<p><strong>ಮುಂಡರಗಿ:</strong> ಆರ್.ಆರ್.ನಂಬರ್ ಕೊಡಿಸಲು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಶುಲ್ಕ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಪಟ್ಟಣದ ಹೆಸ್ಕಾಂ ಗುತ್ತಿಗೆದಾರ ಸಿದ್ಧನಗೌಡ ಪಾಟೀಲ ಅವರನ್ನು ವಶಕ್ಕೆ ಪಡೆದರು.</p><p>ತಾಲ್ಲೂಕಿನ ಜಂತ್ಲಿ-ಶಿರೂರು ಗ್ರಾಮದ ರೈತ ಬಿ.ಕೆ.ಗೌರಿ ಅವರು ತಮ್ಮ ಸಂಬಂಧಿಕರ ಜಮೀನಿನ ಪಂಪ್ಸೆಟ್ ಆರ್.ಆರ್ ನಂಬರ್ ಮಾಡಿಕೊಡಲು ಗುತ್ತಿಗೆದಾರ ಸಿದ್ಧನಗೌಡ ಪಾಟೀಲ ಅವರಲ್ಲಿ ಕೋರಿದ್ದರು. ಗುತ್ತಿಗೆದಾರರು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ₹4 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪೂರ್ವದಲ್ಲಿ ಪ್ರಕರಣ ದಾಖಲಿಸಿದ್ದರು.</p>.<p>ಜಿಲ್ಲಾ ಲೋಕಾಯುಕ್ತ ಡಿ.ಎಸ್.ಪಿ. ವಿಜಯಕುಮಾರ ಬಿರಾದಾರ ನೇತೃತ್ವದ ತಂಡವು ಗುರುವಾರ ಶುಲ್ಕಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದ ಗುತ್ತಿಗೆದಾರನನ್ನು ವಶಕ್ಕೆ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ಆರ್.ಆರ್.ನಂಬರ್ ಕೊಡಿಸಲು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಶುಲ್ಕ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಪಟ್ಟಣದ ಹೆಸ್ಕಾಂ ಗುತ್ತಿಗೆದಾರ ಸಿದ್ಧನಗೌಡ ಪಾಟೀಲ ಅವರನ್ನು ವಶಕ್ಕೆ ಪಡೆದರು.</p><p>ತಾಲ್ಲೂಕಿನ ಜಂತ್ಲಿ-ಶಿರೂರು ಗ್ರಾಮದ ರೈತ ಬಿ.ಕೆ.ಗೌರಿ ಅವರು ತಮ್ಮ ಸಂಬಂಧಿಕರ ಜಮೀನಿನ ಪಂಪ್ಸೆಟ್ ಆರ್.ಆರ್ ನಂಬರ್ ಮಾಡಿಕೊಡಲು ಗುತ್ತಿಗೆದಾರ ಸಿದ್ಧನಗೌಡ ಪಾಟೀಲ ಅವರಲ್ಲಿ ಕೋರಿದ್ದರು. ಗುತ್ತಿಗೆದಾರರು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ₹4 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪೂರ್ವದಲ್ಲಿ ಪ್ರಕರಣ ದಾಖಲಿಸಿದ್ದರು.</p>.<p>ಜಿಲ್ಲಾ ಲೋಕಾಯುಕ್ತ ಡಿ.ಎಸ್.ಪಿ. ವಿಜಯಕುಮಾರ ಬಿರಾದಾರ ನೇತೃತ್ವದ ತಂಡವು ಗುರುವಾರ ಶುಲ್ಕಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದ ಗುತ್ತಿಗೆದಾರನನ್ನು ವಶಕ್ಕೆ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>