ಸಾಹಿತಿ ಡಾ.ಜಿ.ಬಿ.ಪಾಟೀಲ ಮಾತನಾಡಿ, ‘ನಾಡದೇವತೆ ಚಿತ್ರವನ್ನು ಅಧಿಕೃತಗೊಳಿಸುವ ವಿಚಾರ ಹೋರಾಟದ ಸ್ವರೂಪಕ್ಕೆ ಹೋಗಬಾರದು ಎಂಬುದು ನಮ್ಮ ಇಚ್ಛೆ. ಹಾಗಾಗಿ, ಭುವನೇಶ್ವರಿ ಚಿತ್ರದ ಬಗ್ಗೆ ಚೆನ್ನಾಗಿ ಅರಿವಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಾರ್ವಜನಿಕ ಚರ್ಚೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿ ನಿರ್ಣಯ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.