ಜಿಲ್ಲೆಯಲ್ಲಿ ಎರೆ (ಕಪ್ಪು ಮಣ್ಣಿನಲ್ಲಿ) ಭೂಮಿಯಲ್ಲಿ ಮತ್ತು ನೀರಾವರಿ ಸೌಲಭ್ಯ ಇರುವ ಕಡೆ ಮುಂಗಾರಿನಲ್ಲಿ ಈರುಳ್ಳಿ ಬೆಳೆಯಲಾಗುತ್ತದೆ. ಈ ಬಾರಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆ ಲಭಿಸಿದ್ದರಿಂದ ನಿರೀಕ್ಷೆ ಮೀರಿ ಈರುಳ್ಳಿ ಬಿತ್ತನೆಯಾಗಿದೆ. ತಾಲ್ಲೂಕಿನ ರಾಮಗಿರಿ, ಬಸಾಪುರ, ಗೊಜನೂರು, ಯಳವತ್ತಿ, ಯತ್ನಳ್ಳಿ, ಮಾಡಳ್ಳಿ, ಅಡರಕಟ್ಟಿ, ಬಟ್ಟೂರು, ಪುಟಗಾಂವ್ಬಡ್ನಿ, ದೊಡ್ಡೂರು, ಶಿಗ್ಲಿ, ಗೋವನಾಳ ಭಾಗಗಳಲ್ಲಿ ನೂರಾರು ಹೆಕ್ಟೇರ್ಗಳಲ್ಲಿ ಈರುಳ್ಳಿ ಬಿತ್ತನೆಯಾಗಿದ್ದು, ಇಳುವರಿ ಕೈಗೆ ಬರುತ್ತಿದ್ದಂತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದಿರುವುದು ರೈತರನ್ನು ಚಿಂತೆಗೀಡು ಮಾಡಿದೆ.