<p><strong>ಲಕ್ಷ್ಮೇಶ್ವರ:</strong> ಮನರೇಗಾ ಯೋಜನೆಯಡಿ ತಾಲ್ಲೂಕಿನ ಅಡರಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರದಗಟ್ಟಿ ಗ್ರಾಮದ ಬೇಂಜ್ರೆ ಕೆರೆ ಸಂಪೂರ್ಣ ಅಭಿವೃದ್ಧಿಗೊಂಡಿದ್ದು, ಯೋಜನೆಯ ಉದ್ದೇಶ ಸಫಲವಾಗಿದೆ.</p>.<p>2023-24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತಿ ಕಲ್ಲು ಪಿಚ್ಚಿಂಗ್ ಮಾಡುವ ಕೆಲಸವನ್ನು ಹಮ್ಮಿಕೊಳ್ಳಲಾಗಿತ್ತು. ಸಧ್ಯ ಉತ್ತಮ ಕೆಲಸದಿಂದಾಗಿ ಕೆರೆ ರಕ್ಷಣೆ ಕಾರ್ಯ ಯಶಸ್ವಿಯಾಗಿದೆ.<br> ಅಂದಾಜು 19 ಎಕರೆ ವಿಸ್ತೀರ್ಣದ ಕೆರೆಯನ್ನು ಯೋಜನೆಯಡಿ ಹೂಳೆತ್ತಿ ಕಲ್ಲು ಪಿಚ್ಚಿಂಗ್ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿತ್ತು. ಕೆರೆಯ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ದಂಡೆಗುಂಟ ಮಾಡಿರುವ ಕಲ್ಲು ಪಿಚ್ಚಿಂಗ್ನಿಂದಾಗಿ ಕೆರೆ ರಕ್ಷಣೆ ಸಾಧ್ಯವಾಗಿದೆ. ಇದಕ್ಕಾಗಿ ₹12 ಲಕ್ಷ ವ್ಯಯಿಸಲಾಗಿದ್ದು ಒಟ್ಟು 870 ಮಾನವ ದಿನಗಳನ್ನು ಸೃಜಿಸಲಾಗಿದೆ.</p>.<p>ಇದೇ ಯೋಜನೆಯಡಿ ₹9.50 ಲಕ್ಷ ವೆಚ್ಚದಲ್ಲಿ ಕೆರೆ ಹೂಳೆತ್ತಲಾಗಿದೆ. ಇದರಿಂದ 2,985 ಮಾನವ ದಿನಗಳು ಸೃಜನೆಗೊಂಡಿವೆ. ನರೇಗಾ ಯೋಜನೆಯಡಿ ಸಂಪೂರ್ಣ ಅಭಿವೃದ್ಧಿಗೊಂಡಿರುವ ಕೆರೆ ಈ ವರ್ಷ ಮಳೆಗಾಲದಲ್ಲಿ ತುಂಬಿದರೆ ಗ್ರಾಮಸ್ಥರಿಗೆ ಸಾಕಷ್ಟು ಅನುಕೂಲಕರವಾಗಲಿದೆ.</p>.<p>‘ಜಲಮೂಲಗಳ ರಕ್ಷಣೆಗೆ ಹೆಚ್ಚಿನ ಅಧ್ಯತೆ ನೀಡಿದ್ದರಿಂದ ಹರದಗಟ್ಟಿ ಗ್ರಾಮದ ಕೆರೆ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಕೆರೆ ರಕ್ಷಣೆಯಲ್ಲಿ ಗ್ರಾಮದ ಎಲ್ಲರ ಸಹಕಾರ ಸಿಕ್ಕಿದೆ’ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸವಿತಾ ಸೋಮಣ್ಣವರ ತಿಳಿಸಿದರು.</p>.<p>‘ಉದ್ಯೋಗ ಖಾತ್ರಿ ಯೋಜನೆಯಡಿ ಬೇಂಜ್ರೆ ಕೆರೆಯನ್ನು ಅಭಿವೃದ್ಧಿ ಮಾಡಲಾಗಿದೆ. ಅದರಂತೆ ಪಂಚಾಯ್ತಿ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ನಿಂಗಪ್ಪ ಪ್ಯಾಟಿ ತಿಳಿಸಿದರು.</p>.<div><blockquote>ಕೆರೆಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡಲು ಅವಕಾಶ ಇದೆ. ಕಾರಣ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು </blockquote><span class="attribution">ಕೃಷ್ಣಪ್ಪ ಧರ್ಮರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಮನರೇಗಾ ಯೋಜನೆಯಡಿ ತಾಲ್ಲೂಕಿನ ಅಡರಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರದಗಟ್ಟಿ ಗ್ರಾಮದ ಬೇಂಜ್ರೆ ಕೆರೆ ಸಂಪೂರ್ಣ ಅಭಿವೃದ್ಧಿಗೊಂಡಿದ್ದು, ಯೋಜನೆಯ ಉದ್ದೇಶ ಸಫಲವಾಗಿದೆ.</p>.<p>2023-24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತಿ ಕಲ್ಲು ಪಿಚ್ಚಿಂಗ್ ಮಾಡುವ ಕೆಲಸವನ್ನು ಹಮ್ಮಿಕೊಳ್ಳಲಾಗಿತ್ತು. ಸಧ್ಯ ಉತ್ತಮ ಕೆಲಸದಿಂದಾಗಿ ಕೆರೆ ರಕ್ಷಣೆ ಕಾರ್ಯ ಯಶಸ್ವಿಯಾಗಿದೆ.<br> ಅಂದಾಜು 19 ಎಕರೆ ವಿಸ್ತೀರ್ಣದ ಕೆರೆಯನ್ನು ಯೋಜನೆಯಡಿ ಹೂಳೆತ್ತಿ ಕಲ್ಲು ಪಿಚ್ಚಿಂಗ್ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿತ್ತು. ಕೆರೆಯ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ದಂಡೆಗುಂಟ ಮಾಡಿರುವ ಕಲ್ಲು ಪಿಚ್ಚಿಂಗ್ನಿಂದಾಗಿ ಕೆರೆ ರಕ್ಷಣೆ ಸಾಧ್ಯವಾಗಿದೆ. ಇದಕ್ಕಾಗಿ ₹12 ಲಕ್ಷ ವ್ಯಯಿಸಲಾಗಿದ್ದು ಒಟ್ಟು 870 ಮಾನವ ದಿನಗಳನ್ನು ಸೃಜಿಸಲಾಗಿದೆ.</p>.<p>ಇದೇ ಯೋಜನೆಯಡಿ ₹9.50 ಲಕ್ಷ ವೆಚ್ಚದಲ್ಲಿ ಕೆರೆ ಹೂಳೆತ್ತಲಾಗಿದೆ. ಇದರಿಂದ 2,985 ಮಾನವ ದಿನಗಳು ಸೃಜನೆಗೊಂಡಿವೆ. ನರೇಗಾ ಯೋಜನೆಯಡಿ ಸಂಪೂರ್ಣ ಅಭಿವೃದ್ಧಿಗೊಂಡಿರುವ ಕೆರೆ ಈ ವರ್ಷ ಮಳೆಗಾಲದಲ್ಲಿ ತುಂಬಿದರೆ ಗ್ರಾಮಸ್ಥರಿಗೆ ಸಾಕಷ್ಟು ಅನುಕೂಲಕರವಾಗಲಿದೆ.</p>.<p>‘ಜಲಮೂಲಗಳ ರಕ್ಷಣೆಗೆ ಹೆಚ್ಚಿನ ಅಧ್ಯತೆ ನೀಡಿದ್ದರಿಂದ ಹರದಗಟ್ಟಿ ಗ್ರಾಮದ ಕೆರೆ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಕೆರೆ ರಕ್ಷಣೆಯಲ್ಲಿ ಗ್ರಾಮದ ಎಲ್ಲರ ಸಹಕಾರ ಸಿಕ್ಕಿದೆ’ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸವಿತಾ ಸೋಮಣ್ಣವರ ತಿಳಿಸಿದರು.</p>.<p>‘ಉದ್ಯೋಗ ಖಾತ್ರಿ ಯೋಜನೆಯಡಿ ಬೇಂಜ್ರೆ ಕೆರೆಯನ್ನು ಅಭಿವೃದ್ಧಿ ಮಾಡಲಾಗಿದೆ. ಅದರಂತೆ ಪಂಚಾಯ್ತಿ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ನಿಂಗಪ್ಪ ಪ್ಯಾಟಿ ತಿಳಿಸಿದರು.</p>.<div><blockquote>ಕೆರೆಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡಲು ಅವಕಾಶ ಇದೆ. ಕಾರಣ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು </blockquote><span class="attribution">ಕೃಷ್ಣಪ್ಪ ಧರ್ಮರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>