‘ಕುರುಬರು ದೇಶದ ಮೂಲನಿವಾಸಿಗಳು. ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಎಲ್ಲ ಅರ್ಹತೆಗಳೂ ಈ ಸಮುದಾಯಕ್ಕೆ ಇದೆ. ಹಿಂದಿನವರ ನಿರ್ಲಕ್ಷ್ಯ ಧೋರಣೆಯಿಂದಾಗಿ ಸಮುದಾಯದ ಈಗಿನ ಜನರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸಮುದಾಯದ ರಾಜಕೀಯ ನಾಯಕರೆಲ್ಲರೂ ಪಕ್ಷಭೇದ ಮರೆತು ಕುರುಬ ಸಮಾಜದ ಹಕ್ಕಿಗಾಗಿ ಹೋರಾಟ ಮಾಡಬೇಕು. ದಶಕಗಳ ಹೋರಾಟಕ್ಕೆ ಅಂತಿಮ ರೂಪ ನೀಡಲು ಎಲ್ಲರೂ ಒಗ್ಗೂಡಬೇಕು’ ಎಂದು ಅವರು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.