<p><strong>ಗದಗ:</strong> ‘ವಿದ್ಯಾರ್ಥಿಗಳು ಜೀವನದ ಮುಂದಿನ ಹಂತಕ್ಕೆ ಕಾಲಿಡುವ ಈ ಸಂದರ್ಭದಲ್ಲಿ ಜ್ಞಾನ, ಕೌಶಲ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜದ ಸೇವೆಗೆ ಬಳಸಬೇಕಾಗಿದೆ. ಈ ವಿಶ್ವವಿದ್ಯಾಲಯ ನಿಮ್ಮ ಬದುಕಿನಲ್ಲಿ ಶಾಶ್ವತ ಸ್ಫೂರ್ತಿಯಾಗಿ ಉಳಿಯಲಿ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ. ನಾಡಗೌಡರ ಹೇಳಿದರು.</p>.<p>ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದಲ್ಲಿ 2023–25ನೇ ಸಾಲಿನ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಸವಿನೆನಪು’ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಬಸವರಾಜ ಲಕ್ಕಣ್ಣವರ ಮಾತನಾಡಿ, ‘ಯುವಕರು ಶಿಸ್ತು ಮತ್ತು ನಿಶ್ಚಿತ ಗುರಿಯೊಂದಿಗೆ ಮುಂದೆ ಸಾಗಿದಾಗ ಯಶಸ್ಸು ಸಿಗುತ್ತದೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಭಾಗವಾಗಿ ವಿಶ್ವವಿದ್ಯಾಲಯದ ವಿವಿಧ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪ್ರಮಾಣಪತ್ರಗಳನ್ನು ವಿತರಿಸಲಾಯಿತು.</p>.<p>ಪ್ರೊ. ಅಬ್ದುಲ್ ಅಜೀಜ್ ಮುಲ್ಲ, ಪ್ರೊ. ಗಿರೀಶ್ ದೀಕ್ಷಿತ್, ಮೃತ್ಯುಂಜಯ ಮೆಣಸಿನಕಾಯಿ, ವಿಶೇಷ ಅಧಿಕಾರಿ ಉಮೇಶ್ ಬಾರಕೇರ ವೇದಿಕೆಯಲ್ಲಿದ್ದರು. </p>.<p>ಸಮಾಜಕಾರ್ಯ ವಿಭಾಗದ ಕಾರ್ಯಕ್ರಮ ಸಂಯೋಜಕ ಸೋಮಲಿಂಗ ಕರಣಿ, ವಿಶೇಷಾಧಿಕಾರಿ ಮಂಜುನಾಥ ಚೆನ್ನಪ್ಪಗೌಡರ, ಸಾರ್ವಜನಿಕ ಆರೋಗ್ಯ ವಿಭಾಗದ ಕಾರ್ಯಕ್ರಮ ಸಂಯೋಜಕಿ ಪ್ರೊ. ಅರ್ಚನಾ ಎನ್.ಎಲ್. ಬೀಳ್ಕೊಡುಗೆ ಸಮಾರಂಭವನ್ನು ಸಂಯೋಜಿಸಿದ್ದರು.</p>.<p>ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><blockquote>ವಿದ್ಯಾಭ್ಯಾಸ ಎನ್ನುವುದು ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಲ್ಲ ಕಲಿತ ಜ್ಞಾನವನ್ನು ಸಮಾಜದ ಪರಿವರ್ತನೆಗೆ ಬಳಸುವ ಜವಾಬ್ದಾರಿಯಾಗಿದೆ </blockquote><span class="attribution">–ಪ್ರೊ. ವಿಷ್ಣುಕಾಂತ ಎಸ್.ಚಟಪಲ್ಲಿ ವಿಶ್ರಾಂತ ಕುಲಪತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ವಿದ್ಯಾರ್ಥಿಗಳು ಜೀವನದ ಮುಂದಿನ ಹಂತಕ್ಕೆ ಕಾಲಿಡುವ ಈ ಸಂದರ್ಭದಲ್ಲಿ ಜ್ಞಾನ, ಕೌಶಲ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜದ ಸೇವೆಗೆ ಬಳಸಬೇಕಾಗಿದೆ. ಈ ವಿಶ್ವವಿದ್ಯಾಲಯ ನಿಮ್ಮ ಬದುಕಿನಲ್ಲಿ ಶಾಶ್ವತ ಸ್ಫೂರ್ತಿಯಾಗಿ ಉಳಿಯಲಿ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ. ನಾಡಗೌಡರ ಹೇಳಿದರು.</p>.<p>ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದಲ್ಲಿ 2023–25ನೇ ಸಾಲಿನ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಸವಿನೆನಪು’ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಬಸವರಾಜ ಲಕ್ಕಣ್ಣವರ ಮಾತನಾಡಿ, ‘ಯುವಕರು ಶಿಸ್ತು ಮತ್ತು ನಿಶ್ಚಿತ ಗುರಿಯೊಂದಿಗೆ ಮುಂದೆ ಸಾಗಿದಾಗ ಯಶಸ್ಸು ಸಿಗುತ್ತದೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಭಾಗವಾಗಿ ವಿಶ್ವವಿದ್ಯಾಲಯದ ವಿವಿಧ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪ್ರಮಾಣಪತ್ರಗಳನ್ನು ವಿತರಿಸಲಾಯಿತು.</p>.<p>ಪ್ರೊ. ಅಬ್ದುಲ್ ಅಜೀಜ್ ಮುಲ್ಲ, ಪ್ರೊ. ಗಿರೀಶ್ ದೀಕ್ಷಿತ್, ಮೃತ್ಯುಂಜಯ ಮೆಣಸಿನಕಾಯಿ, ವಿಶೇಷ ಅಧಿಕಾರಿ ಉಮೇಶ್ ಬಾರಕೇರ ವೇದಿಕೆಯಲ್ಲಿದ್ದರು. </p>.<p>ಸಮಾಜಕಾರ್ಯ ವಿಭಾಗದ ಕಾರ್ಯಕ್ರಮ ಸಂಯೋಜಕ ಸೋಮಲಿಂಗ ಕರಣಿ, ವಿಶೇಷಾಧಿಕಾರಿ ಮಂಜುನಾಥ ಚೆನ್ನಪ್ಪಗೌಡರ, ಸಾರ್ವಜನಿಕ ಆರೋಗ್ಯ ವಿಭಾಗದ ಕಾರ್ಯಕ್ರಮ ಸಂಯೋಜಕಿ ಪ್ರೊ. ಅರ್ಚನಾ ಎನ್.ಎಲ್. ಬೀಳ್ಕೊಡುಗೆ ಸಮಾರಂಭವನ್ನು ಸಂಯೋಜಿಸಿದ್ದರು.</p>.<p>ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><blockquote>ವಿದ್ಯಾಭ್ಯಾಸ ಎನ್ನುವುದು ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಲ್ಲ ಕಲಿತ ಜ್ಞಾನವನ್ನು ಸಮಾಜದ ಪರಿವರ್ತನೆಗೆ ಬಳಸುವ ಜವಾಬ್ದಾರಿಯಾಗಿದೆ </blockquote><span class="attribution">–ಪ್ರೊ. ವಿಷ್ಣುಕಾಂತ ಎಸ್.ಚಟಪಲ್ಲಿ ವಿಶ್ರಾಂತ ಕುಲಪತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>