ಒಂದು ತಿಂಗಳ ಹಿಂದಷ್ಟೇ ಡಂಬಳ ಹೋಬಳಿ ವ್ಯಾಪ್ತಿಯ ಹಾರೂಗೇರಿ ಮತ್ತು ಹಿರೇವಡ್ಡಟ್ಟಿ ವ್ಯಾಪ್ತಿಯ ಕಪ್ಪತಗುಡ್ಡ ವನ್ಯಧಾಮದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಅಂದಾಜು 10 ಹೆಕ್ಟೇರ್ ಪ್ರದೇಶದಲ್ಲಿ ಒಣಗಿ ನಿಂತಿದ್ದ ಬಾದೆ ಹುಲ್ಲು ಸುಟ್ಟು ಭಸ್ಮವಾಗಿತ್ತು. ಈ ಗುಡ್ಡದಲ್ಲಿ ಸುಜ್ಲಾನ್ ಪವನ ವಿದ್ಯುತ್ ಕಂಪೆನಿಯ ವಿದ್ಯುತ್ ಕಂಬ ಇದ್ದು, ಶಾರ್ಟ್ ಸರ್ಕಿಟ್ನಿಂದ ಉಂಟಾದ ಕಿಡಿಯಿಂದ ಹುಲ್ಲಿಗೆ ಬೆಂಕಿ ಹತ್ತಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಸತತ 5 ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದರು.