<p><strong>ಗದಗ: </strong>ಪತ್ನಿಯನ್ನು ಸಂಶಯಿಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.</p>.<p>2019ರ ಮೇ 09ರಂದು ಹೆಂಡತಿಯ ತಲೆಗೆ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ್ದ ಗೋನಾಳ ಗ್ರಾಮದ ಆರೋಪಿ ರಮೇಶ ದುಂಡಪ್ಪ ತೇಲಿ, ಬಳಿಕ ತನ್ನ ಆರು ತಿಂಗಳ ಮಗನ ಕುತ್ತಿಗೆಯ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿ ಶಿರಹಟ್ಟಿ ಸಿಪಿಐ ಬಾಲಚಾಂದ್ರ ಡಿ. ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.</p>.<p>ಸಾಕ್ಷಿ ವಿಚಾರಣೆ ನಡೆಸಿದ ಗದಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಎಸ್.ಮಹಾಲಕ್ಷ್ಮೀ ನೇರಳೆ ಅವರು ಆರೋಪ ರುಜುವಾಗಿದ್ದರಿಂದ ರಮೇಶ ತೇಲಿಗೆ ಜೀವಾವಧಿ ಶಿಕ್ಷೆ ಹಾಗೂ ₹10 ಸಾವಿರ ತಂಡ ವಿಧಿಸಿತೀರ್ಪು ಪ್ರಕಟಿಸಿದ್ದಾರೆ. ದಂಡ ತುಂಬಲು ತಪ್ಪಿದಲ್ಲಿ ಮತ್ತೆ ಆರು ತಿಂಗಳು ಸಾದಾ ಶಿಕ್ಷೆ ವಿಧಿಸಿದ್ದರೆ.ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸವಿತಾ ಎಂ.ಶಿಗ್ಲಿ ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಪತ್ನಿಯನ್ನು ಸಂಶಯಿಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.</p>.<p>2019ರ ಮೇ 09ರಂದು ಹೆಂಡತಿಯ ತಲೆಗೆ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ್ದ ಗೋನಾಳ ಗ್ರಾಮದ ಆರೋಪಿ ರಮೇಶ ದುಂಡಪ್ಪ ತೇಲಿ, ಬಳಿಕ ತನ್ನ ಆರು ತಿಂಗಳ ಮಗನ ಕುತ್ತಿಗೆಯ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿ ಶಿರಹಟ್ಟಿ ಸಿಪಿಐ ಬಾಲಚಾಂದ್ರ ಡಿ. ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.</p>.<p>ಸಾಕ್ಷಿ ವಿಚಾರಣೆ ನಡೆಸಿದ ಗದಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಎಸ್.ಮಹಾಲಕ್ಷ್ಮೀ ನೇರಳೆ ಅವರು ಆರೋಪ ರುಜುವಾಗಿದ್ದರಿಂದ ರಮೇಶ ತೇಲಿಗೆ ಜೀವಾವಧಿ ಶಿಕ್ಷೆ ಹಾಗೂ ₹10 ಸಾವಿರ ತಂಡ ವಿಧಿಸಿತೀರ್ಪು ಪ್ರಕಟಿಸಿದ್ದಾರೆ. ದಂಡ ತುಂಬಲು ತಪ್ಪಿದಲ್ಲಿ ಮತ್ತೆ ಆರು ತಿಂಗಳು ಸಾದಾ ಶಿಕ್ಷೆ ವಿಧಿಸಿದ್ದರೆ.ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸವಿತಾ ಎಂ.ಶಿಗ್ಲಿ ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>