<p><strong>ಗದಗ</strong>: ‘ಕರ್ನಾಟಕ ರಾಜ್ಯೋತ್ಸವವು ಕೇವಲ ಒಂದು ಆಚರಣೆ ಅಲ್ಲ, ಇದು ಕನ್ನಡ ನಾಡಿನ ಏಕತೆ ಮತ್ತು ಗುರುತಿನ ಹಬ್ಬವಾಗಿದೆ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ. ನಾಡಗೌಡರ ಹೇಳಿದರು.</p>.<p>ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ರಾಷ್ಟ್ರೀಯ ಏಕೀಕರಣದ ಭಾಗವಾಗಿ ನಡೆದ ರಾಜ್ಯಗಳ ಭಾಷಾವಾರು ಪುನರ್ರಚನೆ ಕನ್ನಡಿಗರಿಗೆ ತಮ್ಮ ನಾಡಿನ ಹೆಮ್ಮೆ ಮತ್ತು ಭಾಷೆಯ ಗೌರವವನ್ನು ಮರಳಿ ನೀಡಿತು. ಕನ್ನಡ ಭಾಷೆ ಸಾಹಿತ್ಯ, ತತ್ವಜ್ಞಾನ ಮತ್ತು ಕಲೆಗಳ ಅಪಾರ ಸಂಪತ್ತನ್ನು ಹೊಂದಿದೆ. ಈ ಪರಂಪರೆಯನ್ನು ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮ ಕರ್ತವ್ಯ. ಯುವಕರು ಕನ್ನಡದ ಆತ್ಮವನ್ನು ಉಳಿಸಿಕೊಂಡು ರಾಷ್ಟ್ರಾಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯಬೇಕು’ ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಉಪನ್ಯಾಸಕ ಚಂದ್ರಪ್ಪ ಬಾರಂಗಿ, ‘ರಾಜ್ಯೋತ್ಸವವು ಕನ್ನಡಿಗರ ಸಂಸ್ಕೃತಿ, ಗೌರವ ಮತ್ತು ಸಹೋದರತ್ವದ ಪ್ರತೀಕವಾಗಿದೆ’ ಎಂದರು.</p>.<p>ಪ್ರೊ. ಅಭಯ್ ಕುಮಾರ್ ಗಸ್ತಿ, ಎಂ.ಬಿ. ಚನ್ನಪ್ಪಗೌಡರ ಉಪಸ್ಥಿತರಿದ್ದರು. ಪ್ರೊ. ಸಂಜಯ್ ಹಾರೋಬಿಡಿ ಸ್ವಾಗತಿಸಿದರು. </p>.<p>ವಿಶ್ವವಿದ್ಯಾಲಯದ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಕರ್ನಾಟಕ ರಾಜ್ಯೋತ್ಸವವು ಕೇವಲ ಒಂದು ಆಚರಣೆ ಅಲ್ಲ, ಇದು ಕನ್ನಡ ನಾಡಿನ ಏಕತೆ ಮತ್ತು ಗುರುತಿನ ಹಬ್ಬವಾಗಿದೆ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ. ನಾಡಗೌಡರ ಹೇಳಿದರು.</p>.<p>ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ರಾಷ್ಟ್ರೀಯ ಏಕೀಕರಣದ ಭಾಗವಾಗಿ ನಡೆದ ರಾಜ್ಯಗಳ ಭಾಷಾವಾರು ಪುನರ್ರಚನೆ ಕನ್ನಡಿಗರಿಗೆ ತಮ್ಮ ನಾಡಿನ ಹೆಮ್ಮೆ ಮತ್ತು ಭಾಷೆಯ ಗೌರವವನ್ನು ಮರಳಿ ನೀಡಿತು. ಕನ್ನಡ ಭಾಷೆ ಸಾಹಿತ್ಯ, ತತ್ವಜ್ಞಾನ ಮತ್ತು ಕಲೆಗಳ ಅಪಾರ ಸಂಪತ್ತನ್ನು ಹೊಂದಿದೆ. ಈ ಪರಂಪರೆಯನ್ನು ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮ ಕರ್ತವ್ಯ. ಯುವಕರು ಕನ್ನಡದ ಆತ್ಮವನ್ನು ಉಳಿಸಿಕೊಂಡು ರಾಷ್ಟ್ರಾಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯಬೇಕು’ ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಉಪನ್ಯಾಸಕ ಚಂದ್ರಪ್ಪ ಬಾರಂಗಿ, ‘ರಾಜ್ಯೋತ್ಸವವು ಕನ್ನಡಿಗರ ಸಂಸ್ಕೃತಿ, ಗೌರವ ಮತ್ತು ಸಹೋದರತ್ವದ ಪ್ರತೀಕವಾಗಿದೆ’ ಎಂದರು.</p>.<p>ಪ್ರೊ. ಅಭಯ್ ಕುಮಾರ್ ಗಸ್ತಿ, ಎಂ.ಬಿ. ಚನ್ನಪ್ಪಗೌಡರ ಉಪಸ್ಥಿತರಿದ್ದರು. ಪ್ರೊ. ಸಂಜಯ್ ಹಾರೋಬಿಡಿ ಸ್ವಾಗತಿಸಿದರು. </p>.<p>ವಿಶ್ವವಿದ್ಯಾಲಯದ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>