<p><strong>ನವದೆಹಲಿ</strong>: ‘ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಮನವಿ ಮಾಡಿದರು. </p>.<p>ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಬುಧವಾರ ಭೇಟಿ ಮಾಡಿದ ಶಿವಕುಮಾರ್ ಅವರು ಈ ಬಗ್ಗೆ ಮನವಿ ಪತ್ರ ಸಲ್ಲಿಸಿದರು.</p>.<p>‘ಅಕ್ಟೋಬರ್ 9ರಂದು ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿತ್ತು. ಈ ವಿಚಾರವಾಗಿ ಇರುವ ಕಾನೂನು ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ರಾಜ್ಯವು ಅಕ್ಟೋಬರ್ 10 ಹಾಗೂ 16ರಂದು ಕೇಂದ್ರಕ್ಕೆ ವಿವರವಾದ ಸ್ಪಷ್ಟನೆ ನೀಡಿದೆ’ ಎಂದು ಅವರು ತಿಳಿಸಿದರು. </p>.<p>ಕಳಸಾ ನಾಲೆ ಯೋಜನೆಗೆ ಕಾಳಿ ಹಾಗೂ ಸಹ್ಯಾದ್ರಿ ಹುಲಿ ಸಂರಕ್ಷಣಾ ಪ್ರದೇಶದಲ್ಲಿ 10.68 ಹೆಕ್ಟೇರ್ ಅರಣ್ಯ ಅಗತ್ಯವಿದೆ. ಈ ಯೋಜನೆಯ ಮೂಲಕ ಕಾಡುಪ್ರಾಣಿಗಳಿಗೆ ಅಗತ್ಯ ನೀರು ಪೂರೈಸಲಾಗುತ್ತದೆ. ಹೀಗಾಗಿ ಈ ಯೋಜನೆಗೆ ಅನುಮತಿ ನೀಡಬೇಕು ಎಂದು ಕರ್ನಾಟಕದ ವನ್ಯಜೀವಿ ಸಂರಕ್ಷಣಾ ಮಂಡಳಿಯು ಸ್ಥಾಯಿ ಸಮಿತಿಗೆ ಮಾಹಿತಿ ನೀಡಿತ್ತು. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಸ್ಥಾಯಿ ಸಮಿತಿಯು ಕಾನೂನು ವಿಚಾರಗಳ ಬಗ್ಗೆ ಸ್ಪಷ್ಟನೆ ಕೋರಿತ್ತು. ಜತೆಗೆ ಪ್ರಾಧಿಕಾರದ ಅಭಿಪ್ರಾಯ ಸಲ್ಲಿಕೆಗೆ ಸೂಚಿಸಿತ್ತು. ಸ್ಥಾಯಿ ಸಮಿತಿಯ ಈ ಎಲ್ಲ ಮಾರ್ಗದರ್ಶನಗಳನ್ನು ಕರ್ನಾಟಕ ರಾಜ್ಯ ಪಾಲಿಸಿದೆ. ಆದರೂ ಈ ಯೋಜನೆಗೆ ಅನುಮತಿ ನೀಡುವುದು ವಿಳಂಬವಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. </p>.<p>‘ಕಳಸಾ ನಾಲೆ ಯೋಜನೆಗೆ ಅಗತ್ಯವಿರುವ ಅರಣ್ಯ ಪ್ರದೇಶ ಭೂಮಿಯ ಪ್ರಮಾಣವನ್ನು 258 ಹೆಕ್ಟೇರ್ ಪ್ರದೇಶದಿಂದ 26.9 ಹೆಕ್ಟೇರ್ ಪ್ರದೇಶಕ್ಕೆ ಇಳಿಸಲಾಗಿದೆ. ಬಂಡೂರಿ ನಾಲೆ ಯೋಜನೆಗೆ ಅಗತ್ಯವಿರುವ ಅರಣ್ಯ ಪ್ರದೇಶ ಭೂಮಿಯನ್ನು 243 ಹೆಕ್ಟೇರ್ನಿಂದ 28.44 ಹೆಕ್ಟೇರ್ಗೆ ಕಡಿಮೆ ಮಾಡಲಾಗಿದೆ. ಆ ಮೂಲಕ ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ತನ್ನ ಬದ್ಧತೆ ಪ್ರದರ್ಶಿಸಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರವು ವಿಳಂಬ ಮಾಡದೇ ಈ ಯೋಜನೆಗೆ ಅನುಮತಿ ನೀಡಬೇಕು’ ಎಂದು ಅವರು ಆಗ್ರಹಿಸಿದರು. </p>.<p>ಬಳಿಕ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾದ ಶಿವಕುಮಾರ್ ಅವರು ನೀರಾವರಿ ಯೋಜನೆಗಳಿಗೆ ಶೀಘ್ರ ಅನುಮೋದನೆ ಕೊಡಿಸುವಂತೆ ಕೋರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಮನವಿ ಮಾಡಿದರು. </p>.<p>ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಬುಧವಾರ ಭೇಟಿ ಮಾಡಿದ ಶಿವಕುಮಾರ್ ಅವರು ಈ ಬಗ್ಗೆ ಮನವಿ ಪತ್ರ ಸಲ್ಲಿಸಿದರು.</p>.<p>‘ಅಕ್ಟೋಬರ್ 9ರಂದು ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿತ್ತು. ಈ ವಿಚಾರವಾಗಿ ಇರುವ ಕಾನೂನು ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ರಾಜ್ಯವು ಅಕ್ಟೋಬರ್ 10 ಹಾಗೂ 16ರಂದು ಕೇಂದ್ರಕ್ಕೆ ವಿವರವಾದ ಸ್ಪಷ್ಟನೆ ನೀಡಿದೆ’ ಎಂದು ಅವರು ತಿಳಿಸಿದರು. </p>.<p>ಕಳಸಾ ನಾಲೆ ಯೋಜನೆಗೆ ಕಾಳಿ ಹಾಗೂ ಸಹ್ಯಾದ್ರಿ ಹುಲಿ ಸಂರಕ್ಷಣಾ ಪ್ರದೇಶದಲ್ಲಿ 10.68 ಹೆಕ್ಟೇರ್ ಅರಣ್ಯ ಅಗತ್ಯವಿದೆ. ಈ ಯೋಜನೆಯ ಮೂಲಕ ಕಾಡುಪ್ರಾಣಿಗಳಿಗೆ ಅಗತ್ಯ ನೀರು ಪೂರೈಸಲಾಗುತ್ತದೆ. ಹೀಗಾಗಿ ಈ ಯೋಜನೆಗೆ ಅನುಮತಿ ನೀಡಬೇಕು ಎಂದು ಕರ್ನಾಟಕದ ವನ್ಯಜೀವಿ ಸಂರಕ್ಷಣಾ ಮಂಡಳಿಯು ಸ್ಥಾಯಿ ಸಮಿತಿಗೆ ಮಾಹಿತಿ ನೀಡಿತ್ತು. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಸ್ಥಾಯಿ ಸಮಿತಿಯು ಕಾನೂನು ವಿಚಾರಗಳ ಬಗ್ಗೆ ಸ್ಪಷ್ಟನೆ ಕೋರಿತ್ತು. ಜತೆಗೆ ಪ್ರಾಧಿಕಾರದ ಅಭಿಪ್ರಾಯ ಸಲ್ಲಿಕೆಗೆ ಸೂಚಿಸಿತ್ತು. ಸ್ಥಾಯಿ ಸಮಿತಿಯ ಈ ಎಲ್ಲ ಮಾರ್ಗದರ್ಶನಗಳನ್ನು ಕರ್ನಾಟಕ ರಾಜ್ಯ ಪಾಲಿಸಿದೆ. ಆದರೂ ಈ ಯೋಜನೆಗೆ ಅನುಮತಿ ನೀಡುವುದು ವಿಳಂಬವಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. </p>.<p>‘ಕಳಸಾ ನಾಲೆ ಯೋಜನೆಗೆ ಅಗತ್ಯವಿರುವ ಅರಣ್ಯ ಪ್ರದೇಶ ಭೂಮಿಯ ಪ್ರಮಾಣವನ್ನು 258 ಹೆಕ್ಟೇರ್ ಪ್ರದೇಶದಿಂದ 26.9 ಹೆಕ್ಟೇರ್ ಪ್ರದೇಶಕ್ಕೆ ಇಳಿಸಲಾಗಿದೆ. ಬಂಡೂರಿ ನಾಲೆ ಯೋಜನೆಗೆ ಅಗತ್ಯವಿರುವ ಅರಣ್ಯ ಪ್ರದೇಶ ಭೂಮಿಯನ್ನು 243 ಹೆಕ್ಟೇರ್ನಿಂದ 28.44 ಹೆಕ್ಟೇರ್ಗೆ ಕಡಿಮೆ ಮಾಡಲಾಗಿದೆ. ಆ ಮೂಲಕ ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ತನ್ನ ಬದ್ಧತೆ ಪ್ರದರ್ಶಿಸಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರವು ವಿಳಂಬ ಮಾಡದೇ ಈ ಯೋಜನೆಗೆ ಅನುಮತಿ ನೀಡಬೇಕು’ ಎಂದು ಅವರು ಆಗ್ರಹಿಸಿದರು. </p>.<p>ಬಳಿಕ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾದ ಶಿವಕುಮಾರ್ ಅವರು ನೀರಾವರಿ ಯೋಜನೆಗಳಿಗೆ ಶೀಘ್ರ ಅನುಮೋದನೆ ಕೊಡಿಸುವಂತೆ ಕೋರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>