ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಗದಗ: ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಗದ ‘ಬಜೆಟ್‌’ ಬಲ

ರೋಣದಲ್ಲಿ ಹೊಸ ಜಿಟಿಟಿಸಿ ಪ್ರಾರಂಭ ಘೋಷಣೆ: ಕೃಷಿ, ಕೈಗಾರಿಕಾ ಕ್ಷೇತ್ರಕ್ಕೆ ಸಿಗದ ಮನ್ನಣೆ
Published : 17 ಫೆಬ್ರುವರಿ 2024, 8:38 IST
Last Updated : 17 ಫೆಬ್ರುವರಿ 2024, 8:38 IST
ಫಾಲೋ ಮಾಡಿ
Comments
ಕಳಸಾ ಬಂಡೂರಿ: ತೊಡಕಿನ ಬಗ್ಗೆಯಷ್ಟೇ ಪ್ರಸ್ತಾಪ
ಗದಗ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಜಾಲವಾಡಗಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುವ ಭರವಸೆಯನ್ನಷ್ಟೇ ನೀಡಲಾಗಿದೆ. ಹಾಗೆಯೇ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ ಅನುಷ್ಠಾನಕ್ಕೆ ಇರುವ ತೊಡಕಿನ ಬಗ್ಗೆ ಮಾತ್ರ ಪ್ರಸ್ತಾಪಿಸಲಾಗಿದೆ. ‘ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗಳಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ವಿವರವಾದ ಯೋಜನಾ ವರದಿಗಳಿಗೆ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದೆ. ಪ್ರಸ್ತುತ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅರಣ್ಯ ತೀರುವಳಿ ನಿರೀಕ್ಷಿಸಿ ರಾಜ್ಯ ಸರ್ಕಾರವು ಟೆಂಡರ್‌ ಪ್ರಕ್ರಿಯೆ ಚಾಲನೆಗೊಳಿಸಿದೆ. ಆದರೆ ಈ ನಡುವೆ ಕೇಂದ್ರ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಅರಣ್ಯ ತೀರುವಳಿಯನ್ನು ಅನುಮೋದಿಸದೇ ಮುಂದೂಡಲಾಗಿದೆ’ ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.
ಜಿಮ್ಸ್‌ನಲ್ಲಿ ಸೂಪರ್‌ ಸ್ಪೆಷಾಲಿಟಿ ಕಾರ್ಡಿಕ್‌ ಯುನಿಟ್‌
ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆ ಒದಗಿಸುವ ಭರವಸೆಯೊಂದಿಗೆ 2025–26ನೇ ಸಾಲಿನಲ್ಲಿ ಗದಗ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (ಐಪಿಎಚ್‌ಎಲ್‌) ಸ್ಥಾಪಿಸುವುದಾಗಿ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಗದಗ ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಿದ್ದು ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ ₹150 ಕೋಟಿ ಒದಗಿಸುವುದು ಹಾಗೂ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕ್ಯಾಥಲ್ಯಾಬ್‌ ಸೌಲಭ್ಯದೊಂದಿಗೆ ಸೂಪರ್‌ ಸ್ಪೆಷಾಲಿಟಿ ಕಾರ್ಡಿಕ್‌ ಯುನಿಟ್‌ ಅನ್ನು ₹10 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT