<p><strong>ಗದಗ</strong>: ‘ಮೇ 27ರಿಂದ ಜೂನ್ 1ರವರೆಗೆ ವಿಧಿಸಿದ್ದ ಕಠಿಣ ಲಾಕ್ಡೌನ್ನಿಂದ ಉತ್ತಮ ಫಲಿತಾಂಶ ಸಿಕ್ಕಿದ್ದು, ಲಾಕ್ಡೌನ್ ಪೂರ್ವದಲ್ಲಿ ಶೇ 25ರಷ್ಟಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ಈಗ ಶೇ 19ಕ್ಕೆ ಕುಸಿದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.</p>.<p>ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಲಾಕ್ಡೌನ್ ಸಮಯದಲ್ಲಿ ಬಡವರ್ಗದ ಜನತೆಗೆ ತೊಂದರೆಯಾಗಿದೆ ನಿಜ. ಆ ಬಗ್ಗೆ ನೋವಿದೆ. ಆದರೆ, ಕಠಿಣ ಲಾಕ್ಡೌನ್ನಿಂದ ಉತ್ತಮ ಫಲಿತಾಂಶ ಸಿಕ್ಕಿದೆ. ಇದರಿಂದಾಗಿ, ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಮುಖಗೊಂಡಿದ್ದು, ಜಿಮ್ಸ್ ಸೇರಿದಂತೆ ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ಸಾಕಷ್ಟು ಆಮ್ಲಜನಕ ಸಹಿತ ಹಾಸಿಗೆಗಳು ಲಭ್ಯ ಇವೆ’ ಎಂದು ತಿಳಿಸಿದರು.</p>.<p>‘ಗದಗ ಜಿಲ್ಲೆಯಲ್ಲಿ 14,710 ಕೋವಿಶೀಲ್ಡ್, 4,540 ಕೋವ್ಯಾಕ್ಸಿನ್ ಲಸಿಕೆ ಲಭ್ಯ ಇದ್ದು, ಲಸಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ರಾಜ್ಯ ಸರ್ಕಾರ ಜಿಲ್ಲೆಗೆ 50 ಆಕ್ಸಿಜನ್ ಕಾನ್ಸನ್ಟ್ರೇಟರ್ ಒದಗಿಸಿದೆ. ಜತೆಗೆ ದಾನಿಗಳು 100 ಕಾನ್ಸನ್ಟ್ರೇಟರ್ಗಳನ್ನು ನೀಡಿದ್ದಾರೆ’ ಎಂದು ತಿಳಿಸಿದರು.</p>.<p>‘ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ₹17 ಲಕ್ಷ ವೆಚ್ಚದಲ್ಲಿ 27 ಕಾನ್ಸನ್ಟ್ರೇಟರ್ ಖರೀದಿಸಲಾಗಿದೆ. 125 ಆಕ್ಸಿಮೀಟರ್ ಒದಗಿಸಲಾಗುತ್ತಿದೆ. ಇದರ ಜೊತೆಗೆ ಸಣ್ಣ ಕೈಗಾರಿಕಾ ವಲಯದಿಂದ 15 ಬೈ ಪ್ಯಾಕ್ ಯಂತ್ರಗಳನ್ನು ಒದಗಿಸಲಾಗಿದೆ.<br />ಜಿಮ್ಸ್ ಆಸ್ಪತ್ರೆಯಲ್ಲಿ 250 ಹೊಸ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ತಮ್ಮ ಅನುದಾನದಲ್ಲಿ ₹12 ಲಕ್ಷ ಹಾಗೂ ಕರ್ನಾಟಕ ಮಿನರಲ್ ಕಾರ್ಪೋರೇಶನ್ನವರು ₹15 ಲಕ್ಷ ನೆರವು ನೀಡಿದ್ದಾರೆ. ಇದರ ಜತೆಗೆ 100 ಹಾಸಿಗೆ ಸಾಮರ್ಥ್ಯದ ಆಮ್ಲಜನಕ ಸಹಿತ ಹಾಸಿಗೆಯುಳ್ಳ ಆಸ್ಪತ್ರೆಯನ್ನು ಹೊಸದಾಗಿ ಸಜ್ಜುಗೊಳ್ಳಲಿದೆ’ ಎಂದು ತಿಳಿಸಿದರು.</p>.<p>ವಿಧಾನಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಎಡಿಸಿ ಸತೀಶ್ ಕುಮಾರ್ ಎಂ., ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.</p>.<p class="Briefhead"><strong>ಕೃಷಿ ಪರಿಕರಗಳ ಖರೀದಿಗೆ ಹೆಚ್ಚಿನ ಸಮಯ</strong></p>.<p>‘ಕಠಿಣ ನಿಯಮಗಳನ್ನು ಹೇರಿದ್ದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದ್ದು, ಇದೇ ನಿಯಮವನ್ನು ಜೂನ್ 7ರವರೆಗೆ ವಿಸ್ತರಿಸಲಾಗಿದೆ. ಆದರೆ, ಜೂನ್ 1 ಮತ್ತು 2ರಂದು ಮಾತ್ರ ದಿನಸಿ ಖರೀದಿ, ಮಾಂಸ ಮಾರಾಟಕ್ಕೆ ಬೆಳಿಗ್ಗೆ 6ರಿಂದ 10ರವರೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದರು.</p>.<p>ಹಣ್ಣು, ತರಕಾರಿಗಳನ್ನು ತಳ್ಳುವ ಗಾಡಿ, ಟಂಟಂ ಗಾಡಿ, ಆಟೊಗಳಲ್ಲಿ ಬೀದಿ ಬೀದಿ ಸುತ್ತಿ ಮಾರಾಟ ಮಾಡುವ ಅವಕಾಶ ಈಗಿನಂತೆಯೇ ಮುಂದುವರಿಯಲಿದೆ. ಹಾಲು, ಮೊಸರು ಖರೀದಿಗೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶ ನೀಡಲಾಗಿದೆ.</p>.<p>ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಕೃಷಿ ಚಟುವಟಿಕೆ ಕೈಗೊಳ್ಳಲು ರೈತರಿಗೆ ಬೀಜ ಗೊಬ್ಬರ , ಕೀಟನಾಶಕಗಳು ಹಾಗೂ ಯಂತ್ರೋಪಕರಣ ಖರೀದಿಗಾಗಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ವಿಸ್ತರಿಸಲಾಗಿದೆ.</p>.<p>ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಕೋವಿಡ್ ಮಾರ್ಗಸೂಚಿಗಳ ಅನುಸಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ವ್ಯವಹಾರಕ್ಕೆ ಅವಕಾಶ ನೀಡಲಾಗಿದೆ.</p>.<p>ಮದ್ಯದಂಗಡಿ, ಬಾರ್ ಅಂಡ್ ರೆಸ್ಟೊರೆಂಟ್ಗಳು, ನಗರ ಹಾಗೂ ಗ್ರಾಮೀಣ ಪ್ರದೇಶದ ಹೋಟೆಲ್ಗಳನ್ನು ತೆರೆಯಲು ಅವಕಾಶ ಇಲ್ಲ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಮೇ 27ರಿಂದ ಜೂನ್ 1ರವರೆಗೆ ವಿಧಿಸಿದ್ದ ಕಠಿಣ ಲಾಕ್ಡೌನ್ನಿಂದ ಉತ್ತಮ ಫಲಿತಾಂಶ ಸಿಕ್ಕಿದ್ದು, ಲಾಕ್ಡೌನ್ ಪೂರ್ವದಲ್ಲಿ ಶೇ 25ರಷ್ಟಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ಈಗ ಶೇ 19ಕ್ಕೆ ಕುಸಿದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.</p>.<p>ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಲಾಕ್ಡೌನ್ ಸಮಯದಲ್ಲಿ ಬಡವರ್ಗದ ಜನತೆಗೆ ತೊಂದರೆಯಾಗಿದೆ ನಿಜ. ಆ ಬಗ್ಗೆ ನೋವಿದೆ. ಆದರೆ, ಕಠಿಣ ಲಾಕ್ಡೌನ್ನಿಂದ ಉತ್ತಮ ಫಲಿತಾಂಶ ಸಿಕ್ಕಿದೆ. ಇದರಿಂದಾಗಿ, ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಮುಖಗೊಂಡಿದ್ದು, ಜಿಮ್ಸ್ ಸೇರಿದಂತೆ ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ಸಾಕಷ್ಟು ಆಮ್ಲಜನಕ ಸಹಿತ ಹಾಸಿಗೆಗಳು ಲಭ್ಯ ಇವೆ’ ಎಂದು ತಿಳಿಸಿದರು.</p>.<p>‘ಗದಗ ಜಿಲ್ಲೆಯಲ್ಲಿ 14,710 ಕೋವಿಶೀಲ್ಡ್, 4,540 ಕೋವ್ಯಾಕ್ಸಿನ್ ಲಸಿಕೆ ಲಭ್ಯ ಇದ್ದು, ಲಸಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ರಾಜ್ಯ ಸರ್ಕಾರ ಜಿಲ್ಲೆಗೆ 50 ಆಕ್ಸಿಜನ್ ಕಾನ್ಸನ್ಟ್ರೇಟರ್ ಒದಗಿಸಿದೆ. ಜತೆಗೆ ದಾನಿಗಳು 100 ಕಾನ್ಸನ್ಟ್ರೇಟರ್ಗಳನ್ನು ನೀಡಿದ್ದಾರೆ’ ಎಂದು ತಿಳಿಸಿದರು.</p>.<p>‘ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ₹17 ಲಕ್ಷ ವೆಚ್ಚದಲ್ಲಿ 27 ಕಾನ್ಸನ್ಟ್ರೇಟರ್ ಖರೀದಿಸಲಾಗಿದೆ. 125 ಆಕ್ಸಿಮೀಟರ್ ಒದಗಿಸಲಾಗುತ್ತಿದೆ. ಇದರ ಜೊತೆಗೆ ಸಣ್ಣ ಕೈಗಾರಿಕಾ ವಲಯದಿಂದ 15 ಬೈ ಪ್ಯಾಕ್ ಯಂತ್ರಗಳನ್ನು ಒದಗಿಸಲಾಗಿದೆ.<br />ಜಿಮ್ಸ್ ಆಸ್ಪತ್ರೆಯಲ್ಲಿ 250 ಹೊಸ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ತಮ್ಮ ಅನುದಾನದಲ್ಲಿ ₹12 ಲಕ್ಷ ಹಾಗೂ ಕರ್ನಾಟಕ ಮಿನರಲ್ ಕಾರ್ಪೋರೇಶನ್ನವರು ₹15 ಲಕ್ಷ ನೆರವು ನೀಡಿದ್ದಾರೆ. ಇದರ ಜತೆಗೆ 100 ಹಾಸಿಗೆ ಸಾಮರ್ಥ್ಯದ ಆಮ್ಲಜನಕ ಸಹಿತ ಹಾಸಿಗೆಯುಳ್ಳ ಆಸ್ಪತ್ರೆಯನ್ನು ಹೊಸದಾಗಿ ಸಜ್ಜುಗೊಳ್ಳಲಿದೆ’ ಎಂದು ತಿಳಿಸಿದರು.</p>.<p>ವಿಧಾನಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಎಡಿಸಿ ಸತೀಶ್ ಕುಮಾರ್ ಎಂ., ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.</p>.<p class="Briefhead"><strong>ಕೃಷಿ ಪರಿಕರಗಳ ಖರೀದಿಗೆ ಹೆಚ್ಚಿನ ಸಮಯ</strong></p>.<p>‘ಕಠಿಣ ನಿಯಮಗಳನ್ನು ಹೇರಿದ್ದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದ್ದು, ಇದೇ ನಿಯಮವನ್ನು ಜೂನ್ 7ರವರೆಗೆ ವಿಸ್ತರಿಸಲಾಗಿದೆ. ಆದರೆ, ಜೂನ್ 1 ಮತ್ತು 2ರಂದು ಮಾತ್ರ ದಿನಸಿ ಖರೀದಿ, ಮಾಂಸ ಮಾರಾಟಕ್ಕೆ ಬೆಳಿಗ್ಗೆ 6ರಿಂದ 10ರವರೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದರು.</p>.<p>ಹಣ್ಣು, ತರಕಾರಿಗಳನ್ನು ತಳ್ಳುವ ಗಾಡಿ, ಟಂಟಂ ಗಾಡಿ, ಆಟೊಗಳಲ್ಲಿ ಬೀದಿ ಬೀದಿ ಸುತ್ತಿ ಮಾರಾಟ ಮಾಡುವ ಅವಕಾಶ ಈಗಿನಂತೆಯೇ ಮುಂದುವರಿಯಲಿದೆ. ಹಾಲು, ಮೊಸರು ಖರೀದಿಗೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶ ನೀಡಲಾಗಿದೆ.</p>.<p>ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಕೃಷಿ ಚಟುವಟಿಕೆ ಕೈಗೊಳ್ಳಲು ರೈತರಿಗೆ ಬೀಜ ಗೊಬ್ಬರ , ಕೀಟನಾಶಕಗಳು ಹಾಗೂ ಯಂತ್ರೋಪಕರಣ ಖರೀದಿಗಾಗಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ವಿಸ್ತರಿಸಲಾಗಿದೆ.</p>.<p>ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಕೋವಿಡ್ ಮಾರ್ಗಸೂಚಿಗಳ ಅನುಸಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ವ್ಯವಹಾರಕ್ಕೆ ಅವಕಾಶ ನೀಡಲಾಗಿದೆ.</p>.<p>ಮದ್ಯದಂಗಡಿ, ಬಾರ್ ಅಂಡ್ ರೆಸ್ಟೊರೆಂಟ್ಗಳು, ನಗರ ಹಾಗೂ ಗ್ರಾಮೀಣ ಪ್ರದೇಶದ ಹೋಟೆಲ್ಗಳನ್ನು ತೆರೆಯಲು ಅವಕಾಶ ಇಲ್ಲ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>