<p><strong>ಬೆಳವಣಿಕಿ (ರೋಣ)</strong>: ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಈಚೆಗೆ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>2002-03ನೇ ಸಾಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ 2005-06ನೇ ಸಾಲಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. </p>.<p>ರೋಣ ಕ್ಷೇತ್ರದ ಶಿಕ್ಷಣಾಧಿಕಾರಿ ಎ.ಎನ್.ಕಂಬೋಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಜತೆಗೆ ಹೊರಗಿನ ಪ್ರಪಂಚದ ಜ್ಞಾನ, ಹೊಸ ಸಂಸ್ಕೃತಿ, ಅನುಭವ ತಿಳಿಸಿಕೊಟ್ಟ ಗುರುಗಳಿಗೆ ಗುರುವಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ’ ಎಂದರು.</p>.<p>ಸಭೆಯಲ್ಲಿ ಹಳೆ ವಿದ್ಯಾರ್ಥಿಗಳಾದ ಡಾ. ಸದಾಶಿವ ಭಿಕ್ಷಾವತಿಮಠ, ಹನಮಂತಪ್ಪ ಕರಿಲೆಕ್ಕನವರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. </p>.<p>ಪ್ರಭುಸ್ವಾಮಿ ಭಿಕ್ಷಾವತಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನಿವೃತ್ತಗೊಂಡ ಆರ್.ಎನ್.ಜಿಗಳೂರ ಹಾಗೂ 26 ಗುರುಗಳಿಗೆ ಸನ್ಮಾನ ಮಾಡಲಾಯಿತು.</p>.<p>ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಶಿಕ್ಷಕ ವಿ.ಎಸ್.ವಾಲಿ ಮಾತನಾಡಿ, ‘ಭಾರತದ ಸಂಸ್ಕೃತಿಯಲ್ಲಿ ತಂದೆ, ತಾಯಿ, ಗುರುಗಳಿಗೆ ಗೌರವ ಸ್ಥಾನವಿದೆ. ತಂದೆ ಕೊಟ್ಟ ಸಂಪತ್ತಿಗಿಂತ ಗುರು ನೀಡಿದ ವಿದ್ಯಾಸಂಪತ್ತಿನಿಂದ ವಿದ್ಯಾರ್ಥಿಗಳ ಜೀವನ ಉತ್ತುಂಗಕ್ಕೆ ಏರುತ್ತದೆ’ ಎಂದರು.</p>.<p>ಗುರುಮಲ್ಲಯ್ಯ ಪುರಾಣಿಕಮಠ ಸಾನ್ನಿಧ್ಯ ವಹಿಸಿದ್ದರು. ಎಸ್.ಜಿ.ದಾನಪ್ಪಗೌಡರ, ವೈ.ಡಿ.ಗಾಣಿಗೇರ, ಗೀತಾ ಶೆಟ್ಟರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹನಮಂತಗೌಡ ಹುಲ್ಲೂರ ಭಾಗವಹಿಸಿದ್ದರು.</p>.<p>ಶಾಲೆಯ ಹಳೆ ವಿದ್ಯಾರ್ಥಿಗಳು, ಶಿಕ್ಷಕರ ವೃಂದ, ಊರಿನ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು. ಆರಟ್ಟಿ ಸ್ವಾಗತಿಸಿದರು. ಡಾ.ಸದಾಶಿವ ಭಿಕ್ಷಾವತಿಮಠ ವಂದಿಸಿದರು. ಪಿ.ಪಿ.ಔದಕ್ಕನವರ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳವಣಿಕಿ (ರೋಣ)</strong>: ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಈಚೆಗೆ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>2002-03ನೇ ಸಾಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ 2005-06ನೇ ಸಾಲಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. </p>.<p>ರೋಣ ಕ್ಷೇತ್ರದ ಶಿಕ್ಷಣಾಧಿಕಾರಿ ಎ.ಎನ್.ಕಂಬೋಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಜತೆಗೆ ಹೊರಗಿನ ಪ್ರಪಂಚದ ಜ್ಞಾನ, ಹೊಸ ಸಂಸ್ಕೃತಿ, ಅನುಭವ ತಿಳಿಸಿಕೊಟ್ಟ ಗುರುಗಳಿಗೆ ಗುರುವಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ’ ಎಂದರು.</p>.<p>ಸಭೆಯಲ್ಲಿ ಹಳೆ ವಿದ್ಯಾರ್ಥಿಗಳಾದ ಡಾ. ಸದಾಶಿವ ಭಿಕ್ಷಾವತಿಮಠ, ಹನಮಂತಪ್ಪ ಕರಿಲೆಕ್ಕನವರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. </p>.<p>ಪ್ರಭುಸ್ವಾಮಿ ಭಿಕ್ಷಾವತಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನಿವೃತ್ತಗೊಂಡ ಆರ್.ಎನ್.ಜಿಗಳೂರ ಹಾಗೂ 26 ಗುರುಗಳಿಗೆ ಸನ್ಮಾನ ಮಾಡಲಾಯಿತು.</p>.<p>ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಶಿಕ್ಷಕ ವಿ.ಎಸ್.ವಾಲಿ ಮಾತನಾಡಿ, ‘ಭಾರತದ ಸಂಸ್ಕೃತಿಯಲ್ಲಿ ತಂದೆ, ತಾಯಿ, ಗುರುಗಳಿಗೆ ಗೌರವ ಸ್ಥಾನವಿದೆ. ತಂದೆ ಕೊಟ್ಟ ಸಂಪತ್ತಿಗಿಂತ ಗುರು ನೀಡಿದ ವಿದ್ಯಾಸಂಪತ್ತಿನಿಂದ ವಿದ್ಯಾರ್ಥಿಗಳ ಜೀವನ ಉತ್ತುಂಗಕ್ಕೆ ಏರುತ್ತದೆ’ ಎಂದರು.</p>.<p>ಗುರುಮಲ್ಲಯ್ಯ ಪುರಾಣಿಕಮಠ ಸಾನ್ನಿಧ್ಯ ವಹಿಸಿದ್ದರು. ಎಸ್.ಜಿ.ದಾನಪ್ಪಗೌಡರ, ವೈ.ಡಿ.ಗಾಣಿಗೇರ, ಗೀತಾ ಶೆಟ್ಟರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹನಮಂತಗೌಡ ಹುಲ್ಲೂರ ಭಾಗವಹಿಸಿದ್ದರು.</p>.<p>ಶಾಲೆಯ ಹಳೆ ವಿದ್ಯಾರ್ಥಿಗಳು, ಶಿಕ್ಷಕರ ವೃಂದ, ಊರಿನ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು. ಆರಟ್ಟಿ ಸ್ವಾಗತಿಸಿದರು. ಡಾ.ಸದಾಶಿವ ಭಿಕ್ಷಾವತಿಮಠ ವಂದಿಸಿದರು. ಪಿ.ಪಿ.ಔದಕ್ಕನವರ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>