<p><strong>ಗದಗ</strong>: ‘ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನವೆಂಬರ್ 1ರಂದು ನಡೆಯಬೇಕಿತ್ತು. ಹೊಸ ಮಾಹಿತಿ ಪ್ರಕಾರ, ನ್ಯಾಯಮೂರ್ತಿ ವಿಚಾರಣಾ ದಿನಾಂಕ 2024ರ ಜನವರಿಗೆ ಮುಂದೂಡಿದ್ದಾರೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>‘ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಅತ್ಯದ್ಭುತ ಸ್ಮಾರಕಗಳಿದ್ದು, ಅವುಗಳ ಸಂರಕ್ಷಣೆಗೆ ಸರ್ಕಾರದ ಜತೆಗೆ ಜನರೂ ಕೈಜೋಡಿಸಬೇಕು. ನಮ್ಮ ಸ್ಮಾರಕಗಳ ಸಂರಕ್ಷಣೆ ಮತ್ತು ದರ್ಶನಕ್ಕೆ ನವೆಂಬರ್ 6 ರಿಂದ 8ರವರೆಗೆ ರಾಜ್ಯ ಮಟ್ಟದ ಮೊದಲ ಹಂತದ ಅಧ್ಯಯನ ಪ್ರವಾಸ ಆರಂಭಿಸಲಾಗುವುದು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಸವಕಲ್ಯಾಣದಿಂದ ಅಧ್ಯಯನ ಪ್ರವಾಸ ಆರಂಭಗೊಳ್ಳಲಿದ್ದು, ನಂತರ ಭಾಲ್ಕಿ, ಬೀದರ್, ಕಲಬುರಗಿ, ಸೇಡಂ, ಶಹಾಪುರ ಮತ್ತು ಯಾದಗಿರಿಯ ಸ್ಮಾರಕಗಳನ್ನು ವೀಕ್ಷಣೆ ಮಾಡಲಾಗುವುದು. ಅವುಗಳ ಸಂರಕ್ಷಣೆಗೆ ಬೇಕಿರುವ ಯೋಜನೆ ರೂಪಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನವೆಂಬರ್ 1ರಂದು ನಡೆಯಬೇಕಿತ್ತು. ಹೊಸ ಮಾಹಿತಿ ಪ್ರಕಾರ, ನ್ಯಾಯಮೂರ್ತಿ ವಿಚಾರಣಾ ದಿನಾಂಕ 2024ರ ಜನವರಿಗೆ ಮುಂದೂಡಿದ್ದಾರೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>‘ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಅತ್ಯದ್ಭುತ ಸ್ಮಾರಕಗಳಿದ್ದು, ಅವುಗಳ ಸಂರಕ್ಷಣೆಗೆ ಸರ್ಕಾರದ ಜತೆಗೆ ಜನರೂ ಕೈಜೋಡಿಸಬೇಕು. ನಮ್ಮ ಸ್ಮಾರಕಗಳ ಸಂರಕ್ಷಣೆ ಮತ್ತು ದರ್ಶನಕ್ಕೆ ನವೆಂಬರ್ 6 ರಿಂದ 8ರವರೆಗೆ ರಾಜ್ಯ ಮಟ್ಟದ ಮೊದಲ ಹಂತದ ಅಧ್ಯಯನ ಪ್ರವಾಸ ಆರಂಭಿಸಲಾಗುವುದು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಸವಕಲ್ಯಾಣದಿಂದ ಅಧ್ಯಯನ ಪ್ರವಾಸ ಆರಂಭಗೊಳ್ಳಲಿದ್ದು, ನಂತರ ಭಾಲ್ಕಿ, ಬೀದರ್, ಕಲಬುರಗಿ, ಸೇಡಂ, ಶಹಾಪುರ ಮತ್ತು ಯಾದಗಿರಿಯ ಸ್ಮಾರಕಗಳನ್ನು ವೀಕ್ಷಣೆ ಮಾಡಲಾಗುವುದು. ಅವುಗಳ ಸಂರಕ್ಷಣೆಗೆ ಬೇಕಿರುವ ಯೋಜನೆ ರೂಪಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>