<p><strong>ನರಗುಂದ</strong>: ‘ಕರ್ನಾಟಕದಲ್ಲಿ ಖಾಸಗಿ ಶಾಲೆಗಳ ಉಗಮದಿಂದ ಕನ್ನಡ ಶಾಲೆಗಳ ಸ್ಥಿತಿ ದಯನೀಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದಕರ ಸಂಗತಿ. ಕನ್ನಡ ಶಾಲೆ ಉಳಿಸುವ ಕಾರ್ಯ ಆಗಬೇಕಿದೆ’ ಎಮದು ಪದ್ಮಶ್ರೀ ಪುರಸ್ಕೃತ ಎ.ಆಯ್ ನಡಕಟ್ಟಿನ ಹೇಳಿದರು.</p>.<p>ತಾಲ್ಲೂಕಿನ ಭೈರನಹಟ್ಟಿಯ ದೊರೆಸ್ವಾಮಿ ವಿರಕ್ತಮಠದಲ್ಲಿ ಈಚೆಗೆ ನಡೆದ 374ನೇ ಮಾಸಿಕ ಶಿವಾನುಭವ ಹಾಗೂ ಶಿಕ್ಷಕಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ನಿವೃತ್ತ ಶಿಕ್ಷಕಿ ವಿಜಯಲಕ್ಷ್ಮಿ ಘಾಳಿ ಮಾತನಾಡಿದರು. ನಿವೃತ್ತ ಶಿಕ್ಷಕರು ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಶ್ರೀಮಠದಿಂದ ಸನ್ಮಾನಿಸಲಾಯಿತು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಫ್. ಮಜ್ಜಗಿ ಅಧ್ಯಕ್ಷತೆ ವಹಿಸಿದ್ದರು.</p>.<p>ಅರ್ಜುನ ಗೊಳಸಂಗಿ, ಜನಪದ ವಿದ್ವಾಂಸ ಮಲ್ಲಯ್ಯಸ್ವಾಮಿ ತೋಟಗಂಟಿ, ಗಂಗಾದರ ಘಾಳಿ, ಹನಮಂತಪ್ಪ ಸುಣಗದ, ಶಿಕ್ಷಕ ಈರಯ್ಯ ನಾಗಲೋಟಿಮಠ, ಮುಖ್ಯಶಿಕ್ಷಕ ಎಸ್.ಎಸ್. ಪಾಟೀಲ, ಚಂದ್ರಕಲಾ ನರಸಾಪೂರ, ಆರ್.ಬಿ. ಚಿನಿವಾಲರ, ಶಿಕ್ಷಕ ಅಮರೇಶ ತೆಗ್ಗಿನಮನಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ</strong>: ‘ಕರ್ನಾಟಕದಲ್ಲಿ ಖಾಸಗಿ ಶಾಲೆಗಳ ಉಗಮದಿಂದ ಕನ್ನಡ ಶಾಲೆಗಳ ಸ್ಥಿತಿ ದಯನೀಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದಕರ ಸಂಗತಿ. ಕನ್ನಡ ಶಾಲೆ ಉಳಿಸುವ ಕಾರ್ಯ ಆಗಬೇಕಿದೆ’ ಎಮದು ಪದ್ಮಶ್ರೀ ಪುರಸ್ಕೃತ ಎ.ಆಯ್ ನಡಕಟ್ಟಿನ ಹೇಳಿದರು.</p>.<p>ತಾಲ್ಲೂಕಿನ ಭೈರನಹಟ್ಟಿಯ ದೊರೆಸ್ವಾಮಿ ವಿರಕ್ತಮಠದಲ್ಲಿ ಈಚೆಗೆ ನಡೆದ 374ನೇ ಮಾಸಿಕ ಶಿವಾನುಭವ ಹಾಗೂ ಶಿಕ್ಷಕಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ನಿವೃತ್ತ ಶಿಕ್ಷಕಿ ವಿಜಯಲಕ್ಷ್ಮಿ ಘಾಳಿ ಮಾತನಾಡಿದರು. ನಿವೃತ್ತ ಶಿಕ್ಷಕರು ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಶ್ರೀಮಠದಿಂದ ಸನ್ಮಾನಿಸಲಾಯಿತು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಫ್. ಮಜ್ಜಗಿ ಅಧ್ಯಕ್ಷತೆ ವಹಿಸಿದ್ದರು.</p>.<p>ಅರ್ಜುನ ಗೊಳಸಂಗಿ, ಜನಪದ ವಿದ್ವಾಂಸ ಮಲ್ಲಯ್ಯಸ್ವಾಮಿ ತೋಟಗಂಟಿ, ಗಂಗಾದರ ಘಾಳಿ, ಹನಮಂತಪ್ಪ ಸುಣಗದ, ಶಿಕ್ಷಕ ಈರಯ್ಯ ನಾಗಲೋಟಿಮಠ, ಮುಖ್ಯಶಿಕ್ಷಕ ಎಸ್.ಎಸ್. ಪಾಟೀಲ, ಚಂದ್ರಕಲಾ ನರಸಾಪೂರ, ಆರ್.ಬಿ. ಚಿನಿವಾಲರ, ಶಿಕ್ಷಕ ಅಮರೇಶ ತೆಗ್ಗಿನಮನಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>