<p><strong>ಲಕ್ಷ್ಮೇಶ್ವರ</strong>: ಪಟ್ಟಣದ ಎಪಿಎಂಸಿ ಆವರಣದಲ್ಲಿನ ಗೋಡೌನ್ಗಳ ಎದುರು ಮೆಕ್ಕೆಜೋಳ ಮಾರಾಟಕ್ಕೆ ರೈತರು ಭಾನುವಾರ ಮಧ್ಯರಾತ್ರಿಯಿಂದ ಚಳಿಯಲ್ಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದರು.</p>.<p>ಲಕ್ಷ್ಮೇಶ್ವರದಲ್ಲಿ ಮೆಕ್ಕೆಜೋಳದ ಬೆಂಬಲ ಬೆಲೆ ಖರೀದಿ ಈಗಾಗಲೇ ಆರಂಭವಾಗಿದೆ. ಮೊದಲು ನೋಂದಣಿ ಮಾಡಿಸಿರುವ ರೈತರು ಸೋಮವಾರ ಮೆಕ್ಕೆಜೋಳ ತರಲು ಅಧಿಕಾರಿಗಳು ತಿಳಿಸಿದ್ದರು. ಅದರಂತೆ ರೈತರು ಭಾನುವಾರ ಮಧ್ಯ ರಾತ್ರಿಯೇ ಬಂದು ಕಾಯುತ್ತಿದ್ದರು.</p>.<p>ಆದರೆ ಸೋಮವಾರ ಮಧ್ಯಾಹ್ನ 12 ಗಂಟೆ ಆದರೂ ಅಧಿಕಾರಿಗಳು ಮೆಕ್ಕೆಜೋಳ ತೆಗೆದುಕೊಳ್ಳಲು ಮುಂದಾಗಲಿಲ್ಲ. ಇದರಿಂದಾಗಿ ಕೆಲ ರೈತರು ಆಕ್ರೋಶಗೊಂಡಿದ್ದರು. ನಂತರ ಅಧಿಕಾರಿಗಳು ಎರಡ್ಮೂರು ದಿನಗಳಿಂದ ಖರೀದಿಸಿದ ಮೆಕ್ಕೆಜೋಳವನ್ನು ಜಿಲ್ಲಾ ಕೇಂದ್ರಕ್ಕೆ ಸಾಗಿಸಿದ ನಂತರ ಖರೀದಿಗೆ ಮುಂದಾದರು.</p>.<p>‘ನಾವು ಭಾನುವಾರ ರಾತ್ರಿಯೇ ಬಂದೇವಿ. ಆದರ ಸೋಮವಾರ ಮಧ್ಯಾಹ್ನ ಆದರೂ ಇನ್ನೂ ಗ್ವಾನಜ್ವಾಳ ತಗೊಂಡಿಲ್ರೀ’ ಎಂದು ಗೊಜನೂರು ಗ್ರಾಮದ ರೈತರು ಅಳಲು ತೋಡಿಕೊಂಡರು.</p>.<p>‘ರೈತರಿಗೆ ತೊಂದರೆ ಆಗದಂತೆ ಸಂಬಂಧಿಸಿದ ಅಧಿಕಾರಿಗಳು ಗೋವಿನಜೋಳ ಖರೀದಿಸಬೇಕು’ ಎಂದು ಭಾರತೀಯ ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಚನ್ನಪ್ಪ ಷಣ್ಮುಖಿ ಒತ್ತಾಯಿಸಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ಪಟ್ಟಣದ ಎಪಿಎಂಸಿ ಆವರಣದಲ್ಲಿನ ಗೋಡೌನ್ಗಳ ಎದುರು ಮೆಕ್ಕೆಜೋಳ ಮಾರಾಟಕ್ಕೆ ರೈತರು ಭಾನುವಾರ ಮಧ್ಯರಾತ್ರಿಯಿಂದ ಚಳಿಯಲ್ಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದರು.</p>.<p>ಲಕ್ಷ್ಮೇಶ್ವರದಲ್ಲಿ ಮೆಕ್ಕೆಜೋಳದ ಬೆಂಬಲ ಬೆಲೆ ಖರೀದಿ ಈಗಾಗಲೇ ಆರಂಭವಾಗಿದೆ. ಮೊದಲು ನೋಂದಣಿ ಮಾಡಿಸಿರುವ ರೈತರು ಸೋಮವಾರ ಮೆಕ್ಕೆಜೋಳ ತರಲು ಅಧಿಕಾರಿಗಳು ತಿಳಿಸಿದ್ದರು. ಅದರಂತೆ ರೈತರು ಭಾನುವಾರ ಮಧ್ಯ ರಾತ್ರಿಯೇ ಬಂದು ಕಾಯುತ್ತಿದ್ದರು.</p>.<p>ಆದರೆ ಸೋಮವಾರ ಮಧ್ಯಾಹ್ನ 12 ಗಂಟೆ ಆದರೂ ಅಧಿಕಾರಿಗಳು ಮೆಕ್ಕೆಜೋಳ ತೆಗೆದುಕೊಳ್ಳಲು ಮುಂದಾಗಲಿಲ್ಲ. ಇದರಿಂದಾಗಿ ಕೆಲ ರೈತರು ಆಕ್ರೋಶಗೊಂಡಿದ್ದರು. ನಂತರ ಅಧಿಕಾರಿಗಳು ಎರಡ್ಮೂರು ದಿನಗಳಿಂದ ಖರೀದಿಸಿದ ಮೆಕ್ಕೆಜೋಳವನ್ನು ಜಿಲ್ಲಾ ಕೇಂದ್ರಕ್ಕೆ ಸಾಗಿಸಿದ ನಂತರ ಖರೀದಿಗೆ ಮುಂದಾದರು.</p>.<p>‘ನಾವು ಭಾನುವಾರ ರಾತ್ರಿಯೇ ಬಂದೇವಿ. ಆದರ ಸೋಮವಾರ ಮಧ್ಯಾಹ್ನ ಆದರೂ ಇನ್ನೂ ಗ್ವಾನಜ್ವಾಳ ತಗೊಂಡಿಲ್ರೀ’ ಎಂದು ಗೊಜನೂರು ಗ್ರಾಮದ ರೈತರು ಅಳಲು ತೋಡಿಕೊಂಡರು.</p>.<p>‘ರೈತರಿಗೆ ತೊಂದರೆ ಆಗದಂತೆ ಸಂಬಂಧಿಸಿದ ಅಧಿಕಾರಿಗಳು ಗೋವಿನಜೋಳ ಖರೀದಿಸಬೇಕು’ ಎಂದು ಭಾರತೀಯ ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಚನ್ನಪ್ಪ ಷಣ್ಮುಖಿ ಒತ್ತಾಯಿಸಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>