<p><strong>ಗದಗ</strong>: ಮಹಾತ್ಮ ಗಾಂಧೀಜಿಯವರ 78ನೇ ಪುಣ್ಯಸ್ಮರಣೆ ಹಾಗೂ ರಾಷ್ಟ್ರೀಯ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಸಬರಮತಿ ಆಶ್ರಮದಲ್ಲಿ ಗಾಂಧೀಜಿಗೆ ನಮನ ಸಲ್ಲಿಸಲಾಯಿತು.</p>.<p>ಶುಕ್ರವಾರ ಬೆಳಿಗ್ಗೆ 11ಕ್ಕೆ ಎರಡು ನಿಮಿಷಗಳ ಮೌನಾಚರಣೆ ಕೈಗೊಳ್ಳುವ ಮೂಲಕ ಹುತಾತ್ಮರಿಗೆ ನಮನ ಸಲ್ಲಿಸಲಾಯಿತು. ಈ ಮೂಲಕ ದೇಶದ ಸ್ವಾತಂತ್ರ್ಯ ಮತ್ತು ಏಕತೆಗಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ ಸೇರಿದಂತೆ ಎಲ್ಲಾ ಹುತಾತ್ಮರಿಗೆ ನಮನಗಳನ್ನು ಅರ್ಪಿಸಲಾಯಿತು.</p>.<p>ವಿಶ್ವವಿದ್ಯಾಲಯದ ಅಧಿಕಾರಿಗಳಾದ ಉಮೇಶ್ ಬಾರಕೇರ, ಮೃತ್ಯುಂಜಯ ಮೆಣಸಿನಕಾಯಿ, ಪ್ರೊ. ಗಿರೀಶ ದೀಕ್ಷಿತ್, ಎಂ.ಎಂ.ಮಂಜುನಾಥ್ ಹಾಗೂ ಸಬರಮತಿ ಆಶ್ರಮದ ಸಂಚಾಲಕ ಪ್ರಕಾಶ್ ಮಾಚೇನಹಳ್ಳಿ ಉಪಸ್ಥಿತರಿದ್ದರು.</p>.<p>ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಮಹಾತ್ಮ ಗಾಂಧೀಜಿಯವರ 78ನೇ ಪುಣ್ಯಸ್ಮರಣೆ ಹಾಗೂ ರಾಷ್ಟ್ರೀಯ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಸಬರಮತಿ ಆಶ್ರಮದಲ್ಲಿ ಗಾಂಧೀಜಿಗೆ ನಮನ ಸಲ್ಲಿಸಲಾಯಿತು.</p>.<p>ಶುಕ್ರವಾರ ಬೆಳಿಗ್ಗೆ 11ಕ್ಕೆ ಎರಡು ನಿಮಿಷಗಳ ಮೌನಾಚರಣೆ ಕೈಗೊಳ್ಳುವ ಮೂಲಕ ಹುತಾತ್ಮರಿಗೆ ನಮನ ಸಲ್ಲಿಸಲಾಯಿತು. ಈ ಮೂಲಕ ದೇಶದ ಸ್ವಾತಂತ್ರ್ಯ ಮತ್ತು ಏಕತೆಗಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ ಸೇರಿದಂತೆ ಎಲ್ಲಾ ಹುತಾತ್ಮರಿಗೆ ನಮನಗಳನ್ನು ಅರ್ಪಿಸಲಾಯಿತು.</p>.<p>ವಿಶ್ವವಿದ್ಯಾಲಯದ ಅಧಿಕಾರಿಗಳಾದ ಉಮೇಶ್ ಬಾರಕೇರ, ಮೃತ್ಯುಂಜಯ ಮೆಣಸಿನಕಾಯಿ, ಪ್ರೊ. ಗಿರೀಶ ದೀಕ್ಷಿತ್, ಎಂ.ಎಂ.ಮಂಜುನಾಥ್ ಹಾಗೂ ಸಬರಮತಿ ಆಶ್ರಮದ ಸಂಚಾಲಕ ಪ್ರಕಾಶ್ ಮಾಚೇನಹಳ್ಳಿ ಉಪಸ್ಥಿತರಿದ್ದರು.</p>.<p>ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>