<p><strong>ನರೇಗಲ್:</strong> ‘ತಂಬಾಕು ಸೇವನೆಯಿಂದ ಆರ್ಥಿಕ ನಷ್ಟ ಜತೆಗೆ ಹಲವಾರು ರೋಗಗಳಿಂದ ದುರ್ಬಲರಾಗುತ್ತೇವೆ. ಆದ್ದರಿಂದ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಪಣ ತೊಡಬೇಕು’ ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಹೇಳಿದರು.</p>.<p>ಸ್ಥಳೀಯ ಈಶ್ವರೀಯ ವಿಶ್ವವಿದ್ಯಾಲಯದಿಂದ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಸಾರಾಯಿ, ತಂಬಾಕು, ಸಿಗರೇಟ್ ಸೇರಿದಂತೆ ಮುಂತಾದ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿ ದುಃಸ್ಥಿತಿಗೆ ತಲುಪುತ್ತಾನೆ. ವ್ಯಸನಗಳನ್ನು ರೂಢಿ ಮಾಡಿಕೊಳ್ಳುವುದರಿಂದ ಆತ್ಮೀಯರು ನಮ್ಮನ್ನು ಕೀಳಾಗಿ ಕಾಣುತ್ತಾರೆ. ಆ ಕಾರಣಕ್ಕಾದರು ವ್ಯಸನಗಳ ದಾಸರಾಗಬಾರದು’ ಎಂದರು.</p>.<p>‘ವಿದ್ಯಾರ್ಥಿಗಳು ಓದು, ಕ್ರೀಡೆಗಳಲ್ಲಿ ಕ್ರಿಯಾಶೀಲರಾಗಿ ಆರೋಗ್ಯಪೂರ್ಣ ಬದುಕು ರೂಢಿಸಿಕೊಳ್ಳಬೇಕು. ಮನೆಯಲ್ಲಿ ದುಶ್ಚಟಗಳಿಗೆ ಅಂಟಿಕೊಂಡವರಿಗೆ ಅದರಿಂದಾಗುವ ದುಷ್ಪರಿಣಾಮಗಳ ತಿಳಿವಳಿಕೆ ನೀಡಲು ಮುಂದಾಗಬೇಕು’ ಎಂದರು.</p>.<p>ಸಂಚಾಲಕಿ ಬಿ.ಕೆ. ಸವಿತಕ್ಕ ಮಾತನಾಡಿ, ‘ದುಶ್ಚಟಗಳು ಆರಂಭದಲ್ಲಿ ಪ್ರೇರೇಪಿಸುತ್ತವೆ ನಂತರ ನಿಧಾನವಾಗಿ ವ್ಯಸನಿಯನ್ನು ನಾಶಪಡಿಸುತ್ತವೆ. ಆದ್ದರಿಂದ ತಂಬಾಕು ಸೇವನೆ ಬಹಳಷ್ಟು ಅಪಾಯಕಾರಿ’ ಎಂದರು.</p>.<p>ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಚೇರ್ಮನ್ ಮುತ್ತಪ್ಪ ನೂಲ್ಕಿ, ಬಸ್ ನಿಲ್ದಾಣದ ಸಾರಿಗೆ ನಿಯಂತ್ರಕ ಬಿ. ಎಸ್. ನಾಯಕರ, ಸಿದ್ದಣ್ಣ ಚವರಿ, ಎಲ್.ಆರ್. ರಡ್ಡೇರ, ಆರೋಗ್ಯ ಇಲಾಖೆಯ ಸಂಗೀತಾ ಗುಮ್ಮಗೋಳಮಠ, ಎಲ್.ಸಿ. ಹೊಸಮನಿ, ನಾಡಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್:</strong> ‘ತಂಬಾಕು ಸೇವನೆಯಿಂದ ಆರ್ಥಿಕ ನಷ್ಟ ಜತೆಗೆ ಹಲವಾರು ರೋಗಗಳಿಂದ ದುರ್ಬಲರಾಗುತ್ತೇವೆ. ಆದ್ದರಿಂದ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಪಣ ತೊಡಬೇಕು’ ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಹೇಳಿದರು.</p>.<p>ಸ್ಥಳೀಯ ಈಶ್ವರೀಯ ವಿಶ್ವವಿದ್ಯಾಲಯದಿಂದ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಸಾರಾಯಿ, ತಂಬಾಕು, ಸಿಗರೇಟ್ ಸೇರಿದಂತೆ ಮುಂತಾದ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿ ದುಃಸ್ಥಿತಿಗೆ ತಲುಪುತ್ತಾನೆ. ವ್ಯಸನಗಳನ್ನು ರೂಢಿ ಮಾಡಿಕೊಳ್ಳುವುದರಿಂದ ಆತ್ಮೀಯರು ನಮ್ಮನ್ನು ಕೀಳಾಗಿ ಕಾಣುತ್ತಾರೆ. ಆ ಕಾರಣಕ್ಕಾದರು ವ್ಯಸನಗಳ ದಾಸರಾಗಬಾರದು’ ಎಂದರು.</p>.<p>‘ವಿದ್ಯಾರ್ಥಿಗಳು ಓದು, ಕ್ರೀಡೆಗಳಲ್ಲಿ ಕ್ರಿಯಾಶೀಲರಾಗಿ ಆರೋಗ್ಯಪೂರ್ಣ ಬದುಕು ರೂಢಿಸಿಕೊಳ್ಳಬೇಕು. ಮನೆಯಲ್ಲಿ ದುಶ್ಚಟಗಳಿಗೆ ಅಂಟಿಕೊಂಡವರಿಗೆ ಅದರಿಂದಾಗುವ ದುಷ್ಪರಿಣಾಮಗಳ ತಿಳಿವಳಿಕೆ ನೀಡಲು ಮುಂದಾಗಬೇಕು’ ಎಂದರು.</p>.<p>ಸಂಚಾಲಕಿ ಬಿ.ಕೆ. ಸವಿತಕ್ಕ ಮಾತನಾಡಿ, ‘ದುಶ್ಚಟಗಳು ಆರಂಭದಲ್ಲಿ ಪ್ರೇರೇಪಿಸುತ್ತವೆ ನಂತರ ನಿಧಾನವಾಗಿ ವ್ಯಸನಿಯನ್ನು ನಾಶಪಡಿಸುತ್ತವೆ. ಆದ್ದರಿಂದ ತಂಬಾಕು ಸೇವನೆ ಬಹಳಷ್ಟು ಅಪಾಯಕಾರಿ’ ಎಂದರು.</p>.<p>ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಚೇರ್ಮನ್ ಮುತ್ತಪ್ಪ ನೂಲ್ಕಿ, ಬಸ್ ನಿಲ್ದಾಣದ ಸಾರಿಗೆ ನಿಯಂತ್ರಕ ಬಿ. ಎಸ್. ನಾಯಕರ, ಸಿದ್ದಣ್ಣ ಚವರಿ, ಎಲ್.ಆರ್. ರಡ್ಡೇರ, ಆರೋಗ್ಯ ಇಲಾಖೆಯ ಸಂಗೀತಾ ಗುಮ್ಮಗೋಳಮಠ, ಎಲ್.ಸಿ. ಹೊಸಮನಿ, ನಾಡಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>