<p><strong>ಲಕ್ಷ್ಮೇಶ್ವರ</strong>: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದೆ, ಜನರಿಗೆ ತೊಂದರೆಯಾಗುತ್ತಿದೆ.</p>.<p>ಉತಾರ, ಜಾತಿ, ಆದಾಯ, ಪಹಣಿ, ಆಧಾರ ಕಾರ್ಡ್ ತಿದ್ದುಪಡಿ ಸೇರಿದಂತೆ ಹಲವಾರು ಕೆಲಸಗಳಿಗಾಗಿ ನಿತ್ಯ ನೂರಾರು ಜನರು ತಹಶೀಲ್ದಾರ್ ಕಚೇರಿಗೆ ಬರುತ್ತಾರೆ. ಹೆಚ್ಚು ಜನರು ಬಂದಾಗ ಸರದಿಯಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ. ಅವರು ಕುಳಿತುಕೊಳ್ಳಲು ಕಚೇರಿ ಆವರಣದಲ್ಲಿ ಆಸನಗಳ ವ್ಯವಸ್ಥೆಯನ್ನೇ ಮಾಡಿಲ್ಲ.</p>.<p>ವೃದ್ಧರು, ಮಹಿಳೆಯರು, ಮಕ್ಕಳು ಕಚೇರಿಗೆ ಭೇಟಿ ನೀಡುತ್ತಾರೆ. ತಕ್ಷಣಕ್ಕೆ ಯಾವುದೇ ಕೆಲಸ ಮುಗಿಯುವುದಿಲ್ಲ. ಇಂಥ ಸಮಯದಲ್ಲಿ ಅವರು ಕುಳಿತುಕೊಳ್ಳಲು ಆಸನಗಳಿದ್ದು ತೀವ್ರ ಸಮಸ್ಯೆಗೆ ಕಾರಣವಾಗುತ್ತಿದೆ. ಹೆಚ್ಚು ಕಾಲ ನಿಲ್ಲಲು ಆಗದವರು ನೆಲದ ಮೇಲೆಯೇ ಕುಳಿತುಕೊಳ್ಳಬೇಕಿದೆ.</p>.<p>‘ತಹಶೀಲ್ದಾರ್ ಕಚೇರಿಗೆ ಬಂದರೆ ಗಂಟೆಗಟ್ಟಲೆ ನಿಂತು ಸುಸ್ತಾಗುತ್ತೇವೆ. ಕುಳಿತುಕೊಳ್ಳಲು ಒಂದೂ ಆಸನ ಇಲ್ಲ. ಆಸನಗಳ ವ್ಯವಸ್ಥೆ ಮಾಡಿದರೆ ಜನರಿಗೆ ಅನುಕೂಲವಾಗುತ್ತದೆ’ ಎಂದು ಮಕ್ಕಳ ಸಾಹಿತಿ ಪೂರ್ಣಾಜಿ ಖರಾಟೆ ಹೇಳಿದರು.</p>.<p>‘ತಾಲ್ಲೂಕಿನ 14 ಗ್ರಾಮ ಪಂಚಾಯ್ತಿಗಳ ಜನರು ವಿವಿಧ ಕೆಲಸಗಳಿಗೆ ಈ ಕಚೇರಿಗೆ ಬರಬೇಕು. ಆಸನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಲಕ್ಷ್ಮೇಶ್ವರ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಬಾಳೇಶ್ವರಮಠ ಹಾಗೂ ರಾಮಗೇರಿ ಗ್ರಾಮದ ನಿವಾಸಿ ಸೋಮಣ್ಣ ಬೆಟಗೇರಿ ಆಗ್ರಹಿಸಿದರು.</p>.<div><blockquote>ಕಚೇರಿ ಆವರಣದಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆದಷ್ಟು ಬೇಗ ಆಸನಗಳ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲಾಗುವುದು</blockquote><span class="attribution"> ವಾಸುದೇವ ಸ್ವಾಮಿ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದೆ, ಜನರಿಗೆ ತೊಂದರೆಯಾಗುತ್ತಿದೆ.</p>.<p>ಉತಾರ, ಜಾತಿ, ಆದಾಯ, ಪಹಣಿ, ಆಧಾರ ಕಾರ್ಡ್ ತಿದ್ದುಪಡಿ ಸೇರಿದಂತೆ ಹಲವಾರು ಕೆಲಸಗಳಿಗಾಗಿ ನಿತ್ಯ ನೂರಾರು ಜನರು ತಹಶೀಲ್ದಾರ್ ಕಚೇರಿಗೆ ಬರುತ್ತಾರೆ. ಹೆಚ್ಚು ಜನರು ಬಂದಾಗ ಸರದಿಯಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ. ಅವರು ಕುಳಿತುಕೊಳ್ಳಲು ಕಚೇರಿ ಆವರಣದಲ್ಲಿ ಆಸನಗಳ ವ್ಯವಸ್ಥೆಯನ್ನೇ ಮಾಡಿಲ್ಲ.</p>.<p>ವೃದ್ಧರು, ಮಹಿಳೆಯರು, ಮಕ್ಕಳು ಕಚೇರಿಗೆ ಭೇಟಿ ನೀಡುತ್ತಾರೆ. ತಕ್ಷಣಕ್ಕೆ ಯಾವುದೇ ಕೆಲಸ ಮುಗಿಯುವುದಿಲ್ಲ. ಇಂಥ ಸಮಯದಲ್ಲಿ ಅವರು ಕುಳಿತುಕೊಳ್ಳಲು ಆಸನಗಳಿದ್ದು ತೀವ್ರ ಸಮಸ್ಯೆಗೆ ಕಾರಣವಾಗುತ್ತಿದೆ. ಹೆಚ್ಚು ಕಾಲ ನಿಲ್ಲಲು ಆಗದವರು ನೆಲದ ಮೇಲೆಯೇ ಕುಳಿತುಕೊಳ್ಳಬೇಕಿದೆ.</p>.<p>‘ತಹಶೀಲ್ದಾರ್ ಕಚೇರಿಗೆ ಬಂದರೆ ಗಂಟೆಗಟ್ಟಲೆ ನಿಂತು ಸುಸ್ತಾಗುತ್ತೇವೆ. ಕುಳಿತುಕೊಳ್ಳಲು ಒಂದೂ ಆಸನ ಇಲ್ಲ. ಆಸನಗಳ ವ್ಯವಸ್ಥೆ ಮಾಡಿದರೆ ಜನರಿಗೆ ಅನುಕೂಲವಾಗುತ್ತದೆ’ ಎಂದು ಮಕ್ಕಳ ಸಾಹಿತಿ ಪೂರ್ಣಾಜಿ ಖರಾಟೆ ಹೇಳಿದರು.</p>.<p>‘ತಾಲ್ಲೂಕಿನ 14 ಗ್ರಾಮ ಪಂಚಾಯ್ತಿಗಳ ಜನರು ವಿವಿಧ ಕೆಲಸಗಳಿಗೆ ಈ ಕಚೇರಿಗೆ ಬರಬೇಕು. ಆಸನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಲಕ್ಷ್ಮೇಶ್ವರ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಬಾಳೇಶ್ವರಮಠ ಹಾಗೂ ರಾಮಗೇರಿ ಗ್ರಾಮದ ನಿವಾಸಿ ಸೋಮಣ್ಣ ಬೆಟಗೇರಿ ಆಗ್ರಹಿಸಿದರು.</p>.<div><blockquote>ಕಚೇರಿ ಆವರಣದಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆದಷ್ಟು ಬೇಗ ಆಸನಗಳ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲಾಗುವುದು</blockquote><span class="attribution"> ವಾಸುದೇವ ಸ್ವಾಮಿ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>