<p><strong>ಲಕ್ಷ್ಮೇಶ್ವರ</strong>: ಶಕ್ತಿ ಯೋಜನೆ ಅನುಷ್ಠಾನಕ್ಕೆ ಬಂದಾಗಿನಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಬಸ್ನಲ್ಲಿ ಪ್ರಯಾಣಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.</p>.<p>ಮಹಿಳಾ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಇಲಾಖೆ ಬಸ್ಗಳನ್ನು ಯೋಜಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಕಡಿಮೆ ಬಸ್ಗಳಲ್ಲಿ ಪ್ರಯಾಣಿಕರು ಪ್ರಯಾಣಿಸಲು ತೊಂದರೆ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಸರ್ಕಾರದಿಂದ ಹಾಳಾದ ರಸ್ತೆ ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗೆ ಅನುದಾನ ಬಂದಿಲ್ಲ. ಹೀಗಾಗಿ ಗುಂಡಿ ಬಿದ್ದ ರಸ್ತೆಗಳಲ್ಲಿ ಸಂಚರಿಸಿ ಕೆಲ ಬಸ್ಗಳು ಮೂಲೆ ಸೇರುತ್ತಿದ್ದು, ಇದರಿಂದಾಗಿ ಬಸ್ಗಳ ಸಂಖ್ಯೆಯೂ ಕಡಿಮೆ ಆಗುತ್ತಿದೆ. ಹೀಗಾಗಿ ಓಡಾಡುವ ಬಸ್ಗಳಲ್ಲಿ ಪ್ರಯಾಸದಿಂದ ತಿರುಗಾಡುತ್ತಿದ್ದಾರೆ.</p>.<p>ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಬಸ್ಗಳು ಜನರಿಂದ ತುಂಬಿ ತುಳುಕುತ್ತಿದ್ದು, ಶಾಲಾ ಕಾಲೇಜು ಮಕ್ಕಳು ಅನಿವಾರ್ಯವಾಗಿ ಬಸ್ ಬಾಗಿಲಿಗೆ ಜೋತು ಬಿದ್ದು ಊರಿಗೆ ಹೋಗಬೇಕಾಗಿದ್ದು, ಆಯತಪ್ಪಿ ಬಿದ್ದರೆ ಮಕ್ಕಳ ಪ್ರಾಣಕ್ಕೆ ಸಂಚಕಾರ ಉಂಟಾಗುವ ಭಯ ಸೃಷ್ಟಿಯಾಗಿದೆ.</p>.<p>‘ಎರಡು ವರ್ಷದಿಂದ ಬಸ್ನ ಬಾಗಿಲಿಗೆ ಜೋತು ಬಿದ್ದು ಊರಿಗೆ ಹೋಗಬೇಕಾಗೇತಿ’ ಎಂದು ಕಾಲೇಜು ವಿದ್ಯಾರ್ಥಿ ಬಸವರಾಜ ಬೇಸರ ವ್ಯಕ್ತಪಡಿಸಿದರು.</p>.<p>‘ಸರ್ಕಾರ ಏನೋ ಶಕ್ತಿ ಯೋಜನೆಯಿಂದಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದು ಘೋಷಣೆ ಮಾಡುತ್ತಿದೆ. ಆದರೆ, ಇನ್ನಷ್ಟು ಬಸ್ಗಳನ್ನು ವ್ಯವಸ್ಥೆ ಮಾಡಲು ಅದಕ್ಕೆ ಆಗುತ್ತಿಲ್ಲ’ ಎಂದು ನಿವೃತ್ತ ಶಿಕ್ಷಕ ಪೂರ್ಣಾಜಿ ಖರಾಟೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ಶಕ್ತಿ ಯೋಜನೆ ಅನುಷ್ಠಾನಕ್ಕೆ ಬಂದಾಗಿನಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಬಸ್ನಲ್ಲಿ ಪ್ರಯಾಣಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.</p>.<p>ಮಹಿಳಾ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಇಲಾಖೆ ಬಸ್ಗಳನ್ನು ಯೋಜಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಕಡಿಮೆ ಬಸ್ಗಳಲ್ಲಿ ಪ್ರಯಾಣಿಕರು ಪ್ರಯಾಣಿಸಲು ತೊಂದರೆ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಸರ್ಕಾರದಿಂದ ಹಾಳಾದ ರಸ್ತೆ ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗೆ ಅನುದಾನ ಬಂದಿಲ್ಲ. ಹೀಗಾಗಿ ಗುಂಡಿ ಬಿದ್ದ ರಸ್ತೆಗಳಲ್ಲಿ ಸಂಚರಿಸಿ ಕೆಲ ಬಸ್ಗಳು ಮೂಲೆ ಸೇರುತ್ತಿದ್ದು, ಇದರಿಂದಾಗಿ ಬಸ್ಗಳ ಸಂಖ್ಯೆಯೂ ಕಡಿಮೆ ಆಗುತ್ತಿದೆ. ಹೀಗಾಗಿ ಓಡಾಡುವ ಬಸ್ಗಳಲ್ಲಿ ಪ್ರಯಾಸದಿಂದ ತಿರುಗಾಡುತ್ತಿದ್ದಾರೆ.</p>.<p>ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಬಸ್ಗಳು ಜನರಿಂದ ತುಂಬಿ ತುಳುಕುತ್ತಿದ್ದು, ಶಾಲಾ ಕಾಲೇಜು ಮಕ್ಕಳು ಅನಿವಾರ್ಯವಾಗಿ ಬಸ್ ಬಾಗಿಲಿಗೆ ಜೋತು ಬಿದ್ದು ಊರಿಗೆ ಹೋಗಬೇಕಾಗಿದ್ದು, ಆಯತಪ್ಪಿ ಬಿದ್ದರೆ ಮಕ್ಕಳ ಪ್ರಾಣಕ್ಕೆ ಸಂಚಕಾರ ಉಂಟಾಗುವ ಭಯ ಸೃಷ್ಟಿಯಾಗಿದೆ.</p>.<p>‘ಎರಡು ವರ್ಷದಿಂದ ಬಸ್ನ ಬಾಗಿಲಿಗೆ ಜೋತು ಬಿದ್ದು ಊರಿಗೆ ಹೋಗಬೇಕಾಗೇತಿ’ ಎಂದು ಕಾಲೇಜು ವಿದ್ಯಾರ್ಥಿ ಬಸವರಾಜ ಬೇಸರ ವ್ಯಕ್ತಪಡಿಸಿದರು.</p>.<p>‘ಸರ್ಕಾರ ಏನೋ ಶಕ್ತಿ ಯೋಜನೆಯಿಂದಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದು ಘೋಷಣೆ ಮಾಡುತ್ತಿದೆ. ಆದರೆ, ಇನ್ನಷ್ಟು ಬಸ್ಗಳನ್ನು ವ್ಯವಸ್ಥೆ ಮಾಡಲು ಅದಕ್ಕೆ ಆಗುತ್ತಿಲ್ಲ’ ಎಂದು ನಿವೃತ್ತ ಶಿಕ್ಷಕ ಪೂರ್ಣಾಜಿ ಖರಾಟೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>