ಮುಂಡರಗಿ ಡಿಪೊದಲ್ಲಿ ಬಸ್ ಚಾಲಕರಾಗಿರುವ ತಾಲ್ಲೂಕಿನ ಹಿರೇವಡ್ಡಟ್ಟಿ ಗ್ರಾಮದ ವೀರಣ್ಣ ಸಂಗಪ್ಪ ಮೇಟಿ ಹತ್ತು ವರ್ಷಗಳಿಂದ ರಾಜ್ಯೋತ್ಸವದಂದು ಬಸ್ ಅನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿಶೇಷವಾಗಿ ಅಲಂಕರಿಸುತ್ತಾರೆ. ಈ ಬಾರಿ ₹50 ಸಾವಿರ ವ್ಯಯಿಸಿ 3.5 ಕ್ವಿಂಟಲ್ ಸೇವಂತಿ, ಗುಲಾಬಿ, ಮಲ್ಲಿಗೆ, ಚೆಂಡು ಹೂವು, ಕನಕಾಂಬರ ಬಳಸಿ ಬಸ್ನ ಹೊರಾಂಗಣ ಮತ್ತು ಒಳಾಂಗಣಗಳನ್ನು ಸುಂದರವಾಗಿ ಅಲಂಕರಿಸಿದ್ದರು.