<p><strong>ಗದಗ: </strong>‘ಸಾಕಷ್ಟು ಪದವೀಧರರು ಈಗಲೂ ನಿರುದ್ಯೋಗಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಅವರು ಉದ್ಯೋಗಿಗಳಾಗುವವರೆಗೆ ಭತ್ಯೆ ಒದಗಿಸಿಕೊಡಬೇಕು ಎಂಬುದು ಪ್ರಥಮ ಆದ್ಯತೆಯಾಗಿದೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಶಿವರಾಜ್ ಕಾಂಬಳೆ ಹೇಳಿದರು.</p>.<p>‘ಜನಪರ ಕಾರ್ಯ ಮಾಡಬೇಕು ಎನ್ನುವ ಉದ್ದೇಶದಿಂದ ಕೆ.ಆರ್.ಎಸ್. ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು,ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ ನೀಡುವಂತೆ ಒತ್ತಾಯಿಸುತ್ತೇನೆ’ ಎಂದು ಅವರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪದವೀಧರರ ಸಮಸ್ಯೆಗಳನ್ನು ಹತ್ತಿರದಿಂದ ನೋಡಿದ್ದೇನೆ. ನಾನು ಕೂಡ ನಿರುದ್ಯೋಗಿ ಪದವೀಧರನಾಗಿದ್ದು, ಸರ್ಕಾರದಿಂದ ಸಿಗಬೇಕಿರುವ ಸವಲತ್ತು ಒದಗಿಸಿಕೊಡಲು ಶ್ರಮಿಸುತ್ತೇನೆ’ ಎಂದು ಹೇಳಿದರು.</p>.<p>‘ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 80ರಷ್ಟು ಉದ್ಯೋಗ ನೀಡಬೇಕು ಎಂಬ ನಿಯಮ ಜಾರಿಗೆ ತರಲು ಹಾಗೂ ಸ್ವಯಂ ಉದ್ಯೋಗ ಮತ್ತು ಕರಕುಶಲ ಉದ್ಯೋಗಕ್ಕೆ ಬೇಕಾದ ಪೂರಕ ಸಾಲ ಮತ್ತು ತರಬೇತಿ ನೀಡಿ ನಿರುದ್ಯೋಗ ಹೋಗಲಾಡಿಸಲು ಯತ್ನಿಸುತ್ತೇನೆ’ ಎಂದು ತಿಳಿಸಿದರು.</p>.<p>‘20 ವರ್ಷಗಳ ಕಾಲ ವಾಟರ್ಮನ್ ಮತ್ತು ಸೆಕ್ಯುರಿಟಿ ಕೆಲಸ ಮಾಡಿ ಕೆಳಹಂತದಿಂದ ಮೇಲಕ್ಕೆ ಬಂದಿದ್ದೇನೆ. ನಿರುದ್ಯೋಗ ಸಮಸ್ಯೆಯನ್ನು ಹತ್ತಿರದಿಂದ ಗಮನಿಸಿದ್ದೇನೆ. ಎರಡು ವರ್ಷಗಳಿಂದ ಪದವೀಧರರ ಜತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದರೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಇಂದಿರಾ ಬಂಕಾಪುರ, ರವಿ ಒಡೆಯರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಸಾಕಷ್ಟು ಪದವೀಧರರು ಈಗಲೂ ನಿರುದ್ಯೋಗಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಅವರು ಉದ್ಯೋಗಿಗಳಾಗುವವರೆಗೆ ಭತ್ಯೆ ಒದಗಿಸಿಕೊಡಬೇಕು ಎಂಬುದು ಪ್ರಥಮ ಆದ್ಯತೆಯಾಗಿದೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಶಿವರಾಜ್ ಕಾಂಬಳೆ ಹೇಳಿದರು.</p>.<p>‘ಜನಪರ ಕಾರ್ಯ ಮಾಡಬೇಕು ಎನ್ನುವ ಉದ್ದೇಶದಿಂದ ಕೆ.ಆರ್.ಎಸ್. ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು,ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ ನೀಡುವಂತೆ ಒತ್ತಾಯಿಸುತ್ತೇನೆ’ ಎಂದು ಅವರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪದವೀಧರರ ಸಮಸ್ಯೆಗಳನ್ನು ಹತ್ತಿರದಿಂದ ನೋಡಿದ್ದೇನೆ. ನಾನು ಕೂಡ ನಿರುದ್ಯೋಗಿ ಪದವೀಧರನಾಗಿದ್ದು, ಸರ್ಕಾರದಿಂದ ಸಿಗಬೇಕಿರುವ ಸವಲತ್ತು ಒದಗಿಸಿಕೊಡಲು ಶ್ರಮಿಸುತ್ತೇನೆ’ ಎಂದು ಹೇಳಿದರು.</p>.<p>‘ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 80ರಷ್ಟು ಉದ್ಯೋಗ ನೀಡಬೇಕು ಎಂಬ ನಿಯಮ ಜಾರಿಗೆ ತರಲು ಹಾಗೂ ಸ್ವಯಂ ಉದ್ಯೋಗ ಮತ್ತು ಕರಕುಶಲ ಉದ್ಯೋಗಕ್ಕೆ ಬೇಕಾದ ಪೂರಕ ಸಾಲ ಮತ್ತು ತರಬೇತಿ ನೀಡಿ ನಿರುದ್ಯೋಗ ಹೋಗಲಾಡಿಸಲು ಯತ್ನಿಸುತ್ತೇನೆ’ ಎಂದು ತಿಳಿಸಿದರು.</p>.<p>‘20 ವರ್ಷಗಳ ಕಾಲ ವಾಟರ್ಮನ್ ಮತ್ತು ಸೆಕ್ಯುರಿಟಿ ಕೆಲಸ ಮಾಡಿ ಕೆಳಹಂತದಿಂದ ಮೇಲಕ್ಕೆ ಬಂದಿದ್ದೇನೆ. ನಿರುದ್ಯೋಗ ಸಮಸ್ಯೆಯನ್ನು ಹತ್ತಿರದಿಂದ ಗಮನಿಸಿದ್ದೇನೆ. ಎರಡು ವರ್ಷಗಳಿಂದ ಪದವೀಧರರ ಜತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದರೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಇಂದಿರಾ ಬಂಕಾಪುರ, ರವಿ ಒಡೆಯರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>