ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ಬಗ್ಗೆ ಕ್ಯಾಬಿನೆಟ್ನಲ್ಲಿ ನಿರ್ಣಯ ತೆಗೆದುಕೊಳ್ಳಬೇಕು. ಕೊರೊನಾ ಸೋಂಕು ಕಡಿಮೆ ಆಗಿದೆ. ಆದರೆ, ಮಳೆಗಾಲ ಆರಂಭಗೊಂಡಿದೆ. ಇವುಗಳ ಸಾಧಕ ಬಾಧಕ ನೋಡಿಕೊಂಡು ಮುಂದಿನ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವ ವಿಶ್ವಾಸ ಇದೆ’ ಎಂದು ಹೇಳಿದರು.