<p><strong>ಗದಗ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026–27ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ ಮಂಡಿಸಲಿದ್ದು ಗದಗ ಜಿಲ್ಲೆಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಬಹುದು, ಎಷ್ಟು ಅನುದಾನ ನೀಡಬಹುದು ಎಂಬ ಕುತೂಹಲ ಜನರಲ್ಲಿ ಮನೆಮಾಡಿದೆ.</p>.<p>ಆದರೆ, ಹಿಂದಿನ ಎರಡು ವರ್ಷಗಳ ಬಜೆಟ್ಗ ಮೇಲೆ ಕಣ್ಣಾಡಿಸಿದರೆ ಜಿಲ್ಲೆಯ ಜನರನ್ನು ನಿರಾಸೆಯೇ ಹೆಚ್ಚು ಕಾಡಿದೆ. ಸಿಎಂ ಈ ಬಾರಿ ಮಂಡಿಸುವ ಬಜೆಟ್ನಲ್ಲಿಯಾದರೂ ಜನರ ನಿರಾಸೆ ತೊಡೆದುಹಾಕುವಂತಹ ಯೋಜನೆಗಳನ್ನು ಘೋಷಿಸುತ್ತಾರೆಯೇ ಅಥವಾ ಯಥಾಸ್ಥಿತಿ ಮುಂದುವರಿಯುವುದೇ ಎಂಬ ಪ್ರಶ್ನೆಗೆ ಶುಕ್ರವಾರವೇ ಉತ್ತರ ಸಿಗಲಿದೆ.</p>.<p><strong>ಘೋಷಣೆಯಾದ ಯೋಜನೆಗಳು ಪುಸ್ತಕಕ್ಕಷ್ಟೇ ಸೀಮಿತ:</strong></p>.<p>2024–25 ಹಾಗೂ 2025–26ನೇ ಸಾಲಿನ ಬಜೆಟ್ನಲ್ಲಿ ಸರ್ಕಾರ ಜಿಲ್ಲೆಗೆ ಘೋಷಣೆ ಮಾಡಿದ ಅನೇಕ ಯೋಜನೆಗಳು ಪುಸ್ತಕಕ್ಕೆ ಮಾತ್ರ ಸೀಮಿತವಾಗಿವೆ. ಅನುಷ್ಠಾನಗೊಂಡ ಯೋಜನೆಗಳ ಪಟ್ಟಿ ತುಂಬ ಕಡಿಮೆ ಇದೆ.</p>.<p>ಗದಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ₹804 ಕೋಟಿ ಅವಶ್ಯಕತೆ ಇದೆ ಎಂದು ತಜ್ಞರ ಸಮಿತಿ ವರದಿ ನೀಡಿತ್ತು. ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರ ವೈಯಕ್ತಿಕ ಆಸಕ್ತಿ ಮೇರೆಗೆ ಈ ಅಧ್ಯಯನ ನಡೆದಿತ್ತು. ಆದರೆ, 2024–25ನೇ ಸಾಲಿನ ಬಜೆಟ್ನಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಏನೂ ಸಿಗಲಿಲ್ಲ.</p>.<p>2025–26ನೇ ಸಾಲಿನ ಬಜೆಟ್ನಲ್ಲಿ ಐತಿಹಾಸಿಕ ಲಕ್ಕುಂಡಿಯಲ್ಲಿ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಸೌಕರ್ಯ ಒದಗಿಸಲಾಗುವುದು. ಪ್ರಾಚ್ಯಾವಶೇಷಗಳ ಸಂರಕ್ಷಣೆಗಾಗಿ ಬಯಲು ವಸ್ತುಸಂಗ್ರಹಾಲಯ ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿತ್ತು.</p>.<p>ಈ ಸಂಬಂಧ ಕಳೆದ ವರ್ಷದ ಲಕ್ಕುಂಡಿ ದೇವಾಲಯಗಳ ಸಂರಕ್ಷಣೆಗೆ ಸ್ವಲ್ಪ ಹಣ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕೆಲಸಗಳು ನಡೆದಿವೆ. ಆದರೆ, ಬಯಲು ವಸ್ತುಸಂಗ್ರಹಾಲಯ ನಿರ್ಮಾಣ ಕೆಲಸ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿಲ್ಲ. ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಅಲ್ಲಿ ಈವರೆಗೆ ದೊಡ್ಡ ಬದಲಾವಣೆಗಳು ಏನೂ ಆಗಿಲ್ಲ.</p>.<p>ರಾಜ್ಯದಲ್ಲಿ ಹೊಸದಾಗಿ ರಚನೆಯಾದ 63 ತಾಲ್ಲೂಕುಗಳ ಪೈಕಿ 2024–25ನೇ ಸಾಲಿನಲ್ಲಿ ಗಜೇಂದ್ರಗಡದಲ್ಲಿ ಪ್ರಜಾಸೌಧಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಪ್ರಜಾಸೌಧ ನಿರ್ಮಾಣಕ್ಕೆ ಶಾಸಕರು ಇತ್ತೀಚೆಗೆ ಭೂಮಿಪೂಜೆ ಮಾಡಿದ್ದು, ಕಾಮಗಾರಿ ಆರಂಭವಾಗಿದೆ. 2025–26ನೇ ಸಾಲಿನಲ್ಲಿ ಲಕ್ಷ್ಮೇಶ್ವರ ಪ್ರಜಾಸೌಧ ನಿರ್ಮಾಣ ಮಾಡುವುದಾಗಿ ತಿಳಿಸಲಾಗಿತ್ತು. ಆದರೆ, ಇನ್ನೂ ಜಾಗ ಕೂಡ ಗುರುತಿಸಿಲ್ಲ.</p>.<p>ಹೀಗೆ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಾಣವಾದ ತಾಲ್ಲೂಕುಗಳ ಸ್ಥಿತಿ ಸುಧಾರಿಸಿಲ್ಲ. ಪ್ರಜಾಸೌಧಗಳು ನಿರ್ಮಾಣವಾಗದ ಕಾರಣ ಜನರು ಕೆಲಸಕ್ಕಾಗಿ ಹಳೆ ತಾಲ್ಲೂಕುಗಳಿಗೆ ಅಲೆಯುವುದು ತಪ್ಪಿಲ್ಲ. ಶಿರಹಟ್ಟಿಯಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿ ಇನ್ನೂ ತೆವಳುತ್ತಿದೆ.</p>.<p>ರಾಜ್ಯ ವಿಪತ್ತು ಉಪಶಮನ ನಿಧಿ ಹಾಗೂ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿ ಅನುದಾನದ ಅಡಿ ರೋಣ ತಾಲ್ಲೂಕಿನ ಕೋಟುಮಚಗಿ ಗ್ರಾಮದಿಂದ ಕೊಪ್ಪಳ ಜಿಲ್ಲೆಯ ವೀರಾಪುರ ಗ್ರಾಮದವರೆಗೆ ಹಿರೇಹಳ್ಳದಲ್ಲಿ ಹೂಳೆತ್ತುವ ಮೂಲಕ ₹60 ಕೋಟಿ ವೆಚ್ಚದಲ್ಲಿ ಪ್ರವಾಹ ನಿಯಂತ್ರಣ ಕಾರ್ಯಕ್ರಮ ಇನ್ನೂ ನನೆಗುದಿಗೆ ಬಿದ್ದಿದೆ.</p>.<p>ಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದಲ್ಲಿ ಹೊಸ ಜಿಟಿಟಿಸಿ ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿತ್ತು. ಇದು ಕುಂಟುತ್ತ ಸಾಗಿದೆ. ₹350 ಕೋಟಿ ವೆಚ್ಚದಲ್ಲಿ ರಾಜ್ಯದ ಆರು ಕಡೆಗಳಲ್ಲಿ ರೈಲ್ವೆ ಮೇಲು ಹಾಗೂ ಕೆಳಸೇತುವೆಗಳ ನಿರ್ಮಾಣಕ್ಕೆ ಹಣ ಮೀಸಲಿಟ್ಟಿದ್ದು, ಈ ಪೈಕಿ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮಲ್ಲಾಪುರ ಕೂಡ ಸೇರಿತ್ತು. ಈ ಯೋಜನೆ ಕೂಡ ಪುಸ್ತಕದಲ್ಲೇ ಇದೆ.</p>.<p>ಉಳಿದಂತೆ ಕೆರೆ ತುಂಬಿಸುವ ಯೋಜನೆ, ರೈಲ್ವೆ ಯೋಜನೆಗಳು, ರಸ್ತೆ ಕಾಮಗಾರಿ, ಮಿನಿ ಜವಳಿ ಪಾರ್ಕ್ ಸೇರಿದಂತೆ ಹಲವು ಘೋಷಣೆಗಳು ಪುಸ್ತಕ ಬಿಟ್ಟು ಹೊರಬಂದಿಲ್ಲ. ಗದಗ ಜಿಲ್ಲೆ ಕೃಷಿ ಪ್ರಧಾನವಾಗಿದ್ದು, ಕೃಷಿ ಸಂಬಂಧಿತ ಕೈಗಾರಿಕೆಗಳನ್ನು ಸ್ಥಾಪನೆ ಮಾಡಬೇಕು ಎಂಬ ಕೂಗಿಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ.</p>.<p><strong>ಬಜೆಟ್ನಲ್ಲಿ ಜಿಲ್ಲಾ ಯೋಜನೆಗಳ ಕರಡು ಪ್ರತಿಗೆ ಸಿಗಬಹುದೇ ಮಾನ್ಯತೆ ?</strong> </p><p>2026–27ನೇ ಬಜೆಟ್ನಲ್ಲಿ ಪ್ರತಿ ಜಿಲ್ಲೆಗೆ ಏನು ಬೇಕು ಎಂಬುದನ್ನೇ ಜನರೇ ನಿರ್ಧರಿಸುವಂತಾಗಬೇಕು ಎಂಬ ಆಶಯದೊಂದಿಗೆ ಜಿಲ್ಲಾ ಯೋಜನಾ ಕರಡು ಪ್ರತಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಯೋಜನೆ ಅನುಸಾರ ಪ್ರತಿ ಗ್ರಾಮ ಸಭೆ ವಾರ್ಡ್ ಸಭೆ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಯಲ್ಲಿ ಸಭೆಗಳು ನಡೆದಿವೆ. ಜನರು ತಮ್ಮ ಊರಿಗೆ ಏನು ಪ್ರಮುಖವಾಗಿ ಆಗಬೇಕು ಎಂಬುದರ ಕುರಿತು ಅವರೇ ಮಾಹಿತಿ ನೀಡಿದ್ದು ಅದರ ಅನುಸಾರವಾಗಿ ಗದಗ ಜಿಲ್ಲೆ ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ತಯಾರುಗೊಂಡು ಸರ್ಕಾರಕ್ಕೆ ಮಂಡನೆಯಾಗಿದೆ. ಮಹಾತ್ಮ ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯ ನಿರ್ಮಾಣವಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಅಭಿವೃದ್ಧಿ ಆಗಬೇಕು. ಅದಕ್ಕೆ ತಳಮಟ್ಟದಿಂದಲೇ ಯೋಜನೆಗಳು ರೂಪುಗೊಳ್ಳಬೇಕು ಎಂಬ ಆಶಯಕ್ಕೆ ಈ ಬಾರಿ ಬಜೆಟ್ ಎಷ್ಟರ ಮಟ್ಟಿಗೆ ಸ್ಪಂದನೆ ಸಿಗಲಿದೆ ಎಂಬ ಕುತೂಹಲ ಜನರಲ್ಲಿ ಮನೆಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026–27ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ ಮಂಡಿಸಲಿದ್ದು ಗದಗ ಜಿಲ್ಲೆಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಬಹುದು, ಎಷ್ಟು ಅನುದಾನ ನೀಡಬಹುದು ಎಂಬ ಕುತೂಹಲ ಜನರಲ್ಲಿ ಮನೆಮಾಡಿದೆ.</p>.<p>ಆದರೆ, ಹಿಂದಿನ ಎರಡು ವರ್ಷಗಳ ಬಜೆಟ್ಗ ಮೇಲೆ ಕಣ್ಣಾಡಿಸಿದರೆ ಜಿಲ್ಲೆಯ ಜನರನ್ನು ನಿರಾಸೆಯೇ ಹೆಚ್ಚು ಕಾಡಿದೆ. ಸಿಎಂ ಈ ಬಾರಿ ಮಂಡಿಸುವ ಬಜೆಟ್ನಲ್ಲಿಯಾದರೂ ಜನರ ನಿರಾಸೆ ತೊಡೆದುಹಾಕುವಂತಹ ಯೋಜನೆಗಳನ್ನು ಘೋಷಿಸುತ್ತಾರೆಯೇ ಅಥವಾ ಯಥಾಸ್ಥಿತಿ ಮುಂದುವರಿಯುವುದೇ ಎಂಬ ಪ್ರಶ್ನೆಗೆ ಶುಕ್ರವಾರವೇ ಉತ್ತರ ಸಿಗಲಿದೆ.</p>.<p><strong>ಘೋಷಣೆಯಾದ ಯೋಜನೆಗಳು ಪುಸ್ತಕಕ್ಕಷ್ಟೇ ಸೀಮಿತ:</strong></p>.<p>2024–25 ಹಾಗೂ 2025–26ನೇ ಸಾಲಿನ ಬಜೆಟ್ನಲ್ಲಿ ಸರ್ಕಾರ ಜಿಲ್ಲೆಗೆ ಘೋಷಣೆ ಮಾಡಿದ ಅನೇಕ ಯೋಜನೆಗಳು ಪುಸ್ತಕಕ್ಕೆ ಮಾತ್ರ ಸೀಮಿತವಾಗಿವೆ. ಅನುಷ್ಠಾನಗೊಂಡ ಯೋಜನೆಗಳ ಪಟ್ಟಿ ತುಂಬ ಕಡಿಮೆ ಇದೆ.</p>.<p>ಗದಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ₹804 ಕೋಟಿ ಅವಶ್ಯಕತೆ ಇದೆ ಎಂದು ತಜ್ಞರ ಸಮಿತಿ ವರದಿ ನೀಡಿತ್ತು. ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರ ವೈಯಕ್ತಿಕ ಆಸಕ್ತಿ ಮೇರೆಗೆ ಈ ಅಧ್ಯಯನ ನಡೆದಿತ್ತು. ಆದರೆ, 2024–25ನೇ ಸಾಲಿನ ಬಜೆಟ್ನಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಏನೂ ಸಿಗಲಿಲ್ಲ.</p>.<p>2025–26ನೇ ಸಾಲಿನ ಬಜೆಟ್ನಲ್ಲಿ ಐತಿಹಾಸಿಕ ಲಕ್ಕುಂಡಿಯಲ್ಲಿ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಸೌಕರ್ಯ ಒದಗಿಸಲಾಗುವುದು. ಪ್ರಾಚ್ಯಾವಶೇಷಗಳ ಸಂರಕ್ಷಣೆಗಾಗಿ ಬಯಲು ವಸ್ತುಸಂಗ್ರಹಾಲಯ ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿತ್ತು.</p>.<p>ಈ ಸಂಬಂಧ ಕಳೆದ ವರ್ಷದ ಲಕ್ಕುಂಡಿ ದೇವಾಲಯಗಳ ಸಂರಕ್ಷಣೆಗೆ ಸ್ವಲ್ಪ ಹಣ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕೆಲಸಗಳು ನಡೆದಿವೆ. ಆದರೆ, ಬಯಲು ವಸ್ತುಸಂಗ್ರಹಾಲಯ ನಿರ್ಮಾಣ ಕೆಲಸ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿಲ್ಲ. ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಅಲ್ಲಿ ಈವರೆಗೆ ದೊಡ್ಡ ಬದಲಾವಣೆಗಳು ಏನೂ ಆಗಿಲ್ಲ.</p>.<p>ರಾಜ್ಯದಲ್ಲಿ ಹೊಸದಾಗಿ ರಚನೆಯಾದ 63 ತಾಲ್ಲೂಕುಗಳ ಪೈಕಿ 2024–25ನೇ ಸಾಲಿನಲ್ಲಿ ಗಜೇಂದ್ರಗಡದಲ್ಲಿ ಪ್ರಜಾಸೌಧಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಪ್ರಜಾಸೌಧ ನಿರ್ಮಾಣಕ್ಕೆ ಶಾಸಕರು ಇತ್ತೀಚೆಗೆ ಭೂಮಿಪೂಜೆ ಮಾಡಿದ್ದು, ಕಾಮಗಾರಿ ಆರಂಭವಾಗಿದೆ. 2025–26ನೇ ಸಾಲಿನಲ್ಲಿ ಲಕ್ಷ್ಮೇಶ್ವರ ಪ್ರಜಾಸೌಧ ನಿರ್ಮಾಣ ಮಾಡುವುದಾಗಿ ತಿಳಿಸಲಾಗಿತ್ತು. ಆದರೆ, ಇನ್ನೂ ಜಾಗ ಕೂಡ ಗುರುತಿಸಿಲ್ಲ.</p>.<p>ಹೀಗೆ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಾಣವಾದ ತಾಲ್ಲೂಕುಗಳ ಸ್ಥಿತಿ ಸುಧಾರಿಸಿಲ್ಲ. ಪ್ರಜಾಸೌಧಗಳು ನಿರ್ಮಾಣವಾಗದ ಕಾರಣ ಜನರು ಕೆಲಸಕ್ಕಾಗಿ ಹಳೆ ತಾಲ್ಲೂಕುಗಳಿಗೆ ಅಲೆಯುವುದು ತಪ್ಪಿಲ್ಲ. ಶಿರಹಟ್ಟಿಯಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿ ಇನ್ನೂ ತೆವಳುತ್ತಿದೆ.</p>.<p>ರಾಜ್ಯ ವಿಪತ್ತು ಉಪಶಮನ ನಿಧಿ ಹಾಗೂ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿ ಅನುದಾನದ ಅಡಿ ರೋಣ ತಾಲ್ಲೂಕಿನ ಕೋಟುಮಚಗಿ ಗ್ರಾಮದಿಂದ ಕೊಪ್ಪಳ ಜಿಲ್ಲೆಯ ವೀರಾಪುರ ಗ್ರಾಮದವರೆಗೆ ಹಿರೇಹಳ್ಳದಲ್ಲಿ ಹೂಳೆತ್ತುವ ಮೂಲಕ ₹60 ಕೋಟಿ ವೆಚ್ಚದಲ್ಲಿ ಪ್ರವಾಹ ನಿಯಂತ್ರಣ ಕಾರ್ಯಕ್ರಮ ಇನ್ನೂ ನನೆಗುದಿಗೆ ಬಿದ್ದಿದೆ.</p>.<p>ಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದಲ್ಲಿ ಹೊಸ ಜಿಟಿಟಿಸಿ ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿತ್ತು. ಇದು ಕುಂಟುತ್ತ ಸಾಗಿದೆ. ₹350 ಕೋಟಿ ವೆಚ್ಚದಲ್ಲಿ ರಾಜ್ಯದ ಆರು ಕಡೆಗಳಲ್ಲಿ ರೈಲ್ವೆ ಮೇಲು ಹಾಗೂ ಕೆಳಸೇತುವೆಗಳ ನಿರ್ಮಾಣಕ್ಕೆ ಹಣ ಮೀಸಲಿಟ್ಟಿದ್ದು, ಈ ಪೈಕಿ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮಲ್ಲಾಪುರ ಕೂಡ ಸೇರಿತ್ತು. ಈ ಯೋಜನೆ ಕೂಡ ಪುಸ್ತಕದಲ್ಲೇ ಇದೆ.</p>.<p>ಉಳಿದಂತೆ ಕೆರೆ ತುಂಬಿಸುವ ಯೋಜನೆ, ರೈಲ್ವೆ ಯೋಜನೆಗಳು, ರಸ್ತೆ ಕಾಮಗಾರಿ, ಮಿನಿ ಜವಳಿ ಪಾರ್ಕ್ ಸೇರಿದಂತೆ ಹಲವು ಘೋಷಣೆಗಳು ಪುಸ್ತಕ ಬಿಟ್ಟು ಹೊರಬಂದಿಲ್ಲ. ಗದಗ ಜಿಲ್ಲೆ ಕೃಷಿ ಪ್ರಧಾನವಾಗಿದ್ದು, ಕೃಷಿ ಸಂಬಂಧಿತ ಕೈಗಾರಿಕೆಗಳನ್ನು ಸ್ಥಾಪನೆ ಮಾಡಬೇಕು ಎಂಬ ಕೂಗಿಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ.</p>.<p><strong>ಬಜೆಟ್ನಲ್ಲಿ ಜಿಲ್ಲಾ ಯೋಜನೆಗಳ ಕರಡು ಪ್ರತಿಗೆ ಸಿಗಬಹುದೇ ಮಾನ್ಯತೆ ?</strong> </p><p>2026–27ನೇ ಬಜೆಟ್ನಲ್ಲಿ ಪ್ರತಿ ಜಿಲ್ಲೆಗೆ ಏನು ಬೇಕು ಎಂಬುದನ್ನೇ ಜನರೇ ನಿರ್ಧರಿಸುವಂತಾಗಬೇಕು ಎಂಬ ಆಶಯದೊಂದಿಗೆ ಜಿಲ್ಲಾ ಯೋಜನಾ ಕರಡು ಪ್ರತಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಯೋಜನೆ ಅನುಸಾರ ಪ್ರತಿ ಗ್ರಾಮ ಸಭೆ ವಾರ್ಡ್ ಸಭೆ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಯಲ್ಲಿ ಸಭೆಗಳು ನಡೆದಿವೆ. ಜನರು ತಮ್ಮ ಊರಿಗೆ ಏನು ಪ್ರಮುಖವಾಗಿ ಆಗಬೇಕು ಎಂಬುದರ ಕುರಿತು ಅವರೇ ಮಾಹಿತಿ ನೀಡಿದ್ದು ಅದರ ಅನುಸಾರವಾಗಿ ಗದಗ ಜಿಲ್ಲೆ ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ತಯಾರುಗೊಂಡು ಸರ್ಕಾರಕ್ಕೆ ಮಂಡನೆಯಾಗಿದೆ. ಮಹಾತ್ಮ ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯ ನಿರ್ಮಾಣವಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಅಭಿವೃದ್ಧಿ ಆಗಬೇಕು. ಅದಕ್ಕೆ ತಳಮಟ್ಟದಿಂದಲೇ ಯೋಜನೆಗಳು ರೂಪುಗೊಳ್ಳಬೇಕು ಎಂಬ ಆಶಯಕ್ಕೆ ಈ ಬಾರಿ ಬಜೆಟ್ ಎಷ್ಟರ ಮಟ್ಟಿಗೆ ಸ್ಪಂದನೆ ಸಿಗಲಿದೆ ಎಂಬ ಕುತೂಹಲ ಜನರಲ್ಲಿ ಮನೆಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>