ಗದುಗಿನ ವೀರನಾರಾಯಣ ದೇವಸ್ಥಾನದಿಂದ ಕಾಟನ್ ಸೇಲ್ ಸೊಸೈಟಿ ಆವರಣದವರೆಗೆ ನಡೆದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಪಾಲ್ಗೊಂಡರು
ಕನ್ನಡ ಪರಂಪರೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಕಾರ್ಯಕ್ರಮ ಇದು. ಆ ಜವಾಬ್ದಾರಿಯನ್ನು ಯುವಜನತೆ ಶ್ರದ್ಧೆಯಿಂದ ಮಾಡಬೇಕು.
–ಯು.ಟಿ.ಖಾದರ್ ವಿಧಾನಸಭಾಧ್ಯಕ್ಷ
ಕರ್ನಾಟಕ ಸಂಭ್ರಮ ವರ್ಷಪೂರ್ತಿ ನಡೆಯಲಿದೆ. ಬೆಂಗಳೂರಿನಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪಿಸಲಾಗುವುದು. ಕುಮಾರವ್ಯಾಸ ಭಾರತ’ ಮರು ಮುದ್ರಿಸಿ ಕಡಿಮೆ ಬೆಲೆ ಮಾರಾಟ ಮಾಡಲಾಗುವುದು.