ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಪ್ರಭಾ ಕಾಲುವೆಯಲ್ಲಿ ಕೊಚ್ಚಿ ಹೋದ ಯುವಕರು

ಪತ್ತೆಗೆ ಪೊಲೀಸ್‌, ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಯತ್ನ
Last Updated 24 ನವೆಂಬರ್ 2022, 4:04 IST
ಅಕ್ಷರ ಗಾತ್ರ

ನರಗುಂದ: ಪಟ್ಟಣದ ಯುವಕರಿಬ್ಬರು ಮಂಗಳವಾರ ಸವದತ್ತಿ ಮಾರ್ಗದಲ್ಲಿನ ಮಲಪ್ರಭಾ ಮುಖ್ಯ ಕಾಲುವೆಯಲ್ಲಿ (ನರಗುಂದ ಬ್ಲಾಕ್) ಕಾರು ತೊಳೆಯಲು ಹೋದ ಯುವಕರು ಕಾಲುವೆಯಲ್ಲಿ ಕಿಚ್ಚಿಕೊಂಡು ಹೋಗಿದ್ದು, ಬುಧವಾರವಾದರೂ ಪತ್ತೆಯಾಗಿಲ್ಲ.

ಕಾಲುವೆ ಪಾಲಾದ ಯುವಕರು ಪಟ್ಟಣದ ಸಿದ್ದನಬಾವಿ ಓಣಿಯ ಅರುಣ ಚನ್ನಪ್ಪ ಪಡೆಸೂರ (27), ಹಾಲಬಾವಿ ಕೆರೆ ಓಣಿಯ ಹನಮಂತ ನರಸಪ್ಪ ಮಜ್ಜಗಿ (20) ಎಂದು ಗುರುತಿಸಲಾಗಿದೆ.

ಮಂಗಳವಾರ ಸಾಯಂಕಾಲ ಕಾರು ತೊಳೆಯಲು ಕಾಲುವೆಗೆ ಇಳಿದಿದ್ದರು. ನೀರು ರಭಸದಿಂದ ಹರಿಯುತ್ತಿದ್ದರಿಂದ ಕೊಚ್ಚಿಕೊಂಡು ಹೋದರು ಎಂದು ತಿಳಿದು ಬಂದಿದೆ. ತಕ್ಷಣ ಕಾಲುವೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದರೂ ನೀರು ಕಡಿಮೆ ಮಾಡಲಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.

‘ತಾಲ್ಲೂಕಿನ ಜಮೀನುಗಳಿಗೆ ನವಿಲುತೀರ್ಥ ಜಲಾಶಯದಿಂದ ನರಗುಂದ ಶಾಖಾ ಕಾಲುವೆಗೆ 740 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ. ಇಷ್ಟು ಪ್ರಮಾಣದ ನೀರನ್ನು ದಿಢೀರ್‌ನೆ ಕಡಿಮೆಗೊಳಿಸಲು ಸಾಧ್ಯವಿಲ್ಲ. ಜತೆಗೆ ನೀರನ್ನು ಶೂನ್ಯ ಹಂತಕ್ಕೆ ಬುಧವಾರ ಬೆಳಿಗ್ಗೆ ತರಲಾಗಿದೆ ಅದು ಕಡಿಮೆಯಾಗಲು 10 ತಾಸುಗಳಾದರೂ ಬೇಕು’ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದರು.

ಯುವಕರ ಪತ್ತೆಗೆ ಹರಸಾಹಸ: ಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಯುವಕರ ಪತ್ತೆಗೆ ಅಗ್ನಿಶಾಮಕ ದಳ, ವಿವಿಧ ಗ್ರಾಮಗಳ ಈಜುಗಾರರು 24 ಗಂಟೆ ಹುಡುಕಿದರೂ ಹರಸಾಹಸ ಪಟ್ಟರೂ ದೊರೆತಿಲ್ಲ.

ಮುಗಿಲು ಮುಟ್ಟಿದ ಆಕ್ರಂದನ: ಎರಡು ಮನೆಗಳಲ್ಲಿ ನೀರವ ಮೌನ ಆವರಿಸಿದ್ದು ತಾಯಂದಿರ, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಯುವಕ ಹನುಮಂತ ಮಜ್ಜಗಿ ಒಬ್ಬನೆ ಪುತ್ರ, ನೀರು ಪಾಲಾಗಿದ್ದರಿಂದ ತಾಯಿ–ತಂದೆ ರೋಧನೆ ಹೇಳತೀರದಾಗಿದೆ.

ಸಿಪಿಐ ಮಲ್ಲಯ್ಯ ಮಠಪತಿ, ತಹಶೀಲ್ದಾರ್ ಎ.ಡಿ‌.ಅಮರವಾದಗಿ, ನೀರಾವರಿ ಇಲಾಖೆ ಅಧಿಕಾರಿಗಳು, ಪುರಸಭೆ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT