ಗದಗ: ‘ಮಾಧ್ಯಮಗಳ ತನಿಖಾ ವರದಿಯಿಂದ ಬಹಿರಂಗಗೊಂಡಿರುವ ಅಮೆಜಾನ್ ಬ್ರೈಬರಿ ಸ್ಕ್ಯಾಮ್ ಬಗ್ಗೆ ಪ್ರಧಾನಿ ಮೋದಿ ಅವರು ತುಟಿಬಿಚ್ಚುತ್ತಿಲ್ಲ. ₹8,586 ಕೋಟಿ ಹಣ ಯಾವ ರಾಜಕಾರಣಿ, ಅಧಿಕಾರಿಗಳಿಗೆ ಹೋಗಿದೆ? ಎಂಬ ಸತ್ಯ ಹೊರಬರಬೇಕು. ಅದಕ್ಕಾಗಿ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರ ನೇತೃತ್ವದಲ್ಲಿ ತಂಡ ರಚಿಸಿ, ಸಮಗ್ರ ತನಿಖೆ ನಡೆಸಬೇಕು’ ಎಂದು ಶಾಸಕ ಎಚ್.ಕೆ.ಪಾಟೀಲ ಒತ್ತಾಯಿಸಿದರು.