ಯೋಜನೆ ಜಾರಿ ಆಗಿ ನಾಲ್ಕೈದು ತಿಂಗಳು ಕಳೆಯುತ್ತ ಬಂದರೂ ಪರಿಸ್ಥಿತಿ ಸುಧಾರಿಸುವ ಬದಲು ಮತ್ತಷ್ಟು ಸಂಕೀರ್ಣವಾಗುತ್ತಿದೆ. ಲಕ್ಷ್ಮೇಶ್ವರದ ಸಾರಿಗೆ ಘಟಕದಿಂದ ಸಂಚರಿಸುವ ಎಲ್ಲ ಬಸ್ಗಳಲ್ಲೂ ಜನರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆಸನಕ್ಕಾಗಿ ಕಚ್ಚಾಟ, ನೂಕಾಟ, ತಳ್ಳಾಟ ಕೊನೆಗೆ ಹೊಡೆದಾಟಗಳೂ ನಡೆಯುತ್ತಿವೆ. ಇನ್ನು ದಿನಾಲೂ ಶಾಲಾ ಕಾಲೇಜುಗಳಿಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿಗಳ ಕಷ್ಟ ಹೇಳತೀರದು.