ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಪ್ರಭಾ ನದಿ ವ್ಯಾಪ್ತಿಯಲ್ಲಿ ಮತ್ತೆ ಪ್ರವಾಹ ಭೀತಿ: ಜನರ ಸ್ಥಳಾಂತರ

Last Updated 7 ಸೆಪ್ಟೆಂಬರ್ 2019, 10:47 IST
ಅಕ್ಷರ ಗಾತ್ರ

ಗದಗ: ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಜಿಲ್ಲೆಯ ಕೊಣ್ಣೂರು, ಹೊಳೆ ಆಲೂರು ವ್ಯಾಪ್ತಿಯಲ್ಲಿ ನದಿ ತುಂಬಿ ಹರಿಯುತ್ತಿದೆ.

ಜಲಾಶಯದಿಂದ ಹೆಚ್ಚಿನ ನೀರು ಬಿಡುವ ಸಾಧ್ಯತೆ ಇರುವುದರಿಂದ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇರುವ ನವಲಗುಂದ ತಾಲ್ಲೂಕಿನ ಲಕಮಾಪುರ, ಕೊಣ್ಣೂರು, ವಾಸನ ಹಾಗೂ ರೋಣ ತಾಲ್ಲೂಕಿನ ಮೆಣಸಗಿ, ಕುರುವಿನಕೊಪ್ಪ, ಅಮರಗೋಳ, ಹೊಳೆ ಹಡಗಲಿ, ಬಸರಕೋಡ, ಹೊಳೆ ಮಣ್ಣೂರ, ಗಾಡಗೋಳಿ ಗ್ರಾಮಗಳ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪ ವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ತಹಶೀಲ್ದಾರ್ ಕೆ. ಬಿ.ಕೋರಿಶೆಟ್ಟರ ನೆರೆಪೀಡಿತ ಸ್ಥಳಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಬ್ಬಳ್ಳಿ -ವಿಜಯಪುರ ರಾಷ್ಟ್ರೀಯ ಹೆದ್ದಾರಿಯು ಕೊಣ್ಣೂರು ಸೇತುವೆ ಬಳಿ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ರದ್ದುಗೊಳಿಸುವ ಸಾಧ್ಯತೆ ಇದೆ. ಜಿಲ್ಲೆಯ ಬಹುತೇಕ ಕಡೆ ಎರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT