<p><strong>ಲಕ್ಷ್ಮೇಶ್ವರ:</strong> ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಚುನಾವಣಾ ಪೂರ್ವಭಾವಿ ಸಭೆಯು ಭಾನುವಾರ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಂಗಣದಲ್ಲಿ ಜರುಗಿತು.</p>.<p>ಮಾಜಿ ಶಾಸಕ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಮಾತನಾಡಿ, ‘ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸುವಲ್ಲಿ ನಿಪುಣರು. ದೇವರ ಹೆಸರಲ್ಲಿ ರಾಜಕಾರಣ ಮಾಡುವಲ್ಲಿ ಪರಿಣತರು. ಮುಂಬರಲಿರುವ ಪದವೀಧರ ಚುನಾವಣೆಯಲ್ಲಿ ಮೋಹನ ಲಿಂಬಿಕಾಯಿ ಅವರ ಗೆಲುವು ನಿಶ್ಚಿತ’ ಎಂದು ಹೇಳಿದರು.</p>.<p>ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ‘ಮೋಹನ ಲಿಂಬಿಕಾಯಿ ಅವರಿಗೆ ಪದವೀಧರ ಕ್ಷೇತ್ರದ ಚುನಾವಣೆ ಅವರಿಗೆ ಹೊಸತಲ್ಲ. ಕ್ಷೇತ್ರದ ಸಂಪೂರ್ಣ ಪರಿಚಯ ಅವರಿಗೆ ಇದೆ. ಹೀಗಾಗಿ ಈ ಬಾರಿ ಖಂಡಿತ ಜಯ ಗಳಿಸುತ್ತಾರೆ’ ಎಂದು ತಿಳಿಸಿದರು.</p>.<p>ಮೋಹನ ಲಿಂಬಿಕಾಯಿ ಮಾತನಾಡಿ, ‘ಪಶ್ಚಿಮ ಪದವೀಧರ ಕ್ಷೇತ್ರ ಬಹಳ ದೊಡ್ಡದು. ಇನ್ನೂ ಹೆಚ್ಚು ಮತದಾರರು ನೋಂದಾಯಿಸಿಕೊಳ್ಳಲು ಅವಕಾಶ ಇದೆ. ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ 1400ಕ್ಕೂ ಹೆಚ್ಚು ಮತದಾರರು ಇದ್ದಾರೆ’ ಎಂದರು. </p>.<p>‘ದೇಶದ ಪ್ರಗತಿ ಬಗ್ಗೆ ರಾಜಕಾರಣಿಗಳಿಗೆ ಅರಿವು ಇರಬೇಕು. ಮಹತ್ವದ ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಸಂಪೂರ್ಣ ಹಾಳು ಮಾಡಿದ್ದು ಮಹಾತ್ಮಾ ಗಾಂಧೀಜಿ ಅವರಿಗೆ ಹೆಸರಿಗೆ ಮಸಿ ಬಡಿಯುವ ಕೆಲಸ ಮಾಡಿದೆ’ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.</p>.<p>ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಆರ್. ಕೊಪ್ಪದ, ಮಹೇಶ ಹೊಗೆಸೊಪ್ಪಿನ, ಸುರೇಶ ನಾವಿ, ಎಸ್.ಪಿ. ಬಳಿಗಾರ ಮಾತನಾಡಿದರು. ಈ ವೇಳೆ ವಿ.ಜಿ. ಪಡಿಗೇರಿ, ಅಂಬರೀಷ ತೆಂಬದಮನಿ, ಸೋಮಣ್ಣ ಬೆಟಗೇರಿ, ಆದಪ್ಪಗೌಡ್ರ, ರಂಜನ ಪಾಟೀಲ, ಗುರುನಾಥ ದಾನಪ್ಪನವರ, ದೀಪಕ ಲಮಾಣಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಚುನಾವಣಾ ಪೂರ್ವಭಾವಿ ಸಭೆಯು ಭಾನುವಾರ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಂಗಣದಲ್ಲಿ ಜರುಗಿತು.</p>.<p>ಮಾಜಿ ಶಾಸಕ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಮಾತನಾಡಿ, ‘ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸುವಲ್ಲಿ ನಿಪುಣರು. ದೇವರ ಹೆಸರಲ್ಲಿ ರಾಜಕಾರಣ ಮಾಡುವಲ್ಲಿ ಪರಿಣತರು. ಮುಂಬರಲಿರುವ ಪದವೀಧರ ಚುನಾವಣೆಯಲ್ಲಿ ಮೋಹನ ಲಿಂಬಿಕಾಯಿ ಅವರ ಗೆಲುವು ನಿಶ್ಚಿತ’ ಎಂದು ಹೇಳಿದರು.</p>.<p>ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ‘ಮೋಹನ ಲಿಂಬಿಕಾಯಿ ಅವರಿಗೆ ಪದವೀಧರ ಕ್ಷೇತ್ರದ ಚುನಾವಣೆ ಅವರಿಗೆ ಹೊಸತಲ್ಲ. ಕ್ಷೇತ್ರದ ಸಂಪೂರ್ಣ ಪರಿಚಯ ಅವರಿಗೆ ಇದೆ. ಹೀಗಾಗಿ ಈ ಬಾರಿ ಖಂಡಿತ ಜಯ ಗಳಿಸುತ್ತಾರೆ’ ಎಂದು ತಿಳಿಸಿದರು.</p>.<p>ಮೋಹನ ಲಿಂಬಿಕಾಯಿ ಮಾತನಾಡಿ, ‘ಪಶ್ಚಿಮ ಪದವೀಧರ ಕ್ಷೇತ್ರ ಬಹಳ ದೊಡ್ಡದು. ಇನ್ನೂ ಹೆಚ್ಚು ಮತದಾರರು ನೋಂದಾಯಿಸಿಕೊಳ್ಳಲು ಅವಕಾಶ ಇದೆ. ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ 1400ಕ್ಕೂ ಹೆಚ್ಚು ಮತದಾರರು ಇದ್ದಾರೆ’ ಎಂದರು. </p>.<p>‘ದೇಶದ ಪ್ರಗತಿ ಬಗ್ಗೆ ರಾಜಕಾರಣಿಗಳಿಗೆ ಅರಿವು ಇರಬೇಕು. ಮಹತ್ವದ ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಸಂಪೂರ್ಣ ಹಾಳು ಮಾಡಿದ್ದು ಮಹಾತ್ಮಾ ಗಾಂಧೀಜಿ ಅವರಿಗೆ ಹೆಸರಿಗೆ ಮಸಿ ಬಡಿಯುವ ಕೆಲಸ ಮಾಡಿದೆ’ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.</p>.<p>ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಆರ್. ಕೊಪ್ಪದ, ಮಹೇಶ ಹೊಗೆಸೊಪ್ಪಿನ, ಸುರೇಶ ನಾವಿ, ಎಸ್.ಪಿ. ಬಳಿಗಾರ ಮಾತನಾಡಿದರು. ಈ ವೇಳೆ ವಿ.ಜಿ. ಪಡಿಗೇರಿ, ಅಂಬರೀಷ ತೆಂಬದಮನಿ, ಸೋಮಣ್ಣ ಬೆಟಗೇರಿ, ಆದಪ್ಪಗೌಡ್ರ, ರಂಜನ ಪಾಟೀಲ, ಗುರುನಾಥ ದಾನಪ್ಪನವರ, ದೀಪಕ ಲಮಾಣಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>