ಸಭಾ ಕಾರ್ಯಕ್ರಮಕ್ಕೂ ಮುನ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು. ತರಬೇತಿ, ಪ್ರಕಟಣೆ ಹಾಗೂ ಮೇಲ್ವಿಚಾರಣೆ ಕೇಂದ್ರದ ಸಹಾಯಕ ನಿರ್ದೇಶಕ ಅಬ್ದುಲ್ ಅಜೀಜ್, ಆಡಳಿತಾಧಿಕಾರಿ ಶಶಿಭೂಷಣ, ವಿಶೇಷಾಧಿಕಾರಿ ಉಮೇಶ ಬಾರಕೇರ, ಎಂಎಸ್ಡಬ್ಲ್ಯು ವಿಭಾಗದ ಸಂಯೋಜಕಿ ಗೀತಾ ಬಂಗಾರಿ, ಎಂಎಸ್ಸಿ ವಿಭಾಗದ ಸಂಯೋಜಕ ಸುರೇಶ ಲಮಾಣಿ ಹಾಗೂ ವಿದ್ಯಾರ್ಥಿಗಳು ಮಾತನಾಡಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.