ಕಾಲೇಜಿಗೆ ನೀಡಲಾದ ಪಿಂಕ್ ಶೌಚಾಲಯವನ್ನು ಬೇಗನೆ ನಿರ್ಮಾಣ ಮಾಡಲು ಕ್ರಮ ವಹಿಸಬೇಕು. ಕೊಠಡಿಗಳ ಕಾಮಗಾರಿಯನ್ನು ಶೀಘ್ರ ಮುಗಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ
ಮೇಗಲಮನಿ ಬೆಳ್ಳಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ
ಕಾಲೇಜಿಗೆ ಕಾಂಪೌಂಡ್ ನಿರ್ಮಾಣದ ಅಗತ್ಯವಿದೆ. ನೀರಿನ ಸಮಸ್ಯೆ ನಿವಾರಣೆಗೆ ಸ್ಥಳೀಯ ಪಂಚಾಯ್ತಿ ಕ್ರಮ ವಹಿಸುವುದು ಸೂಕ್ತ
ಬಸವರಾಜ ಗಿರಿತಮ್ಮಣ್ಣವರ ಪ್ರಾಚಾರ್ಯ ಫಕ್ಕಿರಪ್ಪ ಭರಮಪ್ಪ ಪೂಜಾರ ಸರ್ಕಾರಿ ಪಿಯು ಕಾಲೇಜು
ಮೂಲಸೌಕರ್ಯದ ಕೊರತೆ
ಬಹುತೇಕ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸುರಕ್ಷತೆ ಇಲ್ಲ. ಕಾಂಪೌಂಡ್ ನಿರ್ಮಾಣವಾಗದೆ ತರಗತಿ ಬಿಟ್ಟ ನಂತರ ಪಡ್ಡೆ ಹುಡುಗರ ಅಡ್ಡವಾಗಿ ಮಾರ್ಪಾಡಾಗುತ್ತಿವೆ. ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳನ್ನು ಒಡೆದು ಬಿಸಾಡುತ್ತಿದ್ದಾರೆ. ಮರುದಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಬಾಟಲಿಯ ಚೂರುಗಳನ್ನು ಆಯ್ದು ಹೊರಹಾಕುವ ದುಃಸ್ಥಿತಿ ಎದುರಾಗಿದೆ. ಶಿರಹಟ್ಟಿ ಪಟ್ಟಣದಲ್ಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀರಿನ ಅಭಾವ ತಲೆದೋರಿದೆ. ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳುತ್ತಿದ್ದು ತಿಂಗಳಿಗೆ ಸಾವಿರಾರು ರೂಪಾಯಿ ಖರ್ಚಾಗುತ್ತಿದೆ. ಬೆಳ್ಳಟ್ಟಿಯ ಸರ್ಕಾರಿ ಪಿಯು ಕಾಲೇಜಿನ ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿ ಕಾಮಗಾರಿ ಪ್ರಾರಂಭವಾಗಿದ್ದು ಅದು ಆಮೆಗತಿಯಲ್ಲಿ ಸಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.