‘ಜೆಜೆಎಂ ಕಾಮಗಾರಿಗೆ ರಸ್ತೆ ಅಗೆದು ಹಾಗೆ ಬಿಡಲಾಗಿದೆ. ಇದರಿಂದ ಬೈಕ್ ಸವಾರರು, ವೃದ್ದರು, ಮಕ್ಕಳು ನಡೆದಾಡುವುದೇ ಕಷ್ಟವಾಗಿದೆ. ಚಕ್ಕಡಿ, ಟ್ರ್ಯಾಕ್ಟರ್ಗಳು ಅಡ್ಡಾಡಲು ತೊಂದರೆಯಾಗುತ್ತಿದೆ. ಗುಂಡಿ ಮುಚ್ಚುವಂತೆ ಮನವಿ ಮಾಡಿದರೂ ಪಿಡಿಒ ಮಾತ್ರ ನನಗ್ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ’ ಎಂದು ಸದಾನಂದ ಕಮ್ಮಾರ ಆರೋಪಿಸಿದರು.