ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ‘ಸಾರ್ವಜನಿಕರಲ್ಲಿ ಕಾನೂನಿನ ನೆರವು ಅರಿವು ಕುರಿತು ಜಾಗೃತಿ ಮೂಡಿಸಲು ಕಾನೂನು ಸೇವೆಗಳ ಪ್ರಾಧಿಕಾರವು ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾನೂನು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಅರೆಕಾಲಿಕ ಸ್ವಯಂ ಸೇವಕರನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ನರಶಿಂಸಾ ಎಂ.ವಿ., ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಆನಂದ ಕೆ., ಎಸ್ಪಿ ಯತೀಶ್ ಎನ್., ರೋಟರಿ ಗದಗ ಸೆಂಟ್ರಲ್ ಅದ್ಯಕ್ಷ ರಾಜು ಕಂಟಿಗೊಣ್ಣವರ, ವಕೀಲರು, ಸ್ವಯಂ ಸೇವಕರು ಉಪಸ್ಥಿತರಿದ್ದರು.