<p><strong>ಗದಗ</strong>: ಜಮೀನಿನ ಪೋಡಿ ಮಾಡಿಕೊಡಲು ₹2,500 ಲಂಚ ಪಡೆದ ಗದಗ ತಾಲ್ಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಮೋಜಣಿ ಡಾಟಾ ಎಂಟ್ರಿ ಅಪರೇಟರ್ ಕವಿತಾ ವಿ.ಚಿಕ್ಕಮಠ ಹಾಗೂ ಕಚೇರಿಯ ಹೊರಗುತ್ತಿಗೆ ಡಿ ಗ್ರೂಪ್ ನೌಕರ ನಾಗೇಶ ಬಡಿಗೇರ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಗಣೇಶ ಅಂದಪ್ಪ ಮುಂಡರಗಿ ಎಂಬುವರು ಗದಗ ತಾಲ್ಲೂಕಿನ ಹರ್ಲಾಪುರದಲ್ಲಿ 6 ಗುಂಟೆ ಜಮೀನು ಖರೀದಿಸಿದ್ದರು. ಅದು ಮೂಲ ಮಾಲೀಕರ ಜತೆಗೆ ಜಂಟಿ ಉತಾರ ಇದ್ದು, ಅದನ್ನು ಪೋಡಿ ಮಾಡಿಕೊಡುವಂತೆ ಕಚೇರಿಗೆ ಹೋಗಿದ್ದರು. ಈ ವೇಳೆ ಕವಿತಾ ಚಿಕ್ಕಮಠ ₹3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು.</p>.<p>‘ಗಣೇಶ ಅವರು ಮಂಗಳವಾರ ತಮ್ಮ ಕೆಲಸದ ಬಗ್ಗೆ ವಿಚಾರಿಸುವ ವೇಳೆ ಕವಿತಾ ಚಿಕ್ಕಮಠ ₹2,500 ಲಂಚ ಕೇಳಿದ್ದಾರೆ. ಅದನ್ನು ಅವರ ಹೇಳಿಕೆ ಮೇರೆಗೆ ಕಚೇರಿಯ ಜವಾನ ನಾಗೇಶ ಬಡಿಗೇರ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>ಧಾರಾವಾಡ ಲೋಕಾಯುಕ್ತ ಎಸ್ಪಿ ಎಸ್.ಟಿ.ಸಿದ್ಧಲಿಂಗಪ್ಪ ಮಾರ್ಗದರ್ಶನದಲ್ಲಿ ಗದಗ ಲೋಕಾಯುಕ್ತ ಠಾಣೆಯ ಇನ್ಸ್ಪೆಕ್ಟರ್ ಎಸ್.ಎಸ್.ತೇಲಿ ಹಾಗೂ ಸಿಬ್ಬಂದಿಯಾದ ಹಸನ್, ಗಾರ್ಗಿ, ಬಾರಡ್ಡಿ, ದಿಡಗೂರು, ಸಂಗನಾಳ, ಜವಳಿ, ಅಂಬಿಗೇರ, ಹಿರೇಮಠ, ನೈನಾಪುರ ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಜಮೀನಿನ ಪೋಡಿ ಮಾಡಿಕೊಡಲು ₹2,500 ಲಂಚ ಪಡೆದ ಗದಗ ತಾಲ್ಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಮೋಜಣಿ ಡಾಟಾ ಎಂಟ್ರಿ ಅಪರೇಟರ್ ಕವಿತಾ ವಿ.ಚಿಕ್ಕಮಠ ಹಾಗೂ ಕಚೇರಿಯ ಹೊರಗುತ್ತಿಗೆ ಡಿ ಗ್ರೂಪ್ ನೌಕರ ನಾಗೇಶ ಬಡಿಗೇರ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಗಣೇಶ ಅಂದಪ್ಪ ಮುಂಡರಗಿ ಎಂಬುವರು ಗದಗ ತಾಲ್ಲೂಕಿನ ಹರ್ಲಾಪುರದಲ್ಲಿ 6 ಗುಂಟೆ ಜಮೀನು ಖರೀದಿಸಿದ್ದರು. ಅದು ಮೂಲ ಮಾಲೀಕರ ಜತೆಗೆ ಜಂಟಿ ಉತಾರ ಇದ್ದು, ಅದನ್ನು ಪೋಡಿ ಮಾಡಿಕೊಡುವಂತೆ ಕಚೇರಿಗೆ ಹೋಗಿದ್ದರು. ಈ ವೇಳೆ ಕವಿತಾ ಚಿಕ್ಕಮಠ ₹3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು.</p>.<p>‘ಗಣೇಶ ಅವರು ಮಂಗಳವಾರ ತಮ್ಮ ಕೆಲಸದ ಬಗ್ಗೆ ವಿಚಾರಿಸುವ ವೇಳೆ ಕವಿತಾ ಚಿಕ್ಕಮಠ ₹2,500 ಲಂಚ ಕೇಳಿದ್ದಾರೆ. ಅದನ್ನು ಅವರ ಹೇಳಿಕೆ ಮೇರೆಗೆ ಕಚೇರಿಯ ಜವಾನ ನಾಗೇಶ ಬಡಿಗೇರ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>ಧಾರಾವಾಡ ಲೋಕಾಯುಕ್ತ ಎಸ್ಪಿ ಎಸ್.ಟಿ.ಸಿದ್ಧಲಿಂಗಪ್ಪ ಮಾರ್ಗದರ್ಶನದಲ್ಲಿ ಗದಗ ಲೋಕಾಯುಕ್ತ ಠಾಣೆಯ ಇನ್ಸ್ಪೆಕ್ಟರ್ ಎಸ್.ಎಸ್.ತೇಲಿ ಹಾಗೂ ಸಿಬ್ಬಂದಿಯಾದ ಹಸನ್, ಗಾರ್ಗಿ, ಬಾರಡ್ಡಿ, ದಿಡಗೂರು, ಸಂಗನಾಳ, ಜವಳಿ, ಅಂಬಿಗೇರ, ಹಿರೇಮಠ, ನೈನಾಪುರ ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>