<p>ಲಕ್ಷ್ಮೇಶ್ವರ: ‘ಡೆಂಗಿ ನಿಯಂತ್ರಣಕ್ಕೆ ಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿ ಪರಿಹಾರವಾಗಿದೆ’ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.</p>.<p>ಇಲ್ಲಿನ ಬಾಪೂಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿರಹಟ್ಟಿ ತಾಲ್ಲೂಕು ಆರೋಗ್ಯ ಅಧಿಕಾರಿ ಕಚೇರಿ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಡೆಂಗಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಳೆಗಾಲ ಪ್ರಾರಂಭವಾಗಿದ್ದು, ಅಲ್ಲಲ್ಲಿ ನಿಂತ ನೀರಿನ ತಾಣಗಳಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತವೆ. ವಿವಿಧ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ, ಸೊಳ್ಳೆಗಳ ಸಂಖ್ಯೆ ವೃದ್ಧಿಸುತ್ತದೆ. ಇದರಿಂದ ಸೊಳ್ಳೆಗಳ ಮೂಲಕ ಹರಡುವ ಕಾಯಿಲೆಗಳು ಹೆಚ್ಚಾಗುವ ಸಂಭವ ಇರುತ್ತದೆ’ ಎಂದರು.</p>.<p>ಪ್ರಾಚಾರ್ಯ ಕೆ. ನಾಗರಾಜಪ್ಪ, ಸಿಬ್ಬಂದಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಫ್.ಬಿ. ಹೂಗಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಫ್.ಸಿ. ಹಿರೇಮಠ,ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ. ಬಣಗಾರ, ಕೆ.ಎಂ. ಕುಲಕರ್ಣಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-23-321395519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ‘ಡೆಂಗಿ ನಿಯಂತ್ರಣಕ್ಕೆ ಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿ ಪರಿಹಾರವಾಗಿದೆ’ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.</p>.<p>ಇಲ್ಲಿನ ಬಾಪೂಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿರಹಟ್ಟಿ ತಾಲ್ಲೂಕು ಆರೋಗ್ಯ ಅಧಿಕಾರಿ ಕಚೇರಿ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಡೆಂಗಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಳೆಗಾಲ ಪ್ರಾರಂಭವಾಗಿದ್ದು, ಅಲ್ಲಲ್ಲಿ ನಿಂತ ನೀರಿನ ತಾಣಗಳಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತವೆ. ವಿವಿಧ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ, ಸೊಳ್ಳೆಗಳ ಸಂಖ್ಯೆ ವೃದ್ಧಿಸುತ್ತದೆ. ಇದರಿಂದ ಸೊಳ್ಳೆಗಳ ಮೂಲಕ ಹರಡುವ ಕಾಯಿಲೆಗಳು ಹೆಚ್ಚಾಗುವ ಸಂಭವ ಇರುತ್ತದೆ’ ಎಂದರು.</p>.<p>ಪ್ರಾಚಾರ್ಯ ಕೆ. ನಾಗರಾಜಪ್ಪ, ಸಿಬ್ಬಂದಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಫ್.ಬಿ. ಹೂಗಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಫ್.ಸಿ. ಹಿರೇಮಠ,ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ. ಬಣಗಾರ, ಕೆ.ಎಂ. ಕುಲಕರ್ಣಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-23-321395519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>