ಪ್ರತಿಮೆ ಇಲ್ಲ: ಕನ್ನಡಕ್ಕಾಗಿ ಜೀವನ ಮುಡಿಪಾಗಿಟ್ಟ ಅಂದಾನಪ್ಪ ದೊಡ್ಡಮೇಟಿಯವರ ಹೆಸರು ಜನ ಮಾನಸದಲ್ಲಿ ನೆಲೆ ನಿಲ್ಲುವಂತೆ ಎಲ್ಲಿಯೂ ಅವರ ಪ್ರತಿಮೆ, ಸ್ಮಾರಕ, ಸಮುದಾಯ ಭವನವನ್ನು ಸರ್ಕಾರ ನಿರ್ಮಿಸಿಲ್ಲ. ಗದಗ, ಗಜೇಂದ್ರಗಡ, ರೋಣ ತಾಲ್ಲೂಕನಲ್ಲಿ ಉದ್ಯಾನ,ವೃತ್ತ, ಗ್ರಂಥಾಲಯ, ಸಾಹಿತ್ಯ ಭವನಗಳಿಗೆ ಇವರ ಹೆಸರು ಇಲ್ಲದಿರುವುದು ದುರದೃಷ್ಟಕರ ಸಂಗತಿ.ಅಂದಾನಪ್ಪ ದೊಡ್ಡಮೇಟಿ ಹಾಗೂ ಸರಳ ಸಾತ್ವಿಕ ಜೀವನ ನಡೆಸಿ ಹೆಸರಾಗಿದ್ದ ಸಾಹಿತಿ, ರಾಜಕಾರಿ ಜ್ಞಾನದೇವ ದೊಡ್ಡಮೇಟಿಯವರ ಸಮಾಧಿಗಳು ಸ್ಥಳೀಯ ಆಡಳಿತ, ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುಸ್ಥಿತಿಯಲ್ಲಿದ್ದು ಅನಾಥವಾಗಿವೆ.