<p><strong>ಗದಗ:</strong> ತಾಲ್ಲೂಕಿನ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ಆವರಣದಲ್ಲಿ ಉತ್ಖನನದ ವೇಳೆ ಸಿಕ್ಕ ಪ್ರಾಚ್ಯ ಅವಶೇಷಗಳ ಅಧ್ಯಯನಕ್ಕೆ ಸರ್ಕಾರ ಪುರಾತತ್ವ ಶಾಸ್ತ್ರಜ್ಞ ಎಂ.ಎಸ್.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿದೆ.</p>.<p>ಇತಿಹಾಸ ತಜ್ಞರಾದ ಡಾ. ರಾಘವೇಂದ್ರ ರಾವ್ ಎಚ್.ಕುಲಕರ್ಣಿ, ಪ್ರೊ. ಚೂಡಾಮಣಿ ನಂದಗೋಪಾಲ, ಹನುಮಾಕ್ಷಿ ಗೋಗಿ, ರತ್ನಶಾಸ್ತ್ರಜ್ಞ ಪ್ರಭು ಕಮ್ಮಾರ ಅವರು ಸಮಿತಿ ಸದಸ್ಯರಾಗಿದ್ದಾರೆ. ಪುರಾತತ್ವ ಶಾಸ್ತ್ರಜ್ಞ ಡಾ. ಆರ್.ಶೇಜೇಶ್ವರ ಸಮಿತಿಯ ಕಾರ್ಯದರ್ಶಿಯನ್ನಾಗಿ ಸರ್ಕಾರ ನೇಮಕ ಮಾಡಿದೆ.</p>.<p>ಸಮಿತಿಯು ನಿಧಿಯ ನಿಖರವಾದ ಕಾಲಗಣನೆ, ಬಳಕೆ, ಮೌಲ್ಯಮಾಪನ ಮತ್ತು ಇನ್ನಿತರೆ ಅಂಶಗಳ ಕುರಿತು ತಜ್ಞರು ಅಧ್ಯಯನ ನಡೆಸಲಿದ್ದು, 15 ದಿನಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ತಾಲ್ಲೂಕಿನ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ಆವರಣದಲ್ಲಿ ಉತ್ಖನನದ ವೇಳೆ ಸಿಕ್ಕ ಪ್ರಾಚ್ಯ ಅವಶೇಷಗಳ ಅಧ್ಯಯನಕ್ಕೆ ಸರ್ಕಾರ ಪುರಾತತ್ವ ಶಾಸ್ತ್ರಜ್ಞ ಎಂ.ಎಸ್.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿದೆ.</p>.<p>ಇತಿಹಾಸ ತಜ್ಞರಾದ ಡಾ. ರಾಘವೇಂದ್ರ ರಾವ್ ಎಚ್.ಕುಲಕರ್ಣಿ, ಪ್ರೊ. ಚೂಡಾಮಣಿ ನಂದಗೋಪಾಲ, ಹನುಮಾಕ್ಷಿ ಗೋಗಿ, ರತ್ನಶಾಸ್ತ್ರಜ್ಞ ಪ್ರಭು ಕಮ್ಮಾರ ಅವರು ಸಮಿತಿ ಸದಸ್ಯರಾಗಿದ್ದಾರೆ. ಪುರಾತತ್ವ ಶಾಸ್ತ್ರಜ್ಞ ಡಾ. ಆರ್.ಶೇಜೇಶ್ವರ ಸಮಿತಿಯ ಕಾರ್ಯದರ್ಶಿಯನ್ನಾಗಿ ಸರ್ಕಾರ ನೇಮಕ ಮಾಡಿದೆ.</p>.<p>ಸಮಿತಿಯು ನಿಧಿಯ ನಿಖರವಾದ ಕಾಲಗಣನೆ, ಬಳಕೆ, ಮೌಲ್ಯಮಾಪನ ಮತ್ತು ಇನ್ನಿತರೆ ಅಂಶಗಳ ಕುರಿತು ತಜ್ಞರು ಅಧ್ಯಯನ ನಡೆಸಲಿದ್ದು, 15 ದಿನಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>