ಸ್ವತಃ ನಾಟಕಕಾರರೂ ಆಗಿದ್ದ ಹುಯಿಲಗೋಳ ನಾರಾಯಣರಾಯರು, ಕರ್ನಾಟಕ ಏಕೀಕರಣ ಚಳವಳಿಗೆ ದೊಡ್ಡ ಕೊಡುಗೆ ನೀಡಿದವರು. ಅವರು ರಚಿಸಿದ ಈ ನೆಲದ ಮೊದಲ ನಾಡಗೀತೆಯನ್ನು 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ, ಆಗಿನ್ನೂ ಬಾಲಕಿಯಾಗಿದ್ದ ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು.