ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಪ್ರಿಯಾಂಕ ಮೇರಿ ಫ್ರಾನ್ಸಿಸ್, ‘ನೋಟಿಸ್ ಬಂದಿದೆ. ಬಾಲಸುಬ್ರಮಣಿಯನ್ ಸಮಿತಿ ವರದಿ ಆಧರಿಸಿ ಒತ್ತುವರಿದಾರರ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು. ತಹಶೀಲ್ದಾರ್ ಅವರ ಮೂಲಕ ಪ್ರಕರಣ ದಾಖಲಿಸಲಾಗಿದೆ. ಈಗ ವಿಚಾರಣೆಗೆ ಹಾಜರಾಗುತ್ತೇನೆ. ಬಂಧನ ವಾರೆಂಟ್ ವಾಪಸ್ ಪಡೆಯುವಂತೆ ನಮ್ಮ ಪಬ್ಲಿಕ್ ಪ್ರಾಸಿಕ್ಯೂಟರ್ ಮೂಲಕ ಅರ್ಜಿ ಸಲ್ಲಿಸಲಾಗುವುದು’ ಎಂದರು.