<p><strong>ಲಕ್ಷ್ಮೇಶ್ವರ:</strong> ಇಲ್ಲಿನ ಮ್ಯಾಗೇರಿ ಓಣಿಯಲ್ಲಿನ ಬೀರೇಶ್ವರ ದೇವಸ್ಥಾನದಲ್ಲಿ ಹಾಲುಮತ ಸಮಾಜದ ವತಿಯಿಂದ ಪ್ರತಿ ವರ್ಷ ನಡೆದುಕೊಂಡು ಬರುತ್ತಿರುವ ಕತ್ರಿಗಾರ ಹಬ್ಬ ಮೇ14ರಂದು ಜರುಗಲಿದೆ. ಹಬ್ಬದ ನಿಮಿತ್ತ ಸಾಮೂಹಿಕ ವಿವಾಹ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಬರುವ ಜನರಿಗಾಗಿ ಊಟ ಸೇರಿದಂತೆ ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ.</p>.<p>ಕತ್ರಿಗಾರ ಹಬ್ಬದಾಚರಣೆ ಕುರಿತು ಹಿರಿಯ ಮುಖಂಡ ಬಸವರಾಜ ಗುಡಗುಂಟಿ ಮಾತನಾಡಿ, ‘ಪ್ರತಿವರ್ಷ ನಮ್ಮ ಮ್ಯಾಗೇರಿ ಓಣಿಯ ಬೀರೇಶ್ವರ ದೇವಸ್ಥಾನದಲ್ಲಿ ಕತ್ರಿಗಾರ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಅದರಂತೆ ಈ ವರ್ಷವೂ ಕೂಡ 7 ಜೋಡಿ ಸಾಮೂಹಿಕ ವಿವಾಹದೊಂದಿಗೆ ಹಬ್ಬ ನಡೆಯಲಿದೆ. ಲಕ್ಷ್ಮೇಶ್ವರ ಸೇರಿದಂತೆ ಸುತ್ತಮುತ್ತಲಿನ ಎಲ್ಲ ಗ್ರಾಮಸ್ಥರು ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ ದಂಪತಿಗಳಿಗೆ ಆಶೀರ್ವದಿಸಬೇಕು’ ಎಂದು ಅವರು ತಿಳಿಸಿದರು.</p>.<p>ಈ ವರ್ಷ ಹಬ್ಬಕ್ಕೆ ಬರುತ್ತಿರುವ ಎಲ್ಲರಿಗೂ ಬೋಂದೆ ಊಟ ಬಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಅದನ್ನು ತಯಾರಿಸುವ ಕೆಲಸ ಭರದಿಂದ ನಡೆದಿದೆ ಎಂದರು. ಈ ಸಮಯದಲ್ಲಿ ಮ್ಯಾಗೇರಿ ಓಣಿಯ ಎಲ್ಲಾ ಗುರು ಹಿರಿಯರು ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-23-1867073902</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಇಲ್ಲಿನ ಮ್ಯಾಗೇರಿ ಓಣಿಯಲ್ಲಿನ ಬೀರೇಶ್ವರ ದೇವಸ್ಥಾನದಲ್ಲಿ ಹಾಲುಮತ ಸಮಾಜದ ವತಿಯಿಂದ ಪ್ರತಿ ವರ್ಷ ನಡೆದುಕೊಂಡು ಬರುತ್ತಿರುವ ಕತ್ರಿಗಾರ ಹಬ್ಬ ಮೇ14ರಂದು ಜರುಗಲಿದೆ. ಹಬ್ಬದ ನಿಮಿತ್ತ ಸಾಮೂಹಿಕ ವಿವಾಹ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಬರುವ ಜನರಿಗಾಗಿ ಊಟ ಸೇರಿದಂತೆ ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ.</p>.<p>ಕತ್ರಿಗಾರ ಹಬ್ಬದಾಚರಣೆ ಕುರಿತು ಹಿರಿಯ ಮುಖಂಡ ಬಸವರಾಜ ಗುಡಗುಂಟಿ ಮಾತನಾಡಿ, ‘ಪ್ರತಿವರ್ಷ ನಮ್ಮ ಮ್ಯಾಗೇರಿ ಓಣಿಯ ಬೀರೇಶ್ವರ ದೇವಸ್ಥಾನದಲ್ಲಿ ಕತ್ರಿಗಾರ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಅದರಂತೆ ಈ ವರ್ಷವೂ ಕೂಡ 7 ಜೋಡಿ ಸಾಮೂಹಿಕ ವಿವಾಹದೊಂದಿಗೆ ಹಬ್ಬ ನಡೆಯಲಿದೆ. ಲಕ್ಷ್ಮೇಶ್ವರ ಸೇರಿದಂತೆ ಸುತ್ತಮುತ್ತಲಿನ ಎಲ್ಲ ಗ್ರಾಮಸ್ಥರು ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ ದಂಪತಿಗಳಿಗೆ ಆಶೀರ್ವದಿಸಬೇಕು’ ಎಂದು ಅವರು ತಿಳಿಸಿದರು.</p>.<p>ಈ ವರ್ಷ ಹಬ್ಬಕ್ಕೆ ಬರುತ್ತಿರುವ ಎಲ್ಲರಿಗೂ ಬೋಂದೆ ಊಟ ಬಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಅದನ್ನು ತಯಾರಿಸುವ ಕೆಲಸ ಭರದಿಂದ ನಡೆದಿದೆ ಎಂದರು. ಈ ಸಮಯದಲ್ಲಿ ಮ್ಯಾಗೇರಿ ಓಣಿಯ ಎಲ್ಲಾ ಗುರು ಹಿರಿಯರು ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-23-1867073902</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>