<p>ಕೆರೂರ: ಬನಶಂಕರಿ ದೇವಿ ಅವತರಿಸಿದ ದಿನದ ಅಂಗವಾಗಿ ಪಟ್ಟಣದ ಬನಶಂಕರಿ ದೇವಿ ದೇವಸ್ಥಾನದಲ್ಲಿ ಭಕ್ತರು ದೇವಿಯ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ಬನಶಂಕರಿ ದೇವಿಗೆ ಮಾವಿನ ಹಣ್ಣಿನ ಅಭಿಷೇಕ, ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು.</p>.<p>ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವಿಯ ಪಲ್ಲಕ್ಕಿ ಮೆರವಣಿಗೆ ನಡೆಯಿತು. ದೇವಸ್ಥಾನದ ಆವರಣದಲ್ಲಿ ಭಕ್ತರಿಗೆ ಮಾವಿನ ಹಣ್ಣಿನ ಶಿಕರಣಿ ಹಾಗೂ ಬುಂದೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p>.<p>ಸುಡು ಬಿಸಿಲು ಎನ್ನದೆ ಭಕ್ತರು ದೇವಿಯ ದರ್ಶನ ಪಡೆದು, ಪ್ರಸಾದದ ರುಚಿ ಸವಿದರು. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶಿವಾರ್ದ ಪಡೆದರು.</p>.<p>ದೇವಾಂಗ ಸಮಾಜದ ಅಧ್ಯಕ್ಷ ಸಂಕಣ್ಣ ಹೊಸಮನಿ, ದೇವಾಂಗಮಠದ ಮುದ್ದುಸಂಗ ಸ್ವಾಮೀಜಿ, ಅರ್ಚಕ ಯಂಕಣ್ಣ ಗುಡಿಸಾಗರ, ಶಿವಪ್ಪ ಹೆಬ್ಬಳ್ಳಿ, ಶಂಕ್ರಪ್ಪ ಗದಗಿನ, ರವಿ ಗದ್ದನಕೇರಿ, ಪುಂಡಲೀಕ ಕ್ವಾಣ್ಣೂರ, ಮಹೇಶ ಮುಗಳಿ, ಶರಣು ಶಜ್ಜನ, ಹನಮಂತ ಪ್ರಭಾಕರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-19-279795207</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆರೂರ: ಬನಶಂಕರಿ ದೇವಿ ಅವತರಿಸಿದ ದಿನದ ಅಂಗವಾಗಿ ಪಟ್ಟಣದ ಬನಶಂಕರಿ ದೇವಿ ದೇವಸ್ಥಾನದಲ್ಲಿ ಭಕ್ತರು ದೇವಿಯ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ಬನಶಂಕರಿ ದೇವಿಗೆ ಮಾವಿನ ಹಣ್ಣಿನ ಅಭಿಷೇಕ, ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು.</p>.<p>ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವಿಯ ಪಲ್ಲಕ್ಕಿ ಮೆರವಣಿಗೆ ನಡೆಯಿತು. ದೇವಸ್ಥಾನದ ಆವರಣದಲ್ಲಿ ಭಕ್ತರಿಗೆ ಮಾವಿನ ಹಣ್ಣಿನ ಶಿಕರಣಿ ಹಾಗೂ ಬುಂದೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p>.<p>ಸುಡು ಬಿಸಿಲು ಎನ್ನದೆ ಭಕ್ತರು ದೇವಿಯ ದರ್ಶನ ಪಡೆದು, ಪ್ರಸಾದದ ರುಚಿ ಸವಿದರು. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶಿವಾರ್ದ ಪಡೆದರು.</p>.<p>ದೇವಾಂಗ ಸಮಾಜದ ಅಧ್ಯಕ್ಷ ಸಂಕಣ್ಣ ಹೊಸಮನಿ, ದೇವಾಂಗಮಠದ ಮುದ್ದುಸಂಗ ಸ್ವಾಮೀಜಿ, ಅರ್ಚಕ ಯಂಕಣ್ಣ ಗುಡಿಸಾಗರ, ಶಿವಪ್ಪ ಹೆಬ್ಬಳ್ಳಿ, ಶಂಕ್ರಪ್ಪ ಗದಗಿನ, ರವಿ ಗದ್ದನಕೇರಿ, ಪುಂಡಲೀಕ ಕ್ವಾಣ್ಣೂರ, ಮಹೇಶ ಮುಗಳಿ, ಶರಣು ಶಜ್ಜನ, ಹನಮಂತ ಪ್ರಭಾಕರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-19-279795207</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>