<p><strong>ನರಗುಂದ:</strong>‘ನೀರು,ಗಾಳಿ,ಆಹಾರ ಮನುಷ್ಯನಿಗೆ ಬೇಕಾಗಿರುವ ಅಗತ್ಯ ವಸ್ತುಗಳು. ಈ ವಿಷಯಗಳಲ್ಲಿ ರಾಜಕಾರಣ ಸಲ್ಲದು’ ಎಂದು ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣಪ್ರಭು ಸ್ವಾಮೀಜಿ ಹೇಳಿದರು.<br /><br />ಇಲ್ಲಿನ ಮಹದಾಯಿ ಧರಣಿ ವೇದಿಕೆಯಲ್ಲಿ ರಾಷ್ಟ್ರಪತಿಗೆ ರವಾನಿಸಲು ಸಿದ್ಧಪಡಿಸಲಾದ ದಯಾಮರಣ ಮರಣ ಪತ್ರಕ್ಕೆ ಸಹಿ ಹಾಕಿ ಅವರು ಮಾತನಾಡಿದರು.<br /><br />‘ಮಹದಾಯಿ ಹೋರಾಟ ಮೂರು ವರ್ಷ ಪೂರೈಸಿದರೂ, ಸರ್ಕಾರ ಇದನ್ನು ಬಹಳ ಲಘುವಾಗಿ ಪರಿಗಣಿಸಿದ್ದರಿಂದ ನೀರಿನ ಸಮಸ್ಯೆ ಬಗೆಹರಿದಿಲ್ಲ. ರೈತರಿಗೆ ಬೆಂಬಲವಾಗಿ ಮಠಾಧೀಶರೂ ದಯಾಮರಣಕ್ಕೆ ಸಿದ್ದರಾಗಿದ್ದೇವೆ. ರಾಷ್ಟ್ರಪತಿ ಇದನ್ನು ಮನಗಂಡು ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು’ ಎಂದರು.<br /><br />‘ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಸಂಸದರ ಪ್ರಾಮಾಣಿಕ ಪ್ರಯತ್ನ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನ ಮಾಡದಿದ್ದರೆ ರಾಜೀನಾಮೆಗೆ ಮುಂದಾಗಬೇಕು. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಲೇ ಇದುವರೆಗೆ ಸಮಸ್ಯೆ ಬಗೆಹರಿದಿಲ್ಲ’ ಎಂದರು.<br />‘ಕುಡಿಯುವ ನೀರಿಗಾಗಿ ನಡೆಯುತ್ತಿರುವ ಈ ಸುದೀರ್ಘ ಹೋರಾಟಕ್ಕೆ, ನೀರು ಮಾರಾಟ ಮಾಡುವ ಕಂಪೆನಿಗಳೂ ಬೆಂಬಲ ಸೂಚಿಸಿ, ರೈತರ ಜತೆಗೆ ಕೈಜೋಡಿಸಬೇಕು’ ಎಂದು ಆಗ್ರಹಿಸಿದರು.<br /><br />‘ಮಹದಾಯಿ ಹೋರಾಟಕ್ಕೆ ಮಠಾಧೀಶರ ಬೆಂಬಲ ಹಿಂದೆಯೂ ಇತ್ತು. ಈಗ ಅದು ಮತ್ತಷ್ಟು ಹೆಚ್ಚಾಗಿದೆ’ ಎಂದು ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.<br /><br />ವೀರಬಸಪ್ಪ ಹೂಗಾರ, ಎಚ್.ಎನ್.ಕೋರಿ, ಎಸ್.ಬಿ.ಜೋಗಣ್ಣವರ, ಈರಣ್ಣ ಗಡಗಿಶೆಟ್ಟರ, ಹನುಮಂತ ಸರನಾಯ್ಕರ, ಪರಶುರಾಮ ಜಂಬಗಿ ಹಾಗೂ ಹೋರಾಟ ಸಮಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong>‘ನೀರು,ಗಾಳಿ,ಆಹಾರ ಮನುಷ್ಯನಿಗೆ ಬೇಕಾಗಿರುವ ಅಗತ್ಯ ವಸ್ತುಗಳು. ಈ ವಿಷಯಗಳಲ್ಲಿ ರಾಜಕಾರಣ ಸಲ್ಲದು’ ಎಂದು ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣಪ್ರಭು ಸ್ವಾಮೀಜಿ ಹೇಳಿದರು.<br /><br />ಇಲ್ಲಿನ ಮಹದಾಯಿ ಧರಣಿ ವೇದಿಕೆಯಲ್ಲಿ ರಾಷ್ಟ್ರಪತಿಗೆ ರವಾನಿಸಲು ಸಿದ್ಧಪಡಿಸಲಾದ ದಯಾಮರಣ ಮರಣ ಪತ್ರಕ್ಕೆ ಸಹಿ ಹಾಕಿ ಅವರು ಮಾತನಾಡಿದರು.<br /><br />‘ಮಹದಾಯಿ ಹೋರಾಟ ಮೂರು ವರ್ಷ ಪೂರೈಸಿದರೂ, ಸರ್ಕಾರ ಇದನ್ನು ಬಹಳ ಲಘುವಾಗಿ ಪರಿಗಣಿಸಿದ್ದರಿಂದ ನೀರಿನ ಸಮಸ್ಯೆ ಬಗೆಹರಿದಿಲ್ಲ. ರೈತರಿಗೆ ಬೆಂಬಲವಾಗಿ ಮಠಾಧೀಶರೂ ದಯಾಮರಣಕ್ಕೆ ಸಿದ್ದರಾಗಿದ್ದೇವೆ. ರಾಷ್ಟ್ರಪತಿ ಇದನ್ನು ಮನಗಂಡು ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು’ ಎಂದರು.<br /><br />‘ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಸಂಸದರ ಪ್ರಾಮಾಣಿಕ ಪ್ರಯತ್ನ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನ ಮಾಡದಿದ್ದರೆ ರಾಜೀನಾಮೆಗೆ ಮುಂದಾಗಬೇಕು. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಲೇ ಇದುವರೆಗೆ ಸಮಸ್ಯೆ ಬಗೆಹರಿದಿಲ್ಲ’ ಎಂದರು.<br />‘ಕುಡಿಯುವ ನೀರಿಗಾಗಿ ನಡೆಯುತ್ತಿರುವ ಈ ಸುದೀರ್ಘ ಹೋರಾಟಕ್ಕೆ, ನೀರು ಮಾರಾಟ ಮಾಡುವ ಕಂಪೆನಿಗಳೂ ಬೆಂಬಲ ಸೂಚಿಸಿ, ರೈತರ ಜತೆಗೆ ಕೈಜೋಡಿಸಬೇಕು’ ಎಂದು ಆಗ್ರಹಿಸಿದರು.<br /><br />‘ಮಹದಾಯಿ ಹೋರಾಟಕ್ಕೆ ಮಠಾಧೀಶರ ಬೆಂಬಲ ಹಿಂದೆಯೂ ಇತ್ತು. ಈಗ ಅದು ಮತ್ತಷ್ಟು ಹೆಚ್ಚಾಗಿದೆ’ ಎಂದು ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.<br /><br />ವೀರಬಸಪ್ಪ ಹೂಗಾರ, ಎಚ್.ಎನ್.ಕೋರಿ, ಎಸ್.ಬಿ.ಜೋಗಣ್ಣವರ, ಈರಣ್ಣ ಗಡಗಿಶೆಟ್ಟರ, ಹನುಮಂತ ಸರನಾಯ್ಕರ, ಪರಶುರಾಮ ಜಂಬಗಿ ಹಾಗೂ ಹೋರಾಟ ಸಮಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>