ಕಂಜರ್ ಭಾಟ್ ಸಮುದಾಯದ ಜನರು ತೊಟ್ಟಿಲಲ್ಲಿ ಪವಡಿಸಿದ್ದ ಶ್ರೀಕೃಷ್ಣನನ್ನು ಮಂಗಳವಾರ ಬೆಳಿಗ್ಗೆ ಭಜನೆ ಮೂಲಕ ಕೃಷ್ಣನನ್ನು ಎಚ್ಚರಿಸಿದರು. ನೃತ್ಯ ಭಜನೆ ಮೂಲಕ ಕೃಷ್ಣನಿಗೆ ಬೆಳಗಿನ ವಂದನೆ ಸಲ್ಲಿಸಿದರು. ಬಳಿಕ ದಿಂಡಿಯಾತ್ರೆ ಮಾಡುತ್ತಾ ಓಣಿಯಲ್ಲಿ ಕೃಷ್ಣನನ್ನು ಮೆರೆಸಿದರು. ರಾಧೆ ವೇಷದಲ್ಲಿದ್ದ ಯುವತಿಯರು, ಕೃಷ್ಣರಾಗಿದ್ದ ಪುಟಾಣಿ ಮಕ್ಕಳು ಮೆರವಣಿಗೆಯ ಮೆರುಗು ಹೆಚ್ಚಿಸಿದರು. ಬಳಿಕ ಯುವಕರು ಮಕ್ಕಳು ಮೊಸರು ಕುಡಿಕೆ ಒಡೆದು ಸಂಭ್ರಮಿಸಿದರು.