<p>ಲಕ್ಷ್ಮೇಶ್ವರ: ‘ಆಯುರ್ವೇದ ಶಾಸ್ತ್ರದಲ್ಲಿ ಎಲ್ಲ ರೋಗಗಳಿಗೂ ಔಷಧವಿದೆ. ಆದರೆ, ಅದನ್ನು ಸಂಶೋಧಿಸಿ ವಿತರಿಸುವವರ ಸಂಖ್ಯೆ ಕಡಿಮೆ ಇದೆ’ ಎಂದು ಬೆಳ್ಳಟ್ಟಿ ರಾಮಲಿಂಗೇಶ್ವರಮಠದ ಬಸವರಾಜ ಸ್ವಾಮೀಜಿ ಹೇಳಿದರು. </p>.<p>ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರಲ್ಲಿ ಶನಿವಾರ ನಡೆದ ಅಸ್ತಮಾ ರೋಗಕ್ಕೆ ಉಚಿತ ಔಷಧ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಾವು ಸೇವಿಸುವ ಆಹಾರದಿಂದಲೇ ಹಲವು ರೋಗಗಳಿಗೆ ತುತ್ತಾಗುತ್ತಿದ್ದೇವೆ. ನಮ್ಮ ಹಿರಿಯರು ಬಳಸುತ್ತಿದ್ದ ಜೋಳ, ಕುಸುಬಿ, ನವಣೆ, ಸಜ್ಜೆಯಂತಹ ಪೌಷ್ಟಿಕ ಆಹಾರ ಸೇವಿಸುವ ಪದ್ಧತಿ ರೂಢಿಸಿಕೊಳ್ಳಬೇಕು’ ಎಂದರು.</p>.<p>‘58 ವರ್ಷಗಳಿಂದ ಅಸ್ತಮಾ ರೋಗಿಗಳಿಗೆ ಲಕ್ಷ್ಮೇಶ್ವರದಲ್ಲಿ ಉಚಿತವಾಗಿ ಔಷಧ ನೀಡುತ್ತಿರುವುದು ಶ್ಲಾಘನೀಯ. ವೈದ್ಯ ಬಾಬುರಾವ್ ಕುಲಕರ್ಣಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಔಷಧ ವಿತರಣೆ ನಡೆದಿರುವುದು ಸಾಮಾಜಿಕ ಸೇವೆಯೇ ಆಗಿದೆ. ಈ ಕಾರ್ಯಕ್ರಮ ಪ್ರತಿ ವರ್ಷ ನಡೆದು, ಅಸ್ತಮಾ ಪೀಡಿತರು ಗುಣಮುಖವಾಗಲಿ’ ಎಂದ ಹಾರೈಸಿದರು.</p>.<p>ಶಿವಪ್ರಕಾಶ ಪಾಟೀಲ, ಡಾ. ಹರೀಶ ಕುಲಕರ್ಣಿ, ವಿ.ಜಿ. ಪಡಿಗೇರಿ, ನಿಂಗಪ್ಪ ಬನ್ನಿ, ಎಂ.ಆರ್. ಪಾಟೀಲ, ಕೃಷ್ಣ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ‘ಆಯುರ್ವೇದ ಶಾಸ್ತ್ರದಲ್ಲಿ ಎಲ್ಲ ರೋಗಗಳಿಗೂ ಔಷಧವಿದೆ. ಆದರೆ, ಅದನ್ನು ಸಂಶೋಧಿಸಿ ವಿತರಿಸುವವರ ಸಂಖ್ಯೆ ಕಡಿಮೆ ಇದೆ’ ಎಂದು ಬೆಳ್ಳಟ್ಟಿ ರಾಮಲಿಂಗೇಶ್ವರಮಠದ ಬಸವರಾಜ ಸ್ವಾಮೀಜಿ ಹೇಳಿದರು. </p>.<p>ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರಲ್ಲಿ ಶನಿವಾರ ನಡೆದ ಅಸ್ತಮಾ ರೋಗಕ್ಕೆ ಉಚಿತ ಔಷಧ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಾವು ಸೇವಿಸುವ ಆಹಾರದಿಂದಲೇ ಹಲವು ರೋಗಗಳಿಗೆ ತುತ್ತಾಗುತ್ತಿದ್ದೇವೆ. ನಮ್ಮ ಹಿರಿಯರು ಬಳಸುತ್ತಿದ್ದ ಜೋಳ, ಕುಸುಬಿ, ನವಣೆ, ಸಜ್ಜೆಯಂತಹ ಪೌಷ್ಟಿಕ ಆಹಾರ ಸೇವಿಸುವ ಪದ್ಧತಿ ರೂಢಿಸಿಕೊಳ್ಳಬೇಕು’ ಎಂದರು.</p>.<p>‘58 ವರ್ಷಗಳಿಂದ ಅಸ್ತಮಾ ರೋಗಿಗಳಿಗೆ ಲಕ್ಷ್ಮೇಶ್ವರದಲ್ಲಿ ಉಚಿತವಾಗಿ ಔಷಧ ನೀಡುತ್ತಿರುವುದು ಶ್ಲಾಘನೀಯ. ವೈದ್ಯ ಬಾಬುರಾವ್ ಕುಲಕರ್ಣಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಔಷಧ ವಿತರಣೆ ನಡೆದಿರುವುದು ಸಾಮಾಜಿಕ ಸೇವೆಯೇ ಆಗಿದೆ. ಈ ಕಾರ್ಯಕ್ರಮ ಪ್ರತಿ ವರ್ಷ ನಡೆದು, ಅಸ್ತಮಾ ಪೀಡಿತರು ಗುಣಮುಖವಾಗಲಿ’ ಎಂದ ಹಾರೈಸಿದರು.</p>.<p>ಶಿವಪ್ರಕಾಶ ಪಾಟೀಲ, ಡಾ. ಹರೀಶ ಕುಲಕರ್ಣಿ, ವಿ.ಜಿ. ಪಡಿಗೇರಿ, ನಿಂಗಪ್ಪ ಬನ್ನಿ, ಎಂ.ಆರ್. ಪಾಟೀಲ, ಕೃಷ್ಣ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>