<p><strong>ಮುಂಡರಗಿ:</strong> ಪಟ್ಟಣದಲ್ಲಿ ಗೋವಿನಜೋಳ ಬೆಳೆ ಖರೀದಿ ಕೇಂದ್ರ ಪ್ರಾರಂಭ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ವಿವಿಧ ರೈತ ಸಂಘಟನೆ ಕಾರ್ಯಕರ್ತರು ಶನಿವಾರ ಗ್ರೇಡ್-2 ತಹಶೀಲ್ದಾರ್ ಕೆ.ರಾಧಾ ಅವರಿಗೆ ಮನವಿ ಸಲ್ಲಿಸಿದರು.</p>.<p>ಕೇಂದ್ರ ಸರ್ಕಾರ ಕ್ವಿಂಟಲ್ ಗೋವಿನಜೋಳಕ್ಕೆ ₹2,400 ಬೆಂಬಲ ಬೆಲೆ ಘೋಷಿಸಿದೆ. ಆದರೆ, ಇಲ್ಲಿಯ ಮಾರುಕಟ್ಟೆಯಲ್ಲಿ ಕೇವಲ ₹1,200ರಿಂದ ₹1,500 ಬೆಲೆಗೆ ಮಾರಾಟವಾಗುತ್ತಿದ್ದು, ರೈತರಿಗೆ ನಷ್ಟ ಉಂಟಾಗುತ್ತಿದೆ. ಸರ್ಕಾರ ತಕ್ಷಣ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕಿನ ಗಂಗಾಪುರ ಗ್ರಾಮದ ವಿಜಯ ನಗರ ಶುಗರ್ಸ್ ಸಕ್ಕರೆ ಕಾರ್ಖಾನೆಯು ಕಳೆದ ವರ್ಷ ಕ್ವಿಂಟಲ್ ಗೋವಿನಜೋಳಕ್ಕೆ ₹2,800 ಬೆಲೆ ನೀಡಿದ್ದರು. ಈ ವರ್ಷ ಮಧ್ಯವರ್ತಿಗಳ ಮೂಲಕ ರೈತರ ಬೆಲೆ ಖರೀದಿಸುತ್ತಿದ್ದು, ರೈತರಿಗೆ ಕಡಿಮೆ ಬೆಲೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸದಿದ್ದಲ್ಲಿ ಅ.27ರಂದು ಸಕ್ಕರೆ ಕಾರ್ಖಾನೆ, ತಹಶೀಲ್ದಾರ್ ಕಚೇರಿ ಹಾಗೂ ಎಪಿಎಂಸಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ರೈತರು ಎಚ್ಚರಿಸಿದರು.</p>.<p>ಜಿಲ್ಲಾ ಹಸಿರು ಸೇನೆ ಅಧ್ಯಕ್ಷ ಶಂಕರಗೌಡ ಜಾಯನಗೌಡರ, ಕೆ.ಎ. ದೇಸಾಯಿ, ಚಂದ್ರಕಾಂತ ಉಳ್ಳಾಗಡ್ಡಿ, ಮುದಿಯಪ್ಪ ತಿಪ್ಪಣ್ಣವರ, ದ್ರುವಕುಮಾರ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ಪಟ್ಟಣದಲ್ಲಿ ಗೋವಿನಜೋಳ ಬೆಳೆ ಖರೀದಿ ಕೇಂದ್ರ ಪ್ರಾರಂಭ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ವಿವಿಧ ರೈತ ಸಂಘಟನೆ ಕಾರ್ಯಕರ್ತರು ಶನಿವಾರ ಗ್ರೇಡ್-2 ತಹಶೀಲ್ದಾರ್ ಕೆ.ರಾಧಾ ಅವರಿಗೆ ಮನವಿ ಸಲ್ಲಿಸಿದರು.</p>.<p>ಕೇಂದ್ರ ಸರ್ಕಾರ ಕ್ವಿಂಟಲ್ ಗೋವಿನಜೋಳಕ್ಕೆ ₹2,400 ಬೆಂಬಲ ಬೆಲೆ ಘೋಷಿಸಿದೆ. ಆದರೆ, ಇಲ್ಲಿಯ ಮಾರುಕಟ್ಟೆಯಲ್ಲಿ ಕೇವಲ ₹1,200ರಿಂದ ₹1,500 ಬೆಲೆಗೆ ಮಾರಾಟವಾಗುತ್ತಿದ್ದು, ರೈತರಿಗೆ ನಷ್ಟ ಉಂಟಾಗುತ್ತಿದೆ. ಸರ್ಕಾರ ತಕ್ಷಣ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕಿನ ಗಂಗಾಪುರ ಗ್ರಾಮದ ವಿಜಯ ನಗರ ಶುಗರ್ಸ್ ಸಕ್ಕರೆ ಕಾರ್ಖಾನೆಯು ಕಳೆದ ವರ್ಷ ಕ್ವಿಂಟಲ್ ಗೋವಿನಜೋಳಕ್ಕೆ ₹2,800 ಬೆಲೆ ನೀಡಿದ್ದರು. ಈ ವರ್ಷ ಮಧ್ಯವರ್ತಿಗಳ ಮೂಲಕ ರೈತರ ಬೆಲೆ ಖರೀದಿಸುತ್ತಿದ್ದು, ರೈತರಿಗೆ ಕಡಿಮೆ ಬೆಲೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸದಿದ್ದಲ್ಲಿ ಅ.27ರಂದು ಸಕ್ಕರೆ ಕಾರ್ಖಾನೆ, ತಹಶೀಲ್ದಾರ್ ಕಚೇರಿ ಹಾಗೂ ಎಪಿಎಂಸಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ರೈತರು ಎಚ್ಚರಿಸಿದರು.</p>.<p>ಜಿಲ್ಲಾ ಹಸಿರು ಸೇನೆ ಅಧ್ಯಕ್ಷ ಶಂಕರಗೌಡ ಜಾಯನಗೌಡರ, ಕೆ.ಎ. ದೇಸಾಯಿ, ಚಂದ್ರಕಾಂತ ಉಳ್ಳಾಗಡ್ಡಿ, ಮುದಿಯಪ್ಪ ತಿಪ್ಪಣ್ಣವರ, ದ್ರುವಕುಮಾರ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>