<p><strong>ಕೆರೂರ</strong>: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಉಪಾಹಾರ ಗೃಹವು ತಿಂಗಳಿಂದ ಬಂದ್ ಆಗಿದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ.</p>.<p>ಬಸ್ ನಿಲ್ದಾಣವು ಹುಬ್ಬಳ್ಳಿ - ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಭಾಗದಲ್ಲಿರುವುದರಿಂದ ನಿತ್ಯ ನೂರಾರು ಬಸ್ಗಳು ಸಂಚರಿಸುತ್ತವೆ. ಸುತ್ತಮುತ್ತಲಿನ ಗ್ರಾಮೀಣ ಭಾಗಗಳಿಗೆ ಮುಖ್ಯ ಬಸ್ ನಿಲ್ದಾಣವಾಗಿದೆ.</p>.<p>ಒಂದು ತಿಂಗಳಿಂದ ಉಪಾಹಾರ ಗೃಹವು ಬಂದ್ ಆಗಿದ್ದು, ಇಲ್ಲಿ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಉಪಾಹಾರದ ತೊಂದರೆ ಉಂಟಾಗಿದೆ. ಉಪಾಹಾರ ಗೃಹವು ಮುಚ್ಚಿರುವುದರಿಂದ ಇಲಾಖೆಯು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.</p>.<p>ಸ್ಥಳೀಯ ಬಸ್ ನಿಲ್ದಾಣದಿಂದ ನಿತ್ಯ ಹುಬ್ಬಳ್ಳಿ- ಬಾಗಲಕೋಟೆ, ಹುಬ್ಬಳ್ಳಿ- ವಿಜಯಪುರ, ಮೀರಜ್, ಬಾದಾಮಿಗೆ ಬಸ್ಗಳು ಸಂಚರಿಸುತ್ತವೆ. ನಿಲ್ದಾಣದ ಉಪಾಹಾರ ಗೃಹ ಬಂದ್ ಆಗಿರುವುದರಿಂದ ಬಸ್ ಚಾಲಕರು ಹಾಗೂ ಪ್ರಯಾಣಿಕರು ಹೊರಗಿನ ಹೋಟೆಲ್ ಗಳಿಗೆ ಹೋಗುವುದು ಅನಿವಾರ್ಯವಾಗಿದೆ.</p>.<p>ಉಪಾಹಾರ ಗೃಹಕ್ಕೆ ತಿಂಗಳಿಗೆ ₹77 ಸಾವಿರಕ್ಕೆ ಟೆಂಡರ್ ಆಗಿತ್ತು. ಈ ವರ್ಷದ ಟೆಂಡರ್ನಲ್ಲಿ ಮೊದಲಿದ್ದ ಬಾಡಿಗೆ ದರಕ್ಕಿಂತ ಹೆಚ್ಚಿನ ಬಾಡಿಗೆಗೆ ಟೆಂಡರ್ ಕರೆಯಲಾಗಿದೆ. ಟೆಂಡರ್ನಲ್ಲಿ ಯಾರೂ ಭಾಗವಹಿಸಿದ್ದರಿಂದ ಉಪಾಹಾರ ಗೃಹ ಬಂದ್ ಆಗಿದೆ.</p>.<p>ಇಲಾಖೆಯ ಅಧಿಕಾರಿಗಳು ಕೇವಲ ಆದಾಯ ಮಾತ್ರ ನೋಡುತ್ತಿದ್ದಾರೆ. ಅವರಿಗೆ ಪ್ರಯಾಣಿಕರ ಸಂಕಟ ಮತ್ತು ಸಮಸ್ಯೆಗಳು ಕಾಣುತ್ತಿಲ್ಲ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಸ್ ನಿಲ್ದಾಣದಲ್ಲಿನ ಮೂಲ ಸೌಕರ್ಯಗಳು ಕೂಡ ಮಾಯವಾಗಿವೆ. ಬೇಸಿಗೆ ಆರಂಭವಾಗಿರುವುದರಿಂದ ಜನರಿಗೆ ನೀರಿನ ಅವಶ್ಯಕತೆ ಇದೆ. ನಿಲ್ದಾಣದಲ್ಲಿ ಹಣ ನಿಡಿ ನೀರಿನ ಬಾಟಲ್ ತೆಗೆದುಕೊಂಡು ನೀರಿನ ದಾಹ ತೀರಿಸಿಕೊಳ್ಳುವುದು ಅನಿವಾರ್ಯವಾಗಿದೆ.</p>.<p>ಬೇಸಿಗೆ ಆರಂಭವಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಬೇಗನೆ ಉಪಾಹಾರ ಗೃಹ ಆರಂಭಿಸಬೇಕು ಎಂದು ಪ್ರಯಾಣಿಕರು ಅಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-19-1091435107</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ</strong>: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಉಪಾಹಾರ ಗೃಹವು ತಿಂಗಳಿಂದ ಬಂದ್ ಆಗಿದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ.</p>.<p>ಬಸ್ ನಿಲ್ದಾಣವು ಹುಬ್ಬಳ್ಳಿ - ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಭಾಗದಲ್ಲಿರುವುದರಿಂದ ನಿತ್ಯ ನೂರಾರು ಬಸ್ಗಳು ಸಂಚರಿಸುತ್ತವೆ. ಸುತ್ತಮುತ್ತಲಿನ ಗ್ರಾಮೀಣ ಭಾಗಗಳಿಗೆ ಮುಖ್ಯ ಬಸ್ ನಿಲ್ದಾಣವಾಗಿದೆ.</p>.<p>ಒಂದು ತಿಂಗಳಿಂದ ಉಪಾಹಾರ ಗೃಹವು ಬಂದ್ ಆಗಿದ್ದು, ಇಲ್ಲಿ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಉಪಾಹಾರದ ತೊಂದರೆ ಉಂಟಾಗಿದೆ. ಉಪಾಹಾರ ಗೃಹವು ಮುಚ್ಚಿರುವುದರಿಂದ ಇಲಾಖೆಯು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.</p>.<p>ಸ್ಥಳೀಯ ಬಸ್ ನಿಲ್ದಾಣದಿಂದ ನಿತ್ಯ ಹುಬ್ಬಳ್ಳಿ- ಬಾಗಲಕೋಟೆ, ಹುಬ್ಬಳ್ಳಿ- ವಿಜಯಪುರ, ಮೀರಜ್, ಬಾದಾಮಿಗೆ ಬಸ್ಗಳು ಸಂಚರಿಸುತ್ತವೆ. ನಿಲ್ದಾಣದ ಉಪಾಹಾರ ಗೃಹ ಬಂದ್ ಆಗಿರುವುದರಿಂದ ಬಸ್ ಚಾಲಕರು ಹಾಗೂ ಪ್ರಯಾಣಿಕರು ಹೊರಗಿನ ಹೋಟೆಲ್ ಗಳಿಗೆ ಹೋಗುವುದು ಅನಿವಾರ್ಯವಾಗಿದೆ.</p>.<p>ಉಪಾಹಾರ ಗೃಹಕ್ಕೆ ತಿಂಗಳಿಗೆ ₹77 ಸಾವಿರಕ್ಕೆ ಟೆಂಡರ್ ಆಗಿತ್ತು. ಈ ವರ್ಷದ ಟೆಂಡರ್ನಲ್ಲಿ ಮೊದಲಿದ್ದ ಬಾಡಿಗೆ ದರಕ್ಕಿಂತ ಹೆಚ್ಚಿನ ಬಾಡಿಗೆಗೆ ಟೆಂಡರ್ ಕರೆಯಲಾಗಿದೆ. ಟೆಂಡರ್ನಲ್ಲಿ ಯಾರೂ ಭಾಗವಹಿಸಿದ್ದರಿಂದ ಉಪಾಹಾರ ಗೃಹ ಬಂದ್ ಆಗಿದೆ.</p>.<p>ಇಲಾಖೆಯ ಅಧಿಕಾರಿಗಳು ಕೇವಲ ಆದಾಯ ಮಾತ್ರ ನೋಡುತ್ತಿದ್ದಾರೆ. ಅವರಿಗೆ ಪ್ರಯಾಣಿಕರ ಸಂಕಟ ಮತ್ತು ಸಮಸ್ಯೆಗಳು ಕಾಣುತ್ತಿಲ್ಲ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಸ್ ನಿಲ್ದಾಣದಲ್ಲಿನ ಮೂಲ ಸೌಕರ್ಯಗಳು ಕೂಡ ಮಾಯವಾಗಿವೆ. ಬೇಸಿಗೆ ಆರಂಭವಾಗಿರುವುದರಿಂದ ಜನರಿಗೆ ನೀರಿನ ಅವಶ್ಯಕತೆ ಇದೆ. ನಿಲ್ದಾಣದಲ್ಲಿ ಹಣ ನಿಡಿ ನೀರಿನ ಬಾಟಲ್ ತೆಗೆದುಕೊಂಡು ನೀರಿನ ದಾಹ ತೀರಿಸಿಕೊಳ್ಳುವುದು ಅನಿವಾರ್ಯವಾಗಿದೆ.</p>.<p>ಬೇಸಿಗೆ ಆರಂಭವಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಬೇಗನೆ ಉಪಾಹಾರ ಗೃಹ ಆರಂಭಿಸಬೇಕು ಎಂದು ಪ್ರಯಾಣಿಕರು ಅಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-19-1091435107</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>