<p><strong>ಗದಗ</strong>: ‘ಬೆಳಗಾವಿಯ ಚಳಿಗಾಲದ ಅಧಿವೇಶನದ ಕಲಾಪಗಳಲ್ಲಿ ಚರ್ಚೆಗಳು ನಡೆಯುತ್ತಿದ್ದರೂ ಅದರಿಂದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ನಯಾಪೈಸೆ ಪ್ರಯೋಜನ ಆಗಿಲ್ಲ. ಉತ್ತರ ಕರ್ನಾಟಕದವರನ್ನು ವಲಸಿಗರಂತೆ ನೋಡುವ ಮನೋಭಾವ ದೂರಾಗಬೇಕು’ ಎಂದು ಬಿಜೆಪಿ ಮುಖಂಡ ಶರಣ್ ಪಾಟೀಲ ಹೇಳಿದ್ದಾರೆ. </p>.<p>‘ಸದ್ಯ ಪ್ರಾರಂಭವಾಗಿರುವ ಕಲಾಪದಲ್ಲಿ ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಮೀಸಲಿಡುವುದಾಗಿ ಸರ್ಕಾರ ತಿಳಿಸಿದೆ. ಆದರೆ, ಪ್ರತಿವರ್ಷ ಇದೇ ರೀತಿ ಕಲಾಪದಲ್ಲಿ ಚರ್ಚೆಯ ವ್ಯರ್ಥಾಲಾಪ ನಡೆದಿದೆ ವಿನಃ; ಉತ್ತರ ಕರ್ನಾಟಕದ ಅಭಿವೃದ್ಧಿ ಇನ್ನೂ ಮರೀಚಿಕೆಯಾಗಿ ಉಳಿದಿದೆ’ ಎಂದು ಟೀಕಿಸಿದ್ದಾರೆ.</p>.<p>‘ಚರ್ಚೆಗಳು ಕೆಲಸಗಳಾಗಿ ಬದಲಾಗದ ಹೊರತು ಅವುಗಳಿಗೆ ಅರ್ಥ ಬರುವುದಿಲ್ಲ. ಉತ್ತರ ಕರ್ನಾಟಕದ ಜನರಿಗೆ ನಿಜವಾಗಿಯೂ ನ್ಯಾಯ ಕೊಡಿಸಲು ಎಲ್ಲರೂ ಪಕ್ಷ, ಸಿದ್ಧಾಂತ ಮರೆತು ಒಂದಾಗಬೇಕು. ಇಲ್ಲದಿದ್ದರೆ ರಾಜಕೀಯ ನಿರ್ಲಕ್ಷ್ಯ ಉತ್ತರ ಕರ್ನಾಟಕ ಭಾಗದ ಜನರ ಜನಾಂದೋಲನಕ್ಕೆ ಕಾರಣವಾಗಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಬೆಳಗಾವಿಯ ಚಳಿಗಾಲದ ಅಧಿವೇಶನದ ಕಲಾಪಗಳಲ್ಲಿ ಚರ್ಚೆಗಳು ನಡೆಯುತ್ತಿದ್ದರೂ ಅದರಿಂದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ನಯಾಪೈಸೆ ಪ್ರಯೋಜನ ಆಗಿಲ್ಲ. ಉತ್ತರ ಕರ್ನಾಟಕದವರನ್ನು ವಲಸಿಗರಂತೆ ನೋಡುವ ಮನೋಭಾವ ದೂರಾಗಬೇಕು’ ಎಂದು ಬಿಜೆಪಿ ಮುಖಂಡ ಶರಣ್ ಪಾಟೀಲ ಹೇಳಿದ್ದಾರೆ. </p>.<p>‘ಸದ್ಯ ಪ್ರಾರಂಭವಾಗಿರುವ ಕಲಾಪದಲ್ಲಿ ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಮೀಸಲಿಡುವುದಾಗಿ ಸರ್ಕಾರ ತಿಳಿಸಿದೆ. ಆದರೆ, ಪ್ರತಿವರ್ಷ ಇದೇ ರೀತಿ ಕಲಾಪದಲ್ಲಿ ಚರ್ಚೆಯ ವ್ಯರ್ಥಾಲಾಪ ನಡೆದಿದೆ ವಿನಃ; ಉತ್ತರ ಕರ್ನಾಟಕದ ಅಭಿವೃದ್ಧಿ ಇನ್ನೂ ಮರೀಚಿಕೆಯಾಗಿ ಉಳಿದಿದೆ’ ಎಂದು ಟೀಕಿಸಿದ್ದಾರೆ.</p>.<p>‘ಚರ್ಚೆಗಳು ಕೆಲಸಗಳಾಗಿ ಬದಲಾಗದ ಹೊರತು ಅವುಗಳಿಗೆ ಅರ್ಥ ಬರುವುದಿಲ್ಲ. ಉತ್ತರ ಕರ್ನಾಟಕದ ಜನರಿಗೆ ನಿಜವಾಗಿಯೂ ನ್ಯಾಯ ಕೊಡಿಸಲು ಎಲ್ಲರೂ ಪಕ್ಷ, ಸಿದ್ಧಾಂತ ಮರೆತು ಒಂದಾಗಬೇಕು. ಇಲ್ಲದಿದ್ದರೆ ರಾಜಕೀಯ ನಿರ್ಲಕ್ಷ್ಯ ಉತ್ತರ ಕರ್ನಾಟಕ ಭಾಗದ ಜನರ ಜನಾಂದೋಲನಕ್ಕೆ ಕಾರಣವಾಗಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>