೇಳಿದರು. </p>.<p>ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ಕೊಡದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ‘2005–06ರಲ್ಲೇ ನಡೆದ ಪ್ರಕರಣ ಅದು. 2013ರಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. 2018ರಲ್ಲಿ ಅವರೇ ಕುಮಾರಸ್ವಾಮಿ ಅವರನ್ನು ಕರೆತಂದು ಮುಖ್ಯಮಂತ್ರಿ ಮಾಡಿದರು. ಜನ ಯಾವುದನ್ನೂ ಮರೆತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>