<p><strong>ಗದಗ: </strong>ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಗದುಗಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಶನಿವಾರ ಮುಳಗುಂದ ನಾಕಾ ವೃತ್ತದಲ್ಲಿ ಜಮಾಯಿಸಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೈಗೆ ಕಪ್ಪು ಪಟ್ಟಿ ಧರಿಸಿ ಆಗ್ರಹಿಸಿದರು. ಕನ್ನಡ ವಿರೋಧಿ ನಿಲುವು ಖಂಡಿಸಿ, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.</p>.<p>ರಾಜ್ಯ ಸರ್ಕಾರದ ಕನ್ನಡ ವಿರೋಧಿ ನಿಲುವು ಹಾಗೂ ಕನ್ನಡ ಸಂಘಟನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಶಾಸಕರವಿರುದ್ಧ ಘೋಷಣೆ ಕೂಗಿದರು.</p>.<p>ಕರವೇ ಕಾರ್ಯಕರ್ತರು ಕಿತ್ತೂರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಿದರು.</p>.<p>ಕೆಎಸ್ಆರ್ಟಿಸಿ ಬಸ್ಗಳು, ಲಾರಿ ಮತ್ತು ಇತರೆವಾಹನಗಳನ್ನು ತಡೆಯಲು ಯತ್ನಿಸಿದರು. ಅಂಗಡಿಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಲು ಪ್ರಯತ್ನಿಸಿದರು. ಆಗ ಪೊಲೀಸರು ಮಧ್ಯೆ ಪ್ರವೇಶಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದರಿಂದ ಕೆರಳಿದ ಕಾರ್ಯಕರ್ತರು ಪೊಲೀಸರ ವಿರುದ್ಧವೂ ಘೋಷಣೆ ಕೂಗಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲಿರುವ ಟಿಪ್ಪು ವೃತ್ತದಲ್ಲಿ ಕರವೇ ಕಾರ್ಯಕರ್ತರು ಬಸವರಾಜ ಪಾಟೀಲ ಯತ್ನಾಳ್ ಪ್ರತಿಕೃತಿ ದಹಿಸಲು ಪ್ರಯತ್ನಿಸಿದರು. ಆಗ ಕರವೇ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು. ವಿರೋಧದ ನಡುವೆಯೂ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸದಸ್ಯರು ರಸ್ತೆ ತಡೆಗೆ ಮುಂದಾದರು. ಹುಬ್ಬಳ್ಳಿ- ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ತಡೆದು ಸರ್ಕಾರಿ ಬಸ್ಗಳನ್ನು ಅಡ್ಡಗಟ್ಟಿದ 20ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪೊಲೀಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಜನಜೀವನ ಸಹಜ: ಶನಿವಾರ ನಡೆದ ಬಂದ್ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಬಂದ್ನಲ್ಲಿ ಪಾಲ್ಗೊಳ್ಳಲು ಜನ ಕೂಡ ಉತ್ಸಾಹ ತೋರಲಿಲ್ಲ. ಆರೋಗ್ಯ ಸೇವೆ, ಸಾರಿಗೆ, ತರಕಾರಿ ಮಾರುಕಟ್ಟೆ ಹಾಗೂ ಹೋಟೆಲ್ಗಳು ಎಂದಿನಂತೆ ಕಾರ್ಯಾಚರಿಸಿದ್ದರಿಂದ ಜನಜೀವನ ಸಹಜವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಗದುಗಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಶನಿವಾರ ಮುಳಗುಂದ ನಾಕಾ ವೃತ್ತದಲ್ಲಿ ಜಮಾಯಿಸಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೈಗೆ ಕಪ್ಪು ಪಟ್ಟಿ ಧರಿಸಿ ಆಗ್ರಹಿಸಿದರು. ಕನ್ನಡ ವಿರೋಧಿ ನಿಲುವು ಖಂಡಿಸಿ, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.</p>.<p>ರಾಜ್ಯ ಸರ್ಕಾರದ ಕನ್ನಡ ವಿರೋಧಿ ನಿಲುವು ಹಾಗೂ ಕನ್ನಡ ಸಂಘಟನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಶಾಸಕರವಿರುದ್ಧ ಘೋಷಣೆ ಕೂಗಿದರು.</p>.<p>ಕರವೇ ಕಾರ್ಯಕರ್ತರು ಕಿತ್ತೂರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಿದರು.</p>.<p>ಕೆಎಸ್ಆರ್ಟಿಸಿ ಬಸ್ಗಳು, ಲಾರಿ ಮತ್ತು ಇತರೆವಾಹನಗಳನ್ನು ತಡೆಯಲು ಯತ್ನಿಸಿದರು. ಅಂಗಡಿಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಲು ಪ್ರಯತ್ನಿಸಿದರು. ಆಗ ಪೊಲೀಸರು ಮಧ್ಯೆ ಪ್ರವೇಶಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದರಿಂದ ಕೆರಳಿದ ಕಾರ್ಯಕರ್ತರು ಪೊಲೀಸರ ವಿರುದ್ಧವೂ ಘೋಷಣೆ ಕೂಗಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲಿರುವ ಟಿಪ್ಪು ವೃತ್ತದಲ್ಲಿ ಕರವೇ ಕಾರ್ಯಕರ್ತರು ಬಸವರಾಜ ಪಾಟೀಲ ಯತ್ನಾಳ್ ಪ್ರತಿಕೃತಿ ದಹಿಸಲು ಪ್ರಯತ್ನಿಸಿದರು. ಆಗ ಕರವೇ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು. ವಿರೋಧದ ನಡುವೆಯೂ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸದಸ್ಯರು ರಸ್ತೆ ತಡೆಗೆ ಮುಂದಾದರು. ಹುಬ್ಬಳ್ಳಿ- ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ತಡೆದು ಸರ್ಕಾರಿ ಬಸ್ಗಳನ್ನು ಅಡ್ಡಗಟ್ಟಿದ 20ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪೊಲೀಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಜನಜೀವನ ಸಹಜ: ಶನಿವಾರ ನಡೆದ ಬಂದ್ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಬಂದ್ನಲ್ಲಿ ಪಾಲ್ಗೊಳ್ಳಲು ಜನ ಕೂಡ ಉತ್ಸಾಹ ತೋರಲಿಲ್ಲ. ಆರೋಗ್ಯ ಸೇವೆ, ಸಾರಿಗೆ, ತರಕಾರಿ ಮಾರುಕಟ್ಟೆ ಹಾಗೂ ಹೋಟೆಲ್ಗಳು ಎಂದಿನಂತೆ ಕಾರ್ಯಾಚರಿಸಿದ್ದರಿಂದ ಜನಜೀವನ ಸಹಜವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>